Editor VijayaDarpana

ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ ಶಿಡ್ಲಘಟ್ಟ : ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು. ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು…

Read More

ಕೈವಾರ ತಾತಯ್ಯನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಕೈವಾರ ತಾತಯ್ಯನವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮಾ.03: ಜಿಲ್ಲಾಡಳಿತ ಭವನದಲ್ಲಿ ಜರುಗಿದ ಕೈವಾರ ತಾತಯ್ಯ (ಶ್ರೀ ಯೋಗಿ ನಾರೇಯಣ ಯತೀಂದ್ರ) ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ (ಶ್ರೀ ಯೋಗಿ ನಾರೇಯಣ…

Read More

ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಬಲವರ್ಧನೆ ಮಾಡೋಣ : ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್….. ದೇವನಹಳ್ಳಿಯಲ್ಲಿ ನಡೆದ ಜೆಡಿಎಸ್ ಸಂಘಟನಾ ಸಭೆ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಬಲವರ್ಧನೆ ಮಾಡೋಣ : ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ದೇವನಹಳ್ಳಿ ಮಾರ್ಚ್ 02: ಯಾವುದೇ ಭಿನ್ನಾಭಿಪ್ರಾಯಗಳು ಇದ್ದರೂ ಸಹ ಅವುಗಳನ್ನು ಸರಿಪಡಿಸಿಕೊಂಡು ಒಗ್ಗಟ್ಟಿನಿಂದ ಹೋಗಬೇಕು ಹಾಗೂ ಪಕ್ಷವನ್ನು ಸಂಘಟಬೇಕೆಂದು ಮಾಜಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದಲ್ಲಿ ಇರುವ  ಅಂಬೇಡ್ಕರ್ ಭವನದಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಪದಾಧಿಕಾರಿಗಳ ಪುನರ್ ನೇಮಕ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಏನೇ ಭಿನ್ನಾಭಿಪ್ರಾಯಗಳಿದ್ದರೂ…

Read More

ಕೂರ್ಗಳ್ಳಿ ಪಬ್ಲಿಕ್‌ ಶಾಲೆ ಕೊಠಡಿ ಶಾಸಕ ಜಿಟಿ ದೇವೇಗೌಡ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್….. ಕೂರ್ಗಳ್ಳಿ ಪಬ್ಲಿಕ್‌ ಶಾಲೆ ಕೊಠಡಿ ಶಾಸಕ ಜಿಟಿ ದೇವೇಗೌಡ ಭೂಮಿ ಪೂಜೆ ತಾಂಡವಪುರ ಮಾರ್ಚ್ 2 ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮೈಸೂರ್ ತಾಲೂಕು ಕೂರ್ಗಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎರಡು ಶಾಲಾ ಕೊಟ್ಟಡಿಯ ಕಟ್ಟಡದ ಪೂಜೆ, ಶಾಲೆಯ ಮುಖ್ಯ ದ್ವಾರದ ಭೂಮಿ ಪೂಜೆಯನ್ನು ಶಾಸಕ ಜಿ.ಟಿ.ದೇವೇಗೌಡ ನೇರವೇರಿಸಿದರು. ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕ ಶ್ರೀನಿವಾಸ್, ಉಪನಿರ್ದೇಶಕ ಉದಯ್ ಕುಮಾರ್, ಗ್ರಾಮದ ಮುಖಂಡರಾದ ಜಿ.ಪಂ ಮಾಜಿ ಅಧ್ಯಕ್ಷ ಮಹದೇವು, ಗ್ರಾ.ಪಂ….

Read More

ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು 

ವಿಜಯ ದರ್ಪಣ ನ್ಯೂಸ್…… ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪುತ್ತೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೆಗೌಡ ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೆಲಿಕಾಪ್ಟ‌ರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿವಿಐಪಿ ಅತಿಥಿಗೃಹಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ…

Read More

ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು

ವಿಜಯ ದರ್ಪಣ ನ್ಯೂಸ್….. ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕುಕ್ಕೆ ಸುಬ್ರಹ್ಮಣ್ಯ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಮಿತ್ರ ಪಕ್ಷಗಳೊಂದಿಗೆ ಸೇರಿ ಜನಪರ ಆಡಳಿತ ನಡೆಸುತ್ತಿದೆ ಜೆಡಿಎಸ್ ಪಕ್ಷವು ಎನ್ ಡಿ ಎ ಜೊತೆಗೆ ಮುಂದಿನ ಚುನಾವಣೆಯನ್ನು ಎದುರಿಸಲಿದೆ ಎಂದು ಜೆಡಿಎಸ್ ರಾಷ್ಟ್ರಿಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Read More

ಸಮಾಜವನ್ನು ಜಾಗೃತಗೊಳಿಸುವ ಪ್ರಬಲ ಮಾಧ್ಯಮ ರಂಗಭೂಮಿ: ವಿ ಎನ್ ಮಲ್ಲಿಕಾರ್ಜುನ ಸ್ವಾಮಿ

ವಿಜಯ ದರ್ಪಣ ನ್ಯೂಸ್…… ಸಮಾಜವನ್ನು ಜಾಗೃತಗೊಳಿಸುವ ಪ್ರಬಲ ಮಾಧ್ಯಮ ರಂಗಭೂಮಿ: ವಿ ಎನ್ ಮಲ್ಲಿಕಾರ್ಜುನ ಸ್ವಾಮಿ ಮೈಸೂರು: ರಂಗಭೂಮಿ ಕಲೆ ಮಾತ್ರವಲ್ಲದೇ, ಚಳವಳಿಯ ರೂಪದಲ್ಲಿ ಮನುಷ್ಯನನ್ನು ಸದಾ ಜಾಗೃತವನ್ನಾಗಿಸುವ, ಸಮಾಜದ ಓರೆ-ಕೋರೆಗೆಳನ್ನು ತಿದ್ದುವ ಪ್ರಬಲ ಮಾಧ್ಯಮ ವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು. ನಗರದ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಾದರಂಗ ರಂಗಸಂಭ್ರಮ ನಾಟಕೋತ್ಸವ-2026 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತು ಜಗತ್ತಿನಾ ದ್ಯಂತ ಮರಣ ಮೃದಂಗ ದನಿ ಮೇಲೈಸುತ್ತಿವೆ. ಕೆಲವರಿಗೆ…

Read More

ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳ್ಳಬೇಕು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ 

ವಿಜಯ ದರ್ಪಣ ನ್ಯೂಸ್…. ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳ್ಳಬೇಕು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಪಕ್ಷದ ಕಾರ್ಯಕರ್ತರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಮೂಡಿಸುವುದು, ಸಾಂಘಿಕ ಶಕ್ತಿಯನ್ನು ವೃದ್ಧಿಸುವುದು ಮತ್ತು ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ನಗರದ ಬಿಜೆಪಿ ಸೇವಾಸೌಧದಲ್ಲಿ ಪಂ.ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ಜಿಲ್ಲಾಮಟ್ಟದ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಭಾರತೀಯ ಜನತಾ ಪಾರ್ಟಿ ತನ್ನ ಕಾರ್ಯಕರ್ತರಿಗೆ ಹಮ್ಮಿಕೊಂಡಿರುವ ತರಬೇತಿ…

Read More

ಎನ್‌ಡಿಎ ಅಧಿಕಾರಕ್ಕೆ ತರಲು ಶ್ರಮವಹಿಸಿ ಕಾರ್ಯಕರ್ತರಿಗೆ ಎಚ್.ಡಿ. ಕುಮಾರಸ್ವಾಮಿ ಕರೆ

ವಿಜಯ ದರ್ಪಣ ನ್ಯೂಸ್….. ಮೈತ್ರಿ ಬಗ್ಗೆ ಯಾರೂ ಮಾತನಾಡಬೇಡಿ ಎನ್‌ಡಿಎ ಅಧಿಕಾರಕ್ಕೆ ತರಲು ಶ್ರಮವಹಿಸಿ ಕಾರ್ಯಕರ್ತರಿಗೆ ಎಚ್.ಡಿ. ಕುಮಾರಸ್ವಾಮಿ ಕರೆ ಬೆಂಗಳೂರು: ಬೆಂಗಳೂರು ನಗರದಲ್ಲಿ ಎನ್‌ಡಿಎ ಇ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಿ ಯಾರೂ ಮೈತ್ರಿ ಬಗ್ಗೆ ಮಾತನಾಡಬೇಡಿ ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ  ಗ್ರೇಟರ್ ಬೆಂಗಳೂರು ಜೆಡಿಎಸ್ ಸಂಘಟನೆಗೆ ಸಂಬಂಧಿಸಿದಂತೆ ಎಲ್ಲ 28 ವಿಧಾನಸಭೆ ಕ್ಷೇತ್ರಗಳ…

Read More

ಯಾರು ಮೊದಲು….

ವಿಜಯ ದರ್ಪಣ ನ್ಯೂಸ್….. ಯಾರು ಮೊದಲು…. ಜಾಗತೀಕರಣ, ಮುಕ್ತ ಮಾರುಕಟ್ಟೆ ಅಂತ್ಯವಾಗುವತ್ತಾ ವಿಶ್ವ. ಸಂಕುಚಿತ ನಾಯಕರ ಕೈಯಲ್ಲಿ ಬಲಿಷ್ಠ ದೇಶಗಳ ಆಡಳಿತ ವ್ಯವಸ್ಥೆ…… ಸಹಜ ಬುದ್ದಿಮತ್ತೆ ನಾಶವಾಗಿ ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ನಾವು…. ಅಮೆರಿಕ ಮೊದಲು ಡೊನಾಲ್ಡ್ ಟ್ರಂಪ್, ಇಲ್ಲ, ಇಲ್ಲಾ ಚೀನಾ ಮೊದಲು ಷಿ ಜಿನ್ ಪಿಂಗ್, ಇಲ್ಲ, ಇಲ್ಲಾ ರಷ್ಯಾ ಮೊದಲು ವ್ಲಾದಿಮಿರ್ ಪುಟಿನ್, ಇಲ್ಲ, ಇಲ್ಲಾ ಭಾರತ ಮೊದಲು ನರೇಂದ್ರ ಮೋದಿ, ಇಲ್ಲ, ಇಲ್ಲಾ ಇಸ್ರೇಲ್ ಮೊದಲು, ಬೆಂಜಮಿನ್ ನೆತನ್ಯಾಹು, ಇಲ್ಲ, ಇಲ್ಲಾ…

Read More