ವಿಜಯ ದರ್ಪಣ ನ್ಯೂಸ್….
ಹಡಪದ ಅಪ್ಪಣ್ಣ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ

ತಾಂಡವಪುರ ಜುಲೈ 20 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆಯುವ ಹಡಪದ ಅಪ್ಪಣ್ಣ ಅವರ ಜಯಂತಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ಶಾಸಕ ದರ್ಶನ ಧ್ರುವನಾರಾಯಣ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
ಸಭೆಯಲ್ಲಿ ಮಾತಾಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಹಡಪದ ಅಪ್ಪಣ್ಣ ಜಯಂತಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಈ ಎರಡು ಕಾರ್ಯಕ್ರಮಗಳ ಯಶಸ್ವಿ ಸಂಬಂಧಿಸಿದ ರೂಪುರೇಷೆ, ಸಿದ್ಧತೆ ಹಾಗೂ ಅಗತ್ಯ ವ್ಯವಸ್ಥೆಗಳ ಕುರಿತು ಸಮಗ್ರವಾಗಿ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ , ತಹಸೀಲ್ದಾರ್ ಸ್ಮಿತಾ ರಾಮು , ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ , ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ. ಶಂಕರ್ , ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.











