ವಿಜಯ ದರ್ಪಣ ನ್ಯೂಸ್…
ರಾಜ್ಯದಲ್ಲಿ ಕರವೇ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗಾಗಿ ನಿರಂತರವಾಗಿ ಹೋರಾಟ :
ಕರವೇ ಅಧ್ಯಕ್ಷ ಮುನಿರಾಜ್(ಕುಟ್ಟಿ)

ಶಿಡ್ಲಘಟ್ಟ : ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕರವೇ ಕನ್ನಡಿಗರ ಹಕ್ಕುಗಳ ಧ್ವನಿ ಹಾಗು ರಕ್ಷಣೆಯಾಗಿ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ ಎಂದು ಕರವೇ ತಾಲ್ಲೂಕು ಅಧ್ಯಕ್ಷ ಮುನಿರಾಜ್(ಕುಟ್ಟಿ) ತಿಳಿಸಿದರು.
ನಗರದ ಸಿದ್ದಾರ್ಥನಗರ ಬಡಾವಣೆಯ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ 60ನೇ ವರ್ಷದ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಸಸಿ ನೆಡುವ ಮೂಲಕ ಆಚರಿಸಿ, ಶಾಲಾ ಮಕ್ಕಳಿಗೆ ಶೈಕ್ಷಣಿಕ ಸಾಮಾಗ್ರಿಗಳು ಹಾಗು ಸಿಹಿ ಹಂಚಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.










