ವಿಜಯ ದರ್ಪಣ ನ್ಯೂಸ್…
ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

ತಾಂಡವಪುರ ಆಗಸ್ಟ್ 29 ಮೈಸೂರು ಜಿಲ್ಲೆಯ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವದ ಉದ್ಘಾಟನೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ವಾಮೀಜಿಗಳ ಸೇವೆಯನ್ನು ನೆನಪಿಸಿಕೊಂಡು ಅವರ ಸ್ಮರಣೆ ಮಾಡಿದರು.
ನಾನು ಮುಖ್ಯಮಂತ್ರಿಯಾದ ಮೇಲೆ ಮೈಸೂರು ಜಿಲ್ಲೆಯ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮೊದಲ ಕಾರ್ಯಕ್ರಮ ವಿವೇಕಾನಂದ ರವರ ಕಾರ್ಯಕ್ರಮ ಎರಡನೇದು ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನ್ನ ಭಾಗ್ಯ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ತಮ್ಮ ಹಿಂಗಿತವನ್ನು ವ್ಯಕ್ತಪಡಿಸಿ ಸಂತಸ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ಮಹೋತ್ಸವದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಗಳು, ಆದಿಚುಂಚನಗಿರಿ ಮಠದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಅವಧೂತ ದತ್ತ ಪೀಠದ ಶ್ರೀ ದತ್ತ ವಿಜಯಾನಂದ ತೀರ್ಥ ಮಹಾಸ್ವಾಮೀಜಿಗಳು, ಸಚಿವ ಶ್ರೀ ಪುಟ್ಟರಂಗಶೆಟ್ಟಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ, ಸಂಸದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀ ತನ್ವೀರ್ ಸೇಠ್ ಹರೀಶ್ ಗೌಡ ಡಿ ರವಿಶಂಕರ್ ಹಾಗೂ ಹಲವು ವಿವಿಧ ಮಠಾಧೀಶರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು










