ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….

ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಮೇ 22: ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸಲು ಸುಗಮ್ಯ ಭಾರತ ಅಭಿಯಾನದ ಉದ್ದೇಶವಾಗಿದ್ದು ಈ ಅಭಿಯಾನಕ್ಕೆ ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು ಅವರು ಚಾಲನೆ ನೀಡಿದರು.

ಈಗಾಗಲೇ ರಾಜ್ಯಾದ್ಯಂತ ಈ ಸುಗಮ್ಯ ಯಾತ್ರಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಇಳಿಜಾರು ಮೆಟ್ಟಿಲುಗಳು ಮತ್ತು ಸೂಚನಾ ಫಲಕಗಳನ್ನು ಅಚ್ಚುಕಟ್ಟಾಗಿ ಒಳಗೊಂಡಿರಬೇಕು. ವಿಕಲಚೇತನ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಕ್ರೋಢೀಕರಿಸಲು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ The Association of People with Disability(ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಸಂಘ) ಬೆಂಗಳೂರು ಸಂಸ್ಥೆಯೊಂದಿಗೆ ಈ ಒಪ್ಪಂದ ಮಾಡಿಕೊಂಡಿದೆ. ಅದರಂತೆ ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು Yes to Access ಎಂಬ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದು, ಎಲ್ಲರೂ ಈ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಬಳಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಅಪ್ಲಿಕೇಶನ್ ಅನ್ನು APD ಸಂಸ್ಥೆಯ ಗಿರಿಜಮ್ಮ ಸ್ಥಳದಲ್ಲಿಯೇ ಪ್ರಾಯೋಗಿಕವಾಗಿ ಯಾವ ರೀತಿ ಬಳಸಬಹುದು ಎಂಬ ಮಾಹಿತ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಅಂಗವಿಕಲ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಸುನೀಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದೂರದರ್ಶನ ಚಂದನ ವಾಹಿನಿಯಲ್ಲಿ ಸ್ಟ್ರಿಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಮೇ 21:ಬೆಂಗಳೂರಿನ ದೂರದರ್ಶನ ಕೇಂದ್ರ / ಚಂದನ ವಾಹಿನಿಯಲ್ಲಿ ಅರೆಕಾಲಿಕ ವರದಿಗಾರರು (ಸ್ಟ್ರಿಂಜರ್) ಹುದ್ದೆಗಳಿಗೆ ರಾಜ್ಯದ 29 ಜಿಲ್ಲೆಗಳಲ್ಲಿ ಎರಡು ವರ್ಷಗಳ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹತೆ ಹಾಗೂ ಕಾರ್ಯಾನುಭವ
ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಪಡೆದಿರಬೇಕು. ಉತ್ತಮವಾದ ಸುದ್ದಿ ತಯಾರಿಸುವ ಸೂಕ್ಷ್ಮತೆ ಹೊಂದಿರಬೇಕು, ಜೊತೆಗೆ ಕ್ಯಾಮೆರಾ ಬಳಕೆಯ ಕೌಶಲ್ಯವನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕ್ಯಾಮೆರಾ ಮತ್ತು ಅಗತ್ಯ ತಂತ್ರಜ್ಞಾನವನ್ನು ಹೊಂದಿರಬೇಕು. ಎಚ್ಡಿ/4ಕೆ/ಯುಎಚ್ಡಿ/ಎನ್ಎಕ್ಸ್ ಫಾರ್ಮೆಟ್ ವಿಡಿಯೋ ಕ್ಯಾಮೆರಾ ಹೊಂದಿರುವ ಜೊತೆಗೆ ಸುದ್ದಿ ಕಳುಹಿಸಲು ಬೇಕಾದ ಎಲ್ಲಾ ಸೌಲಭ್ಯವನ್ನು ಹೊಂದಿರಬೇಕು.

ನೇಮಕಾತಿಯ ಪ್ರಕ್ರಿಯೆ
1) ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡುವಿಕೆ,
2) ಶಾರ್ಟ್ ಲಿಸ್ಟ್ ಆದವರಿಗೆ ಸುದ್ದಿ ಕವರೇಜ್ ಮಾಡುವ ಪರೀಕ್ಷೆ,
3) ಸಂದರ್ಶನ,
4) ದಾಖಲೆಗಳು, ಕ್ಯಾಮೆರಾ, ಇತರೆ ಪರಿಕರಗಳ ಪರಿಶೀಲನೆ,
5) ಅಂತಿಮ ಪಟ್ಟಿ ಸಿದ್ಧತೆ,
ಸೇರಿದಂತೆ ಒಟ್ಟು ಐದು ಹಂತದ ಪರೀಕ್ಷೆಗಳು ಇರಲಿವೆ. ಹುದ್ದೆಗೆ ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ.

ವೇತನ ವಿವರ
ಪರಿಷ್ಕೃತ ವೇತನ ನಿಯಮ ಪ್ರಕಾರ ನಿಯೋಜಿಸಲಾದ ಸ್ಥಳೀಯ ಸುದ್ದಿಗೆ ರೂ.1500, 2ನೇ ಸುದ್ದಿಗೆ ರೂ.1000, ಹೊರವಲಯ ವ್ಯಾಪ್ತಿ ಸುದ್ದಿಗೆ ರೂ.1800 ರಂತೆ ನೀಡಲಾಗುತ್ತದೆ. ಬೆಂಗಳೂರು ಕೇಂದ್ರದಲ್ಲಿ ವರ್ಷಕ್ಕೆ 5 ಲಕ್ಷ ರೂ ಹಾಗೂ ಜಿಲ್ಲಾ ಕೇಂದ್ರದಲ್ಲಿ 4 ಲಕ್ಷ ರೂ ಒಳಗೆ ಗೌರವಧನ ಮಿತಿ ಮೀರದಂತೆ ಪಾವತಿ ನಿಗದಿಪಡಿಸಲಾಗಿದೆ.

*ಅರ್ಜಿ ಸಲ್ಲಿಸುವವರಿಗೆ ಸೂಚನೆಗಳು*
ಪ್ರಸ್ತುತ ತಾಂತ್ರಿಕ ಮಾನದಂಡಗಳಿಗೆ ಅನುಗುಣವಾಗಿ ಕ್ಯಾಮೆರಾ ಬಳಕೆ ತಿಳಿದಿರಬೇಕು ಹಾಗೂ ಸಂಬಂಧಿತ ಉಪಕರಣಗಳನ್ನು ಹೊಂದಿರಬೇಕು,
DSNG / ಸುದ್ದಿಯನ್ನು ನೇರಪ್ರಸಾರ ಮಾಡಲು ಬೇಕಾದ ಉಪಕರಣಗಳನ್ನು ಹೊಂದಿರಬೇಕು. ವೃತ್ತಿಪರರು ಇತ್ತೀಚಿನ ಹೆಚ್ಡಿ, 4K, ಯುಹೆಚ್ಡಿ, ಎನ್ಎಕ್ಸ್ ಮಾದರಿಯ ವಿಡಿಯೋ ಕ್ಯಾಮೆರಾಗಳನ್ನು ಹೊಂದಿರಬೇಕು. ಇದರ ಜೊತೆಗೆ ಗುಣಮಟ್ಟದ 4G ಅಥವಾ 5G ಸ್ಮಾರ್ಟ್ಫೋನ್ಗಳನ್ನು ಹೊಂದಿರಬೇಕು. ತಕ್ಷಣಕ್ಕೆ ಸುದ್ದಿ ಹಾಗೂ ವೀಡಿಯೊಗಳನ್ನು ಸುದ್ದಿ ಕೊಠಡಿಗೆ ಕಳುಹಿಸಲು ಬೇಕಾದ ಎಲ್ಲಾ ಸೌಕರ್ಯಗಳನ್ನು ಹೊಂದಿರಬೇಕು.
ಈಗಾಗಲೇ ಸ್ಟ್ರಿಂಜರ್ ವೃತ್ತಿಯಲ್ಲಿರುವವರು ಸಹ ಹೊಸದಾಗಿ ಅರ್ಜಿ ಸಲ್ಲಿಸಿ, ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ಅರ್ಜಿದಾರರು ಯಾವ ಜಿಲ್ಲೆಯಲ್ಲಿ ಹುದ್ದೆ ಮಾಡಲು ಬಯಸುತ್ತೀರಿ ಎಂಬುದನ್ನು ಸ್ಪಷ್ತವಾಗಿ ನಮೂದಿಸಿರಬೇಕು.

*ಅರ್ಜಿ ಸಲ್ಲಿಸುವ ವಿಧಾನ*
ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಪ್ರಸಾರ ಭಾರತಿ(IPSB), ದೂರದರ್ಶನ ಬೆಂಗಳೂರು, ಹೆಸರಿನಲ್ಲಿ ರೂ.1180 ಡಿಡಿ ಪಾವತಿಸಿ, ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಪೂರಕ ದಾಖಲೆಗಳೂಂದಿಗೆ , ಸುದ್ದಿ ನಿರ್ದೇಶಕರು, ಪ್ರಾದೇಶಿಕ ಸುದ್ದಿ ಘಟಕ, ದೂರದರ್ಶನ ಕೇಂದ್ರ, ಜೆ ಸಿ ನಗರ, ಬೆಂಗಳೂರು- 560 006 ಗೆ ಅಂಚೆ ಮೂಲಕ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಗೆ prasarbharati.gov.in ವೆಬ್ಸೈಟ್ ಗೆ ಭೇಟಿ ನೀಡಿ.