--Ads--

ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ, ಊರ ಜಾತ್ರೆ ಮಹೋತ್ಸವ 

On: April 22, 2025 3:46 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ ,ಊರ ಜಾತ್ರೆ ಮಹೋತ್ಸವ 

ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿಯಲ್ಲಿ ನೆಲೆಸಿರುವ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನಾ ಮಹೋತ್ಸವದ 48ನೇ ದಿನದಂದು ದೀಪೋತ್ಸವ ಹಾಗೂ ಊರ ಜಾತ್ರೆ ಅದ್ಧೂರಿಯಾಗಿ ನಡೆಯಿತು.

ಸ್ವಾಮಿಗೆ ಹೂವಿನ ಅಲಂಕಾರ, ಮಹಾ ಮಂಗಳಾರತಿ ನೆರವೇರಿಸಲಾಯಿತು,ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಗ್ರಾಮದ ಬೀದಿಗಳಲ್ಲಿ ಹಬ್ಬದ ಅಂಗವಾಗಿ ತಳಿರು ತೋರಣ ಕಟ್ಟಲಾಗಿದ್ದು, ರಂಗೋಲಿ, ದೀಪಗಳು ಜಾತ್ರೆಗೆ ಮತ್ತಷ್ಟು ಕಳೆ ತಂದಿತ್ತು.

ದೀಪೋತ್ಸವದ ಅಂಗವಾಗಿ ತಂಬಿಟ್ಟು ದೀಪವನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು,ಬಳಿಕ ದೇವಾಲಯದ ಬಳಿ ದೀಪದ ಆರತಿ ಸಲ್ಲಿಸಿ,ಭಕ್ತರು ದೇವರಲ್ಲಿ ತಮ್ಮ ಇಷ್ಟಾರ್ಥಗಳ ಸಿದ್ದಿಗಾಗಿ ಪ್ರಾರ್ಥಿಸಿದರು.

ತಮಟೆ, ನಾದಸ್ವರ ವಾದ್ಯಗಳೊಂದಿಗೆ ದೀಪ ಮೆರವಣಿಗೆ ತಿಪ್ಪೇನಹಳ್ಳಿ ಗ್ರಾಮದಿಂದ ತುಮ್ಮನಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದವರೆಗೆ ವಿಜೃಂಭಣೆಯಿಂದ ಸಾಗಿತು.

ಕಳೆದ ತಿಂಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀಮಂಗಳಾನಂದಸ್ವಾಮಿಯವರ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆದಿತ್ತು ಮಂಗಳವಾರ ಮಂಡಲಪೂಜೆ ನಡೆಯಿತು.

ಈ ಸಂದರ್ಭದಲ್ಲಿ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಮ್ಮನಾಗರಾಜ್, ಭರತ್ ಭೂಷಣ್, ರಾಘವೇಂದ್ರ, ನರ್ಸರಿ ಲಕ್ಷ್ಮೀನಾರಾಯಣ್, ಟಿ.ಪಿ.ವೆಂಕಟೇಶ್, ಟಿ.ಆ‌ರ್.ಆನಂದ್, ಟಿ.ವಿ.ದೇವರಾಜ್ ಹಾಗು ಗ್ರಾಮಸ್ಥರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ 10 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ “ಆಶೀರ್ವಾದದ ದೀಪ” ಕಾರ್ಯಕ್ರಮ ಭಕ್ತಿಭಾವ ಸಂಭ್ರಮದಿಂದ ಆಚರಣೆ

ರೇಷ್ಮೆ ಆಧಾರಿತ ಕೈಗಾರಿಕೆಗಳು, ಮಹಿಳೆಯರಿಗೆ ಗಾರ್ಮೆಂಟ್ಸ್ ತಾಲ್ಲೂಕಿನಲ್ಲೇ ಸ್ಥಾಪಿಸಬೇಕು : ಸಾಮಾಜಿಕ ಹೋರಾಟಗಾರ ನವಾಜ್ ಪಾಷ

ಹಿರಿಯರಿಗೆ ಹಾಗೂ ದಿವ್ಯಾಂಗರಿಗೆ ಆತ್ಮವಿಶ್ವಾಸ ನೀಡುವ ಕೆಲಸದಲ್ಲಿ ಸಾರ್ಥಕತೆಯ ಭಾವ: ಸಂಸದ ಡಾ.ಕೆ.ಸುಧಾಕರ್‌

ಶಾಲಾಭಿವೃದ್ಧಿ ಸಮಿತಿಯಿಂದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ , ಸನ್ಮಾನ

ಶಿಡ್ಲಘಟ್ಟ ಪಿ.ಎಲ್‌.ಡಿ ಬ್ಯಾಂಕ್ ಸರ್ವ ಸದಸ್ಯರ ಮಹಾಸಭೆ ಸೆಪ್ಟಂಬರ್ -19ಕ್ಕೆ

“ಭಾವುಕ ಲೋಕದಲ್ಲಿ ಮಿಂದೆದ್ದ ಸೇವಾ ಸೌಭಾಗ್ಯ-ಬಾಗಿನೋತ್ಸವ” ಅರ್ಥಪೂರ್ಣ ಬಾಗಿನೋತ್ಸವ ನಡೆಸಿಕೊಟ್ಟ ಶಾಸಕ ಬಿ.ಎನ್.ರವಿಕುಮಾರ್