--Ads--

ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ :  ಸಚಿವ ಕೆ.ಹೆಚ್ ಮುನಿಯಪ್ಪ

On: September 15, 2024 5:03 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ :  ಸಚಿವ ಕೆ.ಹೆಚ್ ಮುನಿಯಪ್ಪ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 15  : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು  ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಬಳಿ ಇಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಬೀದರ್ ಇಂದ ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 77 ಕಿಲೋಮೀಟರ್ ಉದ್ದದ ಬೃಹತ್ ಮಾನವ ಸರಪಳಿಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಶ್ರಮಿಸಿದ್ದಾರೆ. ಸಂವಿಧಾನದ ಉಳಿವು ಹಾಗು ಪ್ರಜಾಪ್ರಭುತ್ವದ ರಕ್ಷಣೆ
ಇದರ ಮೂಲ ಉದ್ದೇಶವಾಗಿದೆ. ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಜಾತ್ಯಾತೀತ ಭಾವನೆಯಿಂದ ಬದುಕಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ. ಇದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರ ಕನಸು ಸಹ ಆಗಿತ್ತು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು ಮಾತನಾಡಿ ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳ್ಳಲು ಅಧಿಕಾರಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚು ಶ್ರಮವಹಿಸಿದ್ದಾರೆ. ಜಿಲ್ಲೆಯಲ್ಲಿ ಏಕಕಾಲದಲ್ಲಿ ಎರಡು ಕಡೆ ಮಾನವ ಸರಪಳಿ ರಚನೆಯಾಗಿದ್ದು, ಮೊದಲ‌ ಭಾಗದಲ್ಲಿ ನೆಲಮಂಗಲ ತಾಲ್ಲೂಕಿನ ಹಳೆ ನಿಜಗಲ್ ನಿಂದ ಪ್ರಾರಂಭವಾಗಿ ದಾಬಸ್‌ಪೇಟೆ ಮುಖಾಂತರ ‌ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಕ್ರಾಸ್ ವರೆಗೆ 54 ಕಿಲೋ ಮೀಟರ್ ಸರಪಳಿ ರಚನೆಯಾಗಿದೆ. ಎರಡನೇ ಭಾಗದಲ್ಲಿ ಹೊಸಕೋಟೆ ತಾಲ್ಲೂಕಿನ ವೆಂಕಟಪುರದಿಂದ ಪ್ರಾರಂಭಿಸಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡಮಾನಿಕೆರೆಯವರೆಗೆ 23 ಕಿಲೋಮೀಟರ್ ಸೇರಿ ಒಟ್ಟು 77 ಕಿಲೋಮೀಟರ್ ವರೆಗೆ ಮಾನವ ಸರಪಳಿ ಯಶಸ್ವಿಯಾಗಿದೆ ಎಂದರು.

ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ‌ಸಮಾನತೆ ಸಿಗುವಂತಾಗಬೇಕು. ಯಾವುದೇ ಭೇದ ಭಾವ ಇಲ್ಲದೆ ನಾವೆಲ್ಲರು ಒಂದೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯದ ಹಿತಕ್ಕಾಗಿ ಒಟ್ಟಾಗಿ ದುಡಿಯಬೇಕು. ಆಡಂಬರದ ಆಚರಣೆ ಮಾಡದೆ ಸಂವಿಧಾನದ ಆಶಯದ‌ ಬಗ್ಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಬೋಧಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನಗಳ ಅಧ್ಯಕ್ಷ ಬಿ. ರಾಜಣ್ಣ, ಬಯಪ ಅಧ್ಯಕ್ಷ ವಿ. ಶಾಂತಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ, ತಾಲ್ಲೂಕು ತಹಶೀಲ್ದಾರ್ ಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now