ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ
ವಿಜಯ ದರ್ಪಣ ನ್ಯೂಸ್…
ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ
ಯಲಹಂಕ : ನಾಟಕದಲ್ಲಿ ಅಭಿನಯಿಸುವಾಗಲೇ ನಟರೊಬ್ಬರು ವೇದಿಯ ಮೇಲೆ ಕುಸಿದು ಪ್ರಾಣ ಬಿಟ್ಟ ಘಟನೆ ನಡೆದಿದೆ.
![](https://www.vijayadarpana.com/wp-content/uploads/2024/05/Screenshot_20240504_144311_Samsung-Internet-210x300.jpg)
ಮೃತಪಟ್ಟವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ಅರದೇಶಹಳ್ಳಿ ಗ್ರಾಮದ ನಿವಾಸಿಯಾದ ಎನ್. ಮುನಿಕೆಂಪಣ್ಣ ಎಂದು ತಿಳಿದುಬಂದಿದೆ.
ಶುಕ್ರವಾರ ರಾತ್ರಿ ಯಲಹಂಕ ತಾಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು, ಈ ವೇಳೆ ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿಕೆಂಪಣ್ಣ ರಾತ್ರಿ ಸುಮಾರು 1.30 ರ ಸಮಯದಲ್ಲಿ ಪಾತ್ರದಲ್ಲಿ ತಲ್ಲೀನರಾಗಿದ್ದಾಗಲೇ ಕುಸಿದು ಬಿದ್ದು ತಮ್ಮ ಪ್ರಾಣ ಬಿಟ್ಟಿದ್ದಾರೆ.
![](https://www.vijayadarpana.com/wp-content/uploads/2024/05/Screenshot_20240504_144412_Samsung-Internet-279x300.jpg)
ಮೃತ ಮುನಿಕೆಂಪಣ್ಣ ಅವರು ನಿವೃತ್ತ ಉಪನ್ಯಾಸಕರು, ಸಾಹಿತಿಗಳು, ಕಲಾವಿದರಾಗಿ ಸೇವೆಸಲ್ಲಿಸಿದ್ದ ಅವರು ಇತ್ತೀಚೆಗೆ ದೇವನಹಳ್ಳಿಯಲ್ಲಿ ನಡೆದ 28ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು,
![](https://www.vijayadarpana.com/wp-content/uploads/2024/05/Screenshot_20240504_144342_Samsung-Internet-294x300.jpg)
ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಮದ್ಯಾಹ್ನ ಮೂರು ಗಂಟೆಗೆ ಮುನಿಕೆಂಪಣ್ಣ ಅವರ ಹುಟ್ಟೂರು ಅರದೇಶಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.