--Ads--

ಸಿಎಂ ಡಿ.ಕೆ. ಶಿವಕುಮಾರ್ ಸರ್ಕಾರದ 100 ದಿನಗಳ ಸಂಭ್ರಮ – ವಿದ್ಯುತ್ ದೀಪಗಳಿಂದ ಝಗಮಗಿಸಿದ ಕೃಷ್ಣರಾಜಸಾಗರ”

On: September 11, 2026 8:04 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

“ಶತದಿನದ ಸಂಭ್ರಮ: ಬಣ್ಣ ಬಣ್ಣದ ದೀಪಾಲಂಕಾರದಲ್ಲಿ ಕಂಗೊಳಿಸಿದ ಕೆ.ಆರ್.ಎಸ್ ಅಣೆಕಟ್ಟು”

ಸಿಎಂ ಡಿ.ಕೆ. ಶಿವಕುಮಾರ್ ಸರ್ಕಾರದ 100 ದಿನಗಳ ಸಂಭ್ರಮ – ವಿದ್ಯುತ್ ದೀಪಗಳಿಂದ ಝಗಮಗಿಸಿದ ಕೃಷ್ಣರಾಜಸಾಗರ”

“100 ದಿನಗಳ ಸಾಧನೆಗೆ ಸಾಕ್ಷಿಯಾದ ಕೆ.ಆರ್.ಎಸ್ – ರಾತ್ರಿ ಬೆಳಗಿದ ದೀಪಾಲಂಕಾರಕ್ಕೆ ಪ್ರವಾಸಿಗರ ಫಿದಾ”

ಶತದಿನದ ಸಂಭ್ರಮಕ್ಕೆ ಬಣ್ಣಬಣ್ಣದ ದೀಪಾಲಂಕಾರದಲ್ಲಿ ಕಂಗೊಳಿಸಿದ ಕೆ.ಆರ್.ಎಸ್

ಮಂಡ್ಯ, ಸೆ.10: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ 100 ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಶತದಿನೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಜಿಲ್ಲೆಯ ಹೆಮ್ಮೆಯ ಕೃಷ್ಣರಾಜಸಾಗರ (ಕೆ.ಆರ್.ಎಸ್.) ಜಲಾಶಯಕ್ಕೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಕೆ.ಆರ್.ಎಸ್. ಅಣೆಕಟ್ಟಿನ ಮುಖ್ಯ ಗೋಡೆ, ಉದ್ಯಾನವನ ಸೇರಿದಂತೆ ವಿವಿಧ ಭಾಗಗಳಲ್ಲಿ ಬಣ್ಣಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು, ರಾತ್ರಿ ವೇಳೆಯಲ್ಲಿ ಜಲಾಶಯವು ಕಂಗೊಳಿಸುವಂತೆ ವಿಶೇಷವಾಗಿ ಅಲಂಕರಿಸಲಾಗಿದೆ. ಕೆಂಪು, ಹಸಿರು, ನೀಲಿ, ಹಳದಿ ಸೇರಿದಂತೆ ವಿವಿಧ ಬಣ್ಣಗಳ ದೀಪಗಳ ಬೆಳಕಿನಲ್ಲಿ ಅಣೆಕಟ್ಟಿನ ಸೌಂದರ್ಯ ಮತ್ತಷ್ಟು ಹೆಚ್ಚಿದ್ದು, ರಾತ್ರಿ ಹೊತ್ತಲ್ಲಿ ನೋಡಲು ಎರಡು ಕಣ್ಣು ಸಾಲದು ಎಂಬಂತಾಗಿದೆ.

ಶತದಿನೋತ್ಸವದ ಅಂಗವಾಗಿ ಮಾಡಿರುವ ಈ ವಿಶೇಷ ದೀಪಾಲಂಕಾರದಿಂದ ಕೆ.ಆರ್.ಎಸ್. ಜಲಾಶಯದ ಸುತ್ತಮುತ್ತ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಕೆ.ಆರ್.ಎಸ್. ಜಲಾಶಯದ ಈ ದೀಪಾಲಂಕಾರ ಪ್ರವಾಸಿಗರು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಜನರು ಕುಟುಂಬ ಸಮೇತರಾಗಿ ಆಗಮಿಸಿ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ