ವಿಜಯ ದರ್ಪಣ ನ್ಯೂಸ್….
ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು

ತಾಂಡವಪುರ ಜುಲೈ 9 ಶ್ರೀ ಭಗೀರಥ ಪೀಠದ ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಇಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಉಪ್ಪಾರ ಸಮಾಜದ ಅಭಿವೃದ್ಧಿ, ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
ಶ್ರೀಗಳ ಆಶೀರ್ವಾದ ಪಡೆದ ಸಚಿವರು ಕೆಲವು ಸಮಯ ಸಮಾಜದ ಸಮುದಾಯಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಮಾಜದ ಸಮುದಾಯದ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳು ಹಾಗೂ ಜನಪರ ಯೋಜನೆಗಳ ಕುರಿತು ಮಹಾಸ್ವಾಮಿಗಳು ಸಚಿವರೊಂದಿಗೆ ಅಭಿಪ್ರಾಯ ವಿನಿಮಯ ನಡೆಸಿದರು.









