ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ.

ವಿಜಯ ದರ್ಪಣ ನ್ಯೂಸ್….

ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಶಿಡ್ಲಘಟ್ಟದ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ.

ಶಿಡ್ಲಘಟ್ಟ: ತಾಲ್ಲೂಕಿನ ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘಗಳ ಕ್ಷೇತ್ರದಿಂದ ಎ.ನಾಗರಾಜ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ಸ್ಕೂಲ್ ನಾಗರಾಜ್ ಅವಿರೋಧ ಆಯ್ಕೆಯಾಗಿದ್ದು ಅವರ ಅಭಿಮಾನಿಗಳು, ಬೆಂಬಲಿಗರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ತಾಲ್ಲೂಕಿನ ಎಸ್‌ಎಫ್‌ಸಿಎಸ್ ಬ್ಯಾಂಕುಗಳ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಡಾಲ್ಫಿನ್ ಸ್ಕೂಲ್ ನಾಗರಾಜ್ ಮತ್ತು ದಿಬ್ಬೂರಹಳ್ಳಿಯ ಡಿ.ಎಚ್.ನಾಗರಾಜ್ ನಾಮ ಪತ್ರ ಸಲ್ಲಿಸಿದ್ದರು, ಡಿ.ಎಚ್.ನಾಗರಾಜ್ ತಮ್ಮ ನಾಮಪತ್ರ ವಾಪಸ್ ಪಡೆದಿದ್ದು ಡಾಲ್ಫಿನ್ ನಾಗರಾಜ್ ಮಾತ್ರ ಕಣದಲ್ಲಿ ಉಳಿದು ಅವಿರೋಧ ಆಯ್ಕೆಯಾಗಿದ್ಧಾರೆ.

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದ ನಾಗರಾಜ್ ಶಿಡ್ಲಘಟ್ಟಕ್ಕೆ ಆಗಮಿಸುತ್ತಿದ್ದಂತೆ ಅವರ ಅಭಿಮಾನಿಗಳು, ಬೆಂಬಲಿಗರು ನಗರದ ಕೋಟೆ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು,ನಾಗರಾಜ್‌ಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಹೂ ಹಾರ ಹಾಕಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ನಾಗರಾಜ್, ಡಿಸಿಸಿ ಬ್ಯಾಂಕ್‌ಗೆ ನನ್ನನ್ನು ಎಲ್ಲಾ ಪಕ್ಷದ ಮುಖಂಡರು ಕೂಡ ಅವಿರೋಧ ಆಯ್ಕೆ ಮಾಡಲು ಸಹಕರಿಸಿದ್ದಾರೆ,ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಮೇಲೂರು ಬಿ.ಎನ್. ರವಿಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್, ಜೆಡಿಎಸ್ , ಬಿಜೆಪಿ ಮುಖಂಡರು, ಎಸ್‌ಎಫ್‌ಸಿಎಸ್ ಬ್ಯಾಂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು ನನಗೆ ಬೆಂಬಲ ನೀಡಿದ್ದು ಅವರ ನಿರೀಕ್ಷೆಯಂತೆ ಕಾರ್ಯನಿರ್ವಹಿಸುತ್ತೇನೆ ಎಂದರು.