ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ವಿಜಯ ದರ್ಪಣ ನ್ಯೂಸ್

ಸಾರ್ವತ್ರಿಕ ಲೋಕಸಭಾ ಚುನಾವಣೆ -2024

ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

 

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆಯ ದಿನದಂದು ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರೀಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರೀಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಹಾಗೂ ಜೂನ್ 03 ರ ಮಧ್ಯರಾತ್ರಿ 12.00 ಗಂಟೆಯಿಂದ ಜೂನ್ 04 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ/ಬಿಯರ್/ವೈನ್ ತಯಾರಿಕಾ ಡಿಸ್ಟಿಲರಿ/ಬ್ರಿವರಿ/ವೈನರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.

######################₹#₹##########

ತರಬೇತಿ ಕೇಂದ್ರಗಳಿಗೆ ತೆರಳಲು ಸಿಬ್ಬಂದಿಗೆ ಬಸ್ ವ್ಯವಸ್ಥೆ

ಏಪ್ರಿಲ್ 20ರಂದು ನಡೆಯುವ ತರಬೇತಿಗೆ ನಿಯೋಜಿತ ಮತಗಟ್ಟೆ ಅಧಿಕಾರಿಗಳು ಹಾಜರಾಗುವುದು ಕಡ್ಡಾಯ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 18 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ/ನೌಕರರಿಗೆ 2 ನೇ ಹಂತದ ತರಬೇತಿಯನ್ನು ಏಪ್ರಿಲ್ 20 ರಂದು ಹಮ್ಮಿಕೊಳ್ಳಲಾಗಿದ್ದು 04 ವಿಧಾನಸಭಾ ಕ್ಷೇತ್ರವಾರು ಆಯಾ ತಾಲೂಕು ಕೇಂದ್ರಗಳಲ್ಲಿ ನಿಯೋಜಿಸಲಾದ ಮತಗಟ್ಟೆ ಮಟ್ಟದ ಅಧಿಕಾರಿಗಳು, ವಿವಿಧ ತಾಲೂಕುಗಳಿಂದ ಆಯಾ ನಿಯೋಜಿತ ತರಬೇತಿ ಸ್ಥಳಗಳಿಗೆ ಹಾಜರಾಗುವ ಸಲುವಾಗಿ ಜಿಲ್ಲೆಯ 04 ತಾಲೂಕು ಕೇಂದ್ರಗಳಿಂದ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳಿಗೆ ತೆರಳಲು ಏಪ್ರಿಲ್ 20 ರಂದು ಬೆಳಿಗ್ಗೆ 07:00 ರಿಂದ 07:30 ಗಂಟೆಗೆ ತಾಲೂಕು ಕೇಂದ್ರಗಳಿಂದ ಬಸ್ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ.
ಹೊಸಕೋಟೆ ತಾಲೂಕು ಕೇಂದ್ರದಿಂದ 7 ಬಸ್ಸುಗಳು, ದೇವನಹಳ್ಳಿ ತಾಲೂಕು ಕೇಂದ್ರದಿಂದ 12 ಬಸ್ಸುಗಳು, ದೊಡ್ಡಬಳ್ಳಾಪುರ ತಾಲೂಕು ಕೇಂದ್ರದಿಂದ 12 ಬಸ್ಸುಗಳು, ನೆಲಮಂಗಲ ತಾಲೂಕು ಕೇಂದ್ರದಿಂದ 11 ಬಸ್ಸುಗಳು ಸೇರಿ ಒಟ್ಟು 42 ಬಸ್ಸುಗಳು ವ್ಯವಸ್ಥೆ ಮಾಡಲಾಗಿದೆ. ಜತೆಗೆ ಬೇರೆ ತಾಲೂಕುಗಳಿಗೆ ಪ್ರಯಾಣಿಸಲಿರುವ ಮತಗಟ್ಟೆ ಸಿಬ್ಬಂದಿಗಳು ಏಪ್ರಿಲ್ 20 ರಂದು ಬೆಳಿಗ್ಗೆ 6:30 ರಿಂದ 7:30 ಗಂಟೆಯ ಸಂದರ್ಭದಲ್ಲಿ ಹೊಸಕೋಟೆ ತಾಲೂಕು ಕೇಂದ್ರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ ಟೌನ್, ದೇವನಹಳ್ಳಿ ತಾಲೂಕು ಕೇಂದ್ರದಿಂದ ತಾಲೂಕು ಕಛೇರಿ ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲೂಕು ಕೇಂದ್ರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಕೇಂದ್ರ, ಮಾದಗೊಂಡನಹಳ್ಳಿ ಮುಖ್ಯ ರಸ್ತೆ ದೊಡ್ಡಬಳ್ಳಾಪುರ, ನೆಲಮಂಗಲ ತಾಲೂಕು ಕೇಂದ್ರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೆಲಮಂಗಲ ಟೌನ್ ಈ ಸ್ಥಳಗಳಲ್ಲಿ ಹಾಜರಿದ್ದು, ತಮಗೆ ನಿಯೋಜಿಸಲಾದ ತಾಲೂಕು ಕೇಂದ್ರಗಳಿಗೆ ಪ್ರಯಾಣಿಸಲ ಬಸ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಚುನಾವಣಾ ಅಧಿಕಾರಿಗಳು/ಸಿಬ್ಬಂದಿಗಳು ತರಬೇತಿಗೆ ಕಡ್ಡಾಯವಾಗಿ ಹಾಜರಿರಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.