ವಿಜಯ ದರ್ಪಣ ನ್ಯೂಸ್…
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ

ತಾಂಡವಪುರ ಆಗಸ್ಟ್ 31 ಮೈಸೂರಿನ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ಪೌರಡಳಿತ ಸಚಿವ ಕೆ ಸಿ ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ಇಂದು “ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು
ಸಭೆಯಲ್ಲಿ ಸಚಿವರು ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರು ವಿಧಾನಸಭಾ ಪರಿಷತ್ ಸದಸ್ಯರುಗಳ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಅಭಿಪ್ರಾಯ ಪಡೆದುಕೊಂಡ ಸಚಿವರು ಆದಷ್ಟು ಬೇಗನೆ ಕಾರ್ಯಕ್ರಮಗಳ ಪ್ರಗತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಸಭೆಯಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಪುಟ್ಟರಂಗಶೆಟ್ಟಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ , ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶಾಸಕರಾದ ಕೆ.ವೆಂಕಟೇಶ್ ಜಿ.ಟಿ.ದೇವೇಗೌಡ , ಡಿ.ರವಿಶಂಕರ್ ಅವರು, ಜಿ.ಡಿ. ಹರೀಶ್ ಗೌಡ , ಮಂತರ್ ಗೌಡ ಅವರು, ವಿಧಾನಸಭಾ ಪರಿಷತ್ ಸದಸ್ಯ ಹಾಗೂ ಹಿರಿಯ ಪತ್ರಕರ್ತರು ಆದ ಕೆ ಶಿವಕುಮಾರ್ ಸಿ.ಎನ್.ಮಂಜೇಗೌಡ ಡಾ.ಡಿ.ತಿಮ್ಮಯ್ಯ , ವಿವೇಕಾನಂದ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು










