--Ads--

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

On: February 13, 2025 5:40 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ(ಎಸ್.ಸಿ.ಎಸ್.ಪಿ, ಟಿ.ಎಸ್.ಪಿ)

ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ ಗ್ರಾ.ಜಿಲ್ಲೆ, ಫೆ.12: 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ 100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಸ್.ಸಿ.ಪಿ-ಟಿ.ಎಸ್.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ

ಸರ್ಕಾರದಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವು ಸರಿಯಾಗಿ, ಸಮರ್ಪಕವಾಗಿ ಬಳಕೆಯಾಗಬೇಕು. ಕೆಲವು ಇಲಾಖೆಗಳು ಈಗಾಗಲೇ ಶೇಕಡ 100 ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಇಲಾಖೆಗಳು ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಅನುದಾನ ಖರ್ಚು ಮಾಡಿ ಪ್ರಗತಿ ವರದಿ ನೀಡಬೇಕು ಎಂದರು.

ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವಶ್ಯಕತೆ ಇರುವವರಿಗೆ ಸೌಲಭ್ಯ ಕಲ್ಪಿಸಿ. ಪ.ಜಾತಿ, ಪ.ಪಂಗಡಗಳು ವಾಸಿಸುವ ಗ್ರಾಮಗಳಲ್ಲಿ ಹದಗೆಟ್ಟ ರಸ್ತೆಗಳನ್ನು ಗುರುತಿಸಿ ರಸ್ತೆಗಳನ್ನು ನಿರ್ಮಿಸಿ. ಕಳೆದ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಫಲಾನುಭವಿಗಳ ಈಗಿನ ಆರ್ಥಿಕ ಸ್ಥಿತಿಗತಿ, ಅನುದಾನ ಸದ್ಬಳಕೆ ಆಗಿದೆಯೇ? ಇಲ್ಲವೇ? ಎಂಬುದನ್ನು ಪರಿಶೀಲಿಸಿ ವರದಿ ನೀಡಿ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now