--Ads--

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

On: April 16, 2024 12:48 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮನೋಜ್ ಕುಮಾರ್ ಮೀನಾ

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್​ ಕುಮಾರ್​ ಮೀನಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಐಟಿ ವಲಯ ಸೇರಿದಂತೆ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು, ಅಲ್ಲಿನ ಸಿಇಒ ಮತ್ತು ಮ್ಯಾನೇಜ್​ಮೆಂಟ್​ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದರು.

ಖಾಸಗಿ ಕಂಪನಿಗಳ ಮಾಲಿಕರನ್ನು ಭೇಟಿ ಮಾಡಿ ಮತದಾನ ಮಾಡುವಂತೆ ಸಿಬ್ಬಂದಿಗಳಿಗೆ ಉತ್ತೇಜಿಸುವುದಲ್ಲದೆ, ಸಾಧ್ಯವಾದರೆ ಅವರಿಗೆ ಮತಗಟ್ಟೆಗಳಿಗೆ ತೆರಳಲು ವಾಹನದ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ್ದೇವೆ. ವರ್ಕ್​ ಫ್ರಾಮ್​ ಹೋಮ್ ಮಾಡುವಂತೆ ಕಂಪನಿಗಳು ಸಿಬ್ಬಂದಿಗೆ ಹೇಳುವಂತಿಲ್ಲ. ಕಡ್ಡಾಯವಾಗಿ ರಜೆ ನೀಡಲೇಬೇಕು. ಒಂದು ವೇಳೆ ರಜೆ ನೀಡದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿಳಂಬ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಲೆಕ್ಸಸ್ ಇಂಡಿಯಾದಿಂದ ತನ್ನ ಹೊಚ್ಚಹೊಸ ಇ.ಎಸ್.359 ಎಚ್ ಬುಕಿಂಗ್ ಗಳು ಪ್ರಾರಂಭ

ನಗರ ಭೂ ಸಾರಿಗೆ ನಿರ್ದೇಶನಾಲಯದ ಅಧಿಕಾರಿಗಳೊಂದಿಗೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸಭೆ

ತ್ರೈಮಾಸಿಕದ ಫಲಿತಾಂಶಗಳನ್ನು ಪ್ರಕಟಿಸಿದ ವಿಪ್ರೋ… ಐಟಿ ಸೇವಾ ವಿಭಾಗದ ಆದಾಯವು ವರ್ಷದಿಂದ ವರ್ಷಕ್ಕೆ 1% ರಷ್ಟು ಹೆಚ್ಚಳ, ನಿವ್ವಳ ಆದಾಯವು ₹3360 ಕೋಟಿಗೆ ಏರಿಕೆ

ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ , ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಆಗ್ರಹ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ: ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಎಚ್ಚರಿಕೆ