--Ads--

ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದೇವರಾಜ್ ಉಪಾಧ್ಯಕ್ಷರಾಗಿ ಮಮತಾ ಮಂಜುನಾಥ್.

On: August 2, 2023 2:40 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್, ಪಿರಿಯಾಪಟ್ಟಣ

ಮೈಸೂರು ಜಿಲ್ಲೆ. ಆಗಸ್ಟ್ 02

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ  ಎರಡನೇ ಅವಧಿಗೆ ಬುಧವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೋಗನಹಳ್ಳಿ ಪಿ. ದೇವರಾಜು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ. ಎಸ್.ಸದಾನಂದ ನಾಮಪತ್ರ
ಸಲ್ಲಿಸಿದರು.


ಜೋಗನಹಳ್ಳಿ. ಪಿ. ದೇವರಾಜ್ 12 ಮತಗಳನ್ನು ಪಡೆದು ಅಧ್ಯಕ್ಷರಾದರು. ಪ್ರತಿಸ್ಪರ್ಧಿ ಕೆ. ಎಸ್.ಸದಾನಂದ ರವರು 9 ಮತಗಳನ್ನು ಪಡೆದು ಪರಾಭವ ಗೊಂಡರು.

ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಮತಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾಕ್ಟರ್ ಸೋಮಯ್ಯ ಘೋಷಣೆ ಮಾಡಿದರು.

ಗೆಲುವು ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಹಿಸಿದರು.

ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ  ಶುಭ ಹಾರೈಸಿದರು.

ನೂತನ ಅಧ್ಯಕ್ಷ ಜೋಗನಹಳ್ಳಿ ಪಿ. ದೇವರಾಜ್ ಮಾತನಾಡಿ ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ಗ್ರಾಮ ಪಂಚಾಯತಿ ಸದಸ್ಯರಿಗೆ ಪರೋಕ್ಷವಾಗಿ ಸಹಕಾರ ನೀಡಿದ ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ರವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ಸೇವಾ ಅವಧಿಯಲ್ಲಿ ಸದಸ್ಯರ ಸಹಕಾರ ಪಡೆದು ಪಂಚಾಯಿತಿ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಸದಸ್ಯರಾದ ದೀಪೂ, ಶಿವಕುಮಾರ್, ನಂದಿನಿ, ಬಸವರಾಜು, ಮಂಜುನಾಥ್, ಪವಿತ್ರ, ರಂಜಿತಾ, ಜಗದೀಶ್, ಜ್ಯೋತಿ, ರುಕ್ಕಣ್ಣ, ರಮೇಶ್, ಸರೋಜಾ, ಮಾನಸಾ, ಸರಿತಾ, ಚಂದ್ರ, ರಾಣಿ, ತೋಪೆಗೌಡ, ಪಿಡಿಒ ದೇವರಾಜೇಗೌಡ, ಸಿಬ್ಬಂದಿ ಸೀನಾ, ಸತ್ಯಣ್ಣ, ಮುಖಂಡರಾದ ರಹಮದ್ ಜಾನ್ ಬಾಬು, ಪುಟ್ಟರಾಜು, ಬಿ.ಟಿ ಸಣ್ಣಸ್ವಾಮಿಗೌಡ, ಈರೇಗೌಡ, ಲೋಕೇಶ್, ರಮೇಶ್, ರಾಜಶೇಖರಯ್ಯ, ಗೋವಿಂದೇಗೌಡ, ಸೋಮೇಗೌಡ, ಮಲ್ಲೇಶ್, ಕುಮಾರ್, ರುಕ್ಮಗಂದಾಚಾರ್, ಶಂಕರ್,ವೆಂಕಟೇಶ್ ಇದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ

ಹಿರಿಯ ಕಾಂಗ್ರೆಸ್ ಮುಖಂಡ ಎಲ್ಐಸಿ ಪ್ರತಿನಿಧಿ ಬಿ ಎಂ ನಾಗರಾಜ್ ದಣಿ ಇನ್ನಿಲ್ಲ