--Ads--

ಗಣೇಶ ಚತುರ್ಥಿ ದಿನ ಆನೆ, ಹುಲಿಗೆ ರೈತರು ಬಲಿ ಪ್ರತ್ಯೇಕ ಪ್ರಕರಣದಲ್ಲಿ ವನ್ಯಜೀವಿಯಿಂದ ಹತ ರಾಧಾ ಕುಟುಂಬಸ್ಥರ ಗೋಳಾಟ

On: September 15, 2026 6:40 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಗಣೇಶ ಚತುರ್ಥಿ ದಿನ ಆನೆ, ಹುಲಿಗೆ ರೈತರು ಬಲಿ : ಪ್ರತ್ಯೇಕ ಪ್ರಕರಣದಲ್ಲಿ ವನ್ಯಜೀವಿಯಿಂದ ಹತರಾದ ಕುಟುಂಬಸ್ಥರ ಗೋಳಾಟ

ತಾಂಡವಪುರ ಸೆಪ್ಟೆಂಬರ್ 15 ಗೌರಿ ಗಣೇಶ ಹಬ್ಬದ ದಿನ ರೈತರಿಬ್ಬರಿಗೆ ಆನೆ ಮತ್ತು ಹುಲಿಗಳು ದುಸ್ವಪ್ನವಾಗಿ ಕಾಡಿದ್ದು, ಪ್ರತ್ಯೇಕ ಪ್ರಕರಣದಲ್ಲಿ ಈ ದಾಳಿಯಲ್ಲಿ ಇಬ್ಬರು ವಯರ್ರುದ್ದರೂ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಚಾಮರಾಜನಗರ: ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ಬಸವಣ್ಣ (65) ಎಂಬುವರು ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಹುಲಿ ದಾಳಿ ನಡೆಸಿದ್ದು ಕೊಂದು ಹಾಕಿದೆ. ಅರ್ಧ ದೇಹವನ್ನು ತಿಂದಿದ್ದು, ಉಳಿದರ್ಧ ದೇಹವನ್ನು ಸಮೀಪದ ಕಬ್ಬಿನ ತೋಟಕ್ಕೆ ಎಳೆದೊಯ್ದಿದೆ.
ರಾತ್ರಿಯಾದರೂ ಬಸವಣ್ಣ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಜಮೀನಿಗೆ ತೆರಳಿ ನೋಡಿದಾಗ ಹುಲಿ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.

ಕಾಡಾನೆ ದಾಳಿಗೆ ರೈತ ಬಲಿ
ಕಾಡಾನೆ ದಾಳಿ ನಡೆಸಿ ರೈತನನ್ನು ಬಲಿ ಪಡೆದ ಘಟನೆ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಓಂಕಾರ್ ಅರಣ್ಯ ವಲಯದ ಕೋಟಕೆರೆ ಗ್ರಾಮದ ಜನ್ನೂರನಾಯಕ (68) ಮೃತ ದುರ್ದೈವಿ. ಇವರು ತಮ್ಮ ಜಮೀನಿನಲ್ಲಿ ಹಸುಗಳನ್ನು ಕಟ್ಟಿಹಾಕುತ್ತಿದ್ದ ವೇಳೆ ಏಕಾಏಕಿ ಕಾಡಾನೆಯೊಂದು ದಾಳಿ ನಡೆಸಿದ್ದು, ಸೊಂಡಲಿ ಬಲವಾಗಿ ತಿವಿದು ಗಂಭೀರ ಗಾಯಗೊಳಿಸಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಜನ್ನೂರ ನಾಯಕರನ್ನು ತಕ್ಷಣ ಬೇಗೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ, ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅದೇ ದಿನ ಅವರು ಮೃತಪಟ್ಟಿದ್ದಾರೆ.

ನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕುಟುಂಬಸ್ಥರಿಗೆ ಪರಿಹಾರದ ಮೊತ್ತ 20 ಲಕ್ಷ ರೂ.ಗಳ ಚೆಕ್ ವಿತರಿಸಿ, ಕುಟುಂಬದ ಸದಸ್ಯರಿಗೆ ಕೆಲಸ ಕೊಡುವ ಭರವಸೆ ಮತ್ತು ಕಾಡಾನೆಗಳ ದಾಳಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಿದ್ದರಾಮಯ್ಯ ಶಾಶ್ವತ ಸಿಎಂ  ಎಂದು ಮೈಸೂರಿನಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ ಗಣೇಶೋತ್ಸವ ಆಚರಣೆಗೆ ತೀವ್ರ ಷರತ್ತು ಹಾಗೂ ನಿಬಂಧನೆಗಳನ್ನು ಹಾಕುವುದರ ಜೊತೆಗೆ ಯುವಕರಿಗೆ ಬೆದರಿಕೆ

ಮೈಸೂರಿನ ಪೌರಕಾರ್ಮಿಕ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ. ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ಪಕ್ಷ ಸಂಘಟನೆಗೆ ಸಹಕಾರ ನೀಡಿ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ

ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ.ಬಿ ಜೆ ವಿಜಯ್ ಕುಮಾರ್ ರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಪಕ್ಷದ ವರಿಷ್ಠರಲ್ಲಿ ಮನವಿ 

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ