Editor VijayaDarpana

ಎರಡು ಸುದ್ದಿಗಳ ಸುತ್ತಾ…..

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಎರಡು ಸುದ್ದಿಗಳ ಸುತ್ತಾ….. ಅರ್ಜುನ ಎಂಬ ಆನೆಯ ಸಾವು, ಮತ್ತು ಶ್ರೀಮತಿ ಭವಾನಿ ರೇವಣ್ಣ ಅವರ 1.5 ಕೋಟಿಯ ಕಾರು……… ಕಳ್ಳರನ್ನು ಹಿಡಿಯುವ ಪೋಲೀಸರ ಕಾರ್ಯಾಚರಣೆಯಲ್ಲಿ ಪೋಲೀಸರೇ ಹತ್ಯೆಯಾದಂತಾಗಿದೆ ಅರ್ಜುನನ ಸಾವು. ಬಹುಶಃ ಖೆಡ್ಡಾ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತ ಅರಣ್ಯ ಅಧಿಕಾರಿಗಳ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯದಿಂದ ಅರ್ಜು‌ನನ ಸಾವು ಸಂಭವಿಸಿರುವ ಎಲ್ಲಾ ಸಾಧ್ಯತೆಗಳು ಇವೆ. ಒಂದಕ್ಕೊಂದು ಭಿನ್ನ ವರದಿಗಳು ಬರುತ್ತಿವೆ. ಸರ್ಕಾರ ಒಂದು ತಟಸ್ಥ ಅಧಿಕಾರಿಗಳಿಂದ ನಿಷ್ಪಕ್ಷಪಾತ ತನಿಖೆ ನಡೆಸಿದರೆ ಸತ್ಯ…

Read More

ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ ಸೂಚನೆ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 06:- ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ…

Read More

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್  ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ 15 ಕೃತಿಗಳ ಲೋಕಾರ್ಪಣೆ ಸಮಾರಂಭ ಡಿಸೆಂಬರ್ 10ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಉಪನ್ಯಾಸಕಿ, ಚಿಂತಕಿ, ಅಂಕಣಕಾರ್ತಿ, ಲೇಖಕಿ ಜಯಶ್ರೀ ಅಬ್ಬಿಗೇರಿ ಅವರ ನಿಮ್ಮನ್ನು ನೀವು ಯಶಸ್ವಿ ವ್ಯಕ್ತಿ ಎಂದು ಭಾವಿಸಿ, ಮೆಲ್ಲ ಮೆಲ್ಲ ಈ ಪ್ರೀತಿ ಮೆಲ್ಲುವಾ, ಜೀವನದಿ,…

Read More

ಕರ್ನಾಟಕದಲ್ಲಿ ರೂ. 525 ಕೋಟಿ ಹೂಡಿಕೆ ಮಾಡಲಿರುವ ಡ್ರೈವರ್ ಲಾಜಿಸ್ಟಿಕ್ಸ್

ವಿಜಯ ದರ್ಪಣ ನ್ಯೂಸ್ ,ಬೆಂಗಳೂರು ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ ರೂ. 525 ಕೋಟಿ ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭಿಸಿದೆ · ಸರಕು ಸಾಗಣೆ ಮೂಲಸೌಕರ್ಯದಲ್ಲಿ ಕ್ರಾಂತಿ ಉಂಟುಮಾಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಪ್ರತಿಜ್ಞೆ · ಥಾಯ್ಲೆಂಡ್ ಮೂಲಕ ಆಗ್ನೇಯ ಏಷ್ಯಾದಲ್ಲಿಯೂ ಕಾರ್ಯಾಚರಣೆ ಆರಂಭ ಬೆಂಗಳೂರು, 04 ಡಿಸೆಂಬರ್ 2023: ಡ್ರೈವರ್ ಲಾಜಿಸ್ಟಿಕ್ಸ್, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸರಕು ಸಾಗಣೆ ಸೇವಾ ಸಂಸ್ಥೆ, ಕರ್ನಾಟಕದಲ್ಲಿ ತನ್ನ ಬಹುಗ್ರಾಹಕ ಉಗ್ರಾಣ ಮತ್ತು ಭಾಗಶಃ ಟ್ರಕ್ ಲೋಡ್ ಕಾರ್ಯಾಚರಣೆಗಳನ್ನು ಆರಂಭಿಸಿದೆ. ಶ್ರೀ…

Read More

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅನ್ನು ನಾಮಾಶೇಷ ಮಾಡಿದ ಬಿಜೆಪಿ

ವಿಜಯ ದರ್ಪಣ ನ್ಯೂಸ್ ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ, ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಭಾರತೀಯ ಜನತಾ ಪಕ್ಷವು ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ನ್ನು ನಿರ್ಣಾಯಕವಾಗಿ ಸೋಲಿಸಿದೆ” ಎಂದು ಹೇಳಿದರು. “ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆಗಳ ಮೂಲಕ ಮೋದಿಯವರು ಮಾತ್ರ ಜನರ…

Read More

” ಡೀಪ್ ಪೇಕ್ ” ( Deep fake ) ಎಂದರೇನು ?…

ವಿಜಯ ದರ್ಪಣ ನ್ಯೂಸ್ ಬೆಂಗಳೂರು ” ಡೀಪ್ ಪೇಕ್ ” ( Deep fake ) ಎಂದರೇನು ?… ಇದೊಂದು ಗ್ರಾಫಿಕ್ ಅನಿಮೇಷನ್‌ ರೀತಿಯ ಕಂಪ್ಯೂಟರ್ ತಂತ್ರಜ್ಞಾನ ಮತ್ತು ಕಲೆ…….. ಇದರ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ಸಹ ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಆತಂಕಗೊಂಡಿದ್ದಾರೆ. ತೆಲಂಗಾಣ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಾಕಷ್ಟು ಜನ ಇದರ ಬಗ್ಗೆ ಚರ್ಚಿಸುತ್ತಿದ್ದಾರೆ…. ಸಾಮಾನ್ಯ ಜನರ ಸಾಮಾನ್ಯ ತಿಳಿವಳಿಕೆಗಾಗಿ ಒಂದಷ್ಟು ಸಾಮಾನ್ಯ ಮಾಹಿತಿ…. ಡೀಪ್ ಪೇಕ್ ಎಂಬ ಪದದ ಕನ್ನಡ…

Read More

ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ವಿಜಯ  ದರ್ಪಣ ನ್ಯೂಸ್  ಜಾರ್ಖಂಡ್ : ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಶೀಘ್ರದಲ್ಲೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಶಾ ಸ್ಪಷ್ಟಪಡಿಸಿದರು. ಎಡಪಂಥೀಯ ಉಗ್ರವಾದವು ದಶಕಗಳಿಂದ ಭಾರತದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ, ಆದರೆ ಸ್ವತಂತ್ರ ಭಾರತದ ನಂತರ ಯಾವುದೇ ಸರ್ಕಾರವು ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಿಲ್ಲ. ಎಡಪಂಥೀಯ…

Read More

ಕುಶಾಲನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ

ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆಯ ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ ಇಂದು ಸಾವಿರಾರು ಭಕ್ತರ ಹರ್ಷದ್ಗಾರದ ನಡುವೆ ಶ್ರುದ್ದಾ ಭಕ್ತಿಯಿಂದ ಜರುಗಿತು. ಅಯ್ಯಪ್ಪ ಮಾಲೆ ಧರಿಸಿದ ವೃತ್ತದಾರಿಗಳು ಕರ್ಪೂರ ಜ್ಯೋತಿ ಬೆಳಗಿಸಿದ ನಂತರ ರಥಕ್ಕೆ ಚಾಲನೆ ನೀಡಲಾಯಿತು. ಬೆಳಗಿನಿಂದಲೇ ತಂತ್ರಿಗಳು ಹಾಗೂ ಅರ್ಚಕರು ಗಣಪತಿಗೆ ವಿಶೇಷ ಅಭಿಷೇಕ ಪೂಜೆಗಳು ನೆರವೇರಿಸಿದರು. ದಕ್ಷಿಣ ಭಾರತದಲ್ಲಿ ಶ್ರೀ ಗಣಪತಿಗೆ ರಥೋತ್ಸವ ನೆರವೇರಿಸುವ ಕ್ಷೇತ್ರ ಕುಶಾಲನಗರ ಎಂಬ ಖ್ಯಾತಿಗೆ ಒಳಪಟ್ಟಿದೆ. ಮಧ್ಯಾಹ್ನ 1ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಿ ರಥ…

Read More

ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 30 : 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More

ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  *ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ* ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 30 (ಕರ್ನಾಟಕ ವಾರ್ತೆ): 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ…

Read More