ವಿಜಯ ದರ್ಪಣ ನ್ಯೂಸ್…..
ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

ತಾಂಡವಪುರ ಆಗಸ್ಟ್ 20 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣಾ ವಿಧಾನಸಭಾ ಕ್ಷೇತ್ರ ತಾಂಡವಪುರ ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಗ್ರಾಮದಲ್ಲಿ ಸದ್ಭಾವನ ದಿನ ಆಚರಿಸಲಾಯಿತು
ಸದ್ಭಾವನ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಸದ್ಭಾವನ ದಿನದ ವಿಧಿ ವಿಧಾನಗಳನ್ನು ಪ್ರತಿಜ್ಞ ವಿಧಿ ಬೋಧನೆ ಮಾಡಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಹಾಗೂ ಗ್ರಾಮದ ಯುವ ಮುಖಂಡ ಮಹೇಶ್ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದ ನಂಜಪ್ಪ ಶ್ರೀಕಂಠ ಹಾಗೂ ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದು ಬೋಧನೆ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಿದರು











