ಶ್ರೀ ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಇಂದಿಗೂ ಸ್ಮರಣೀಯ

ವಿಜಯ ದರ್ಪಣ ನ್ಯೂಸ್ 

ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 28 : ಶ್ರೀ ಮಹರ್ಷಿ ವಾಲ್ಮೀಕಿ ರವರು ಮಹಾನ್ ವ್ಯಕ್ತಿ, ಕಾಲಜ್ಞಾನಿ. ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ  ವಾಲ್ಮೀಕಿ ಬರೆದ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ರವರು ಹೇಳಿದರು.

ದೇವನಹಳ್ಳಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

24 ಸಾವಿರ ಕವನಗಳನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಗುಣಮಟ್ಟದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಸಮಾಜದಲ್ಲಿ ಏಳಿಗೆ ಸಾದ್ಯ.
ಹಿಂದುಳಿದವರ ಅಭಿವೃದ್ಧಿ ಗಾಗಿ ಸಮುದಾಯದ ಶಾಲೆಗಳನ್ನು ನಿರ್ಮಿಸಿರುವುದು ಆರ್ಥಿಕವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜಗಳು ಶಿಕ್ಷಣ‌ ಪಡೆದು ಸಮಾಜದಲ್ಲಿ ಮುಂಚೂಣಿಯಲ್ಲಿರಬೇಕು ಎಂಬ ಉದ್ದೇಶದಿಂದ, ಪರಿಶಿಷ್ಟ ಪಂಗಡದ ಹೆಣ್ಣುಮಕ್ಕಳಿಗೆ 6 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿಯಾಗಿದೆ. ಹೆಣ್ಣು ಮಕ್ಕಳು ಸಹ ಉತ್ತಮ ವಿದ್ಯಾಭ್ಯಾಸ ಪಡೆದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂಬ ಆಶಯ ವ್ಯಕ್ತಪಡಿಸಿ, ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತೇನೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ,, ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ಇ.ಒ ಶ್ರೀನಾಥ್ ಗೌಡ, ಸಮುದಾಯದ ಅಧ್ಯಕ್ಷ ಜಿ.ನಾಗೇಶ್ ಬಾಬು ಹಾಗೂ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

&&&&&&&&&&&&&&&&&&&&&&&

ಮಹಾರಾಷ್ಟ್ರದ ಗಣೇಶ್ವರನ ದರ್ಶನ ಪಡೆದ ಸಹಕಾರಿ ಕ್ಷೇತ್ರದ ಸಿಇಒಗಳು

ಇಂದು ಮಹಾರಾಷ್ಟ್ರದ ಗಣೇಶ್ವರದಲ್ಲಿರುವ ಗಣೇಶ್ವರ ದೇವರ ದರ್ಶನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಾಹಕರುಗಳು ದರ್ಶನ ಪಡೆದರು.

ಗುಜರಾತ್ ರಾಜ್ಯದ ಆನಂದ್ ನಲ್ಲಿರುವ ಮೇಸಾನ ಡೈರಿ ವೀಕ್ಷಣೆಯನ್ನು ಮಾಡಲು ಪ್ರವಾಸ ಹೊರಟಿರುವ ಇವರು ಮಾರ್ಗ ಮಧ್ಯದಲ್ಲಿ ಇಂದು  ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಪ್ರವಾಸವನ್ನು ಬೆಂಗಳೂರು ಸಹಕಾರಿ ಹಾಲು ಒಕ್ಕೂಟ ವ್ಯವಸ್ಥೆ ಮಾಡಿದ್ದಾರೆ.