ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ .
ವಿಜಯ ದರ್ಪಣ ನ್ಯೂಸ್ ಶ್ರೀರಂಗಪಟ್ಟಣ :- ಪಾರಂಪರಿಕ ನಗರಿ ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ದೊರೆದಿದ್ದು, ಜನಾಕರ್ಷಣೀಯ ಜಂಬೂ ಸವಾರಿ ಮೆರವಣಿಗೆ ವೈಭವದಿಂದ ನಡೆಯಿತು. ದಸರಾದ ಮೂಲ ನೆಲೆ ಶ್ರೀರಂಗಪಟ್ಟಣದಲ್ಲಿ ಜಂಬೂಸವಾರಿ ಮೆರವಣಿಗೆ ವೈಭವ ಕಣ್ತುಂಬಿ ಕೊಂಡ ಜನತೆ ಪಾರಂಪರಿಕ ಉತ್ಸವಕ್ಕೆ ಮನಸೋತರು. ಬೆಂಗಳೂರು-ಮೈಸೂರು ಹೆದ್ದಾರಿಯ ಕಿರಗಸೂರು ವೃತ್ತದಲ್ಲಿರುವ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನೆರವೇರಿದ ನಂತರ ಅಲಂಕೃತ ವೇದಿಕೆಯಲ್ಲಿ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ…
