ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ
ವಿಜಯ ದರ್ಪಣ ನ್ಯೂಸ್…. ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ ಶಿಡ್ಲಘಟ್ಟ : ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು. ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು…
