--Ads--

ಹರ್ ಘರ್ ತಿರಂಗಾ ವಾಕತಾನ್ ಗೆ ಚಾಲನೆ

On: August 14, 2024 11:48 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಹರ್ ಘರ್ ತಿರಂಗಾ ವಾಕತಾನ್ ಗೆ ಚಾಲನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 14 :- ಆಗಸ್ಟ್. 15 ರ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ‘ಹರ್ ಘರ್ ತಿರಂಗಾ ವಾಕತಾನ್ ಅಭಿಯಾನ’ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ರವರು ಚಾಲನೆ ನೀಡಿದರು.

ಆಗಸ್ಟ್ 15 ರವರೆಗೆ ಮನೆ ಮನೆ ಮೇಲೆ ಭಾರತದ ಸಾರ್ವಭೌಮತ್ವದ ಸಂಕೇತ ತ್ರಿವರ್ಣ ಧ್ವಜವನ್ನು ಹಾರಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು ಸಾರ್ವಜನಿಕರು ಕೈ ಜೋಡಿಸಿ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾವಿಭಾ ರಾಥೋಡ, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಶಾಲಾ ಶಿಕ್ಷಕರು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ