--Ads--

ಕಲೆಗಳು ಬೆಳೆದರೆ ದೇಶದ ಸಂಸ್ಕೃತಿ ಬೆಳೆಯುತ್ತದೆ : ಶ್ರೀಮತಿ ನಮ್ರತ

On: June 15, 2026 3:05 AM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್…..

ಕಲೆಗಳು ಬೆಳೆದರೆ ದೇಶದ ಸಂಸ್ಕೃತಿ ಬೆಳೆಯುತ್ತದೆ : ಶ್ರೀಮತಿ ನಮ್ರತ

ಬೆಂಗಳೂರು : ಪದ್ಮಿನಿ ಪ್ರಿಯ ನೃತ್ಯ ಕಲಾ ಅಕಾಡೆಮಿಯು ತನ್ನ 15ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಗರದ ನಯನ ಸಭಾಂಗಣದಲ್ಲಿ ವಿದುಷಿ ಉಷಾ ಬಸಪ್ಪನವರ ನಿರ್ದೇಶನದಲ್ಲಿ ಹಮ್ಮಿಕೊಂಡಿದ್ದ “ನೃತ್ಯ ವೈಭವ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಶ್ರೀಮತಿ ಎನ್ ನಮ್ರತಾ ರವರು ನಮ್ಮ ಕಲೆಗಳು ಬೆಳೆದರೆ ದೇಶದ ಸಂಸ್ಕೃತಿ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.
ಯಾವುದೇ ಕಲೆಯನ್ನು ಮಕ್ಕಳು ಕಲಿತರೆ ಆ ಮಕ್ಕಳ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಆರೋಗ್ಯ ವೃದ್ಧಿಸುತ್ತದೆ. ಇದರಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿದುಷಿ, ಡಾ.ಬಿ. ವಿ. ಗೀತಾ ರವರು ಪ್ರಕೃತಿ ಮಾತಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪರಮೇಶ್ವರ್ ಅವರು ಸಾಧನಾ ನೃತ್ಯ ಶಾಲೆಯ ವಿದುಷಿ ಭಾವನಾ ಶಂಕರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸರಸ್ವತಿ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಖ್ಯಾತ ಜಾನಪದ ಗಾಯಕ ಡಾ. ಜೋಗಿಲ ಸಿದ್ದರಾಜುರವರು ಸ್ವಾಗತಿಸಿದರು. ವಿದುಷಿ ಮಂಜು ಭೈರವಿರವರು ಬಹಳ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಹಳ ಅಚ್ಚುಕಟ್ಟಾಗಿ ಶಾಸ್ತ್ರೀಯ ನೃತ್ಯ, ಸಮೂಹ ನೃತ್ಯ, ಜನಪದ ನೃತ್ಯವನ್ನು ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ