ಎರಡು ಸುದ್ದಿಗಳ ಸುತ್ತಾ…..
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಎರಡು ಸುದ್ದಿಗಳ ಸುತ್ತಾ….. ಅರ್ಜುನ ಎಂಬ ಆನೆಯ ಸಾವು, ಮತ್ತು ಶ್ರೀಮತಿ ಭವಾನಿ ರೇವಣ್ಣ ಅವರ 1.5 ಕೋಟಿಯ ಕಾರು……… ಕಳ್ಳರನ್ನು ಹಿಡಿಯುವ ಪೋಲೀಸರ ಕಾರ್ಯಾಚರಣೆಯಲ್ಲಿ ಪೋಲೀಸರೇ ಹತ್ಯೆಯಾದಂತಾಗಿದೆ ಅರ್ಜುನನ ಸಾವು. ಬಹುಶಃ ಖೆಡ್ಡಾ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತ ಅರಣ್ಯ ಅಧಿಕಾರಿಗಳ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯದಿಂದ ಅರ್ಜುನನ ಸಾವು ಸಂಭವಿಸಿರುವ ಎಲ್ಲಾ ಸಾಧ್ಯತೆಗಳು ಇವೆ. ಒಂದಕ್ಕೊಂದು ಭಿನ್ನ ವರದಿಗಳು ಬರುತ್ತಿವೆ. ಸರ್ಕಾರ ಒಂದು ತಟಸ್ಥ ಅಧಿಕಾರಿಗಳಿಂದ ನಿಷ್ಪಕ್ಷಪಾತ ತನಿಖೆ ನಡೆಸಿದರೆ ಸತ್ಯ…
