--Ads--

ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ

On: May 4, 2024 9:32 AM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್…
ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ 
ಯಲಹಂಕ : ನಾಟಕದಲ್ಲಿ ಅಭಿನಯಿಸುವಾಗಲೇ  ನಟರೊಬ್ಬರು ವೇದಿಯ ಮೇಲೆ ಕುಸಿದು ಪ್ರಾಣ ಬಿಟ್ಟ ಘಟನೆ ನಡೆದಿದೆ. 
  ಮೃತಪಟ್ಟವರು  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ಅರದೇಶಹಳ್ಳಿ ಗ್ರಾಮದ ನಿವಾಸಿಯಾದ ಎನ್. ಮುನಿಕೆಂಪಣ್ಣ ಎಂದು ತಿಳಿದುಬಂದಿದೆ. 
  ಶುಕ್ರವಾರ ರಾತ್ರಿ ಯಲಹಂಕ ತಾಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು, ಈ ವೇಳೆ ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿಕೆಂಪಣ್ಣ ರಾತ್ರಿ ಸುಮಾರು 1.30 ರ ಸಮಯದಲ್ಲಿ ಪಾತ್ರದಲ್ಲಿ ತಲ್ಲೀನರಾಗಿದ್ದಾಗಲೇ ಕುಸಿದು ಬಿದ್ದು ತಮ್ಮ ಪ್ರಾಣ ಬಿಟ್ಟಿದ್ದಾರೆ. 
 
ಮೃತ ಮುನಿಕೆಂಪಣ್ಣ ಅವರು ನಿವೃತ್ತ ಉಪನ್ಯಾಸಕರು, ಸಾಹಿತಿಗಳು, ಕಲಾವಿದರಾಗಿ ಸೇವೆಸಲ್ಲಿಸಿದ್ದ ಅವರು ಇತ್ತೀಚೆಗೆ  ದೇವನಹಳ್ಳಿಯಲ್ಲಿ  ನಡೆದ 28ನೇ ತಾಲ್ಲೂಕು ಕನ್ನಡ  ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು, 
 ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಮದ್ಯಾಹ್ನ ಮೂರು ಗಂಟೆಗೆ ಮುನಿಕೆಂಪಣ್ಣ ಅವರ ಹುಟ್ಟೂರು ಅರದೇಶಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

WhatsApp

Join Now

Telegram

Join Now

Instagram

Join Now