Editor VijayaDarpana

ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ .

ವಿಜಯ ದರ್ಪಣ ನ್ಯೂಸ್ ಶ್ರೀರಂಗಪಟ್ಟಣ :- ಪಾರಂಪರಿಕ ನಗರಿ ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ದೊರೆದಿದ್ದು, ಜನಾಕರ್ಷಣೀಯ ಜಂಬೂ ಸವಾರಿ ಮೆರವಣಿಗೆ ವೈಭವದಿಂದ ನಡೆಯಿತು. ದಸರಾದ ಮೂಲ ನೆಲೆ ಶ್ರೀರಂಗಪಟ್ಟಣದಲ್ಲಿ ಜಂಬೂಸವಾರಿ ಮೆರವಣಿಗೆ ವೈಭವ ಕಣ್ತುಂಬಿ ಕೊಂಡ ಜನತೆ ಪಾರಂಪರಿಕ ಉತ್ಸವಕ್ಕೆ ಮನಸೋತರು. ಬೆಂಗಳೂರು-ಮೈಸೂರು ಹೆದ್ದಾರಿಯ ಕಿರಗಸೂರು ವೃತ್ತದಲ್ಲಿರುವ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನೆರವೇರಿದ ನಂತರ ಅಲಂಕೃತ ವೇದಿಕೆಯಲ್ಲಿ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ…

Read More

ಮಡಿಕೇರಿ ಮಹಿಳಾ ದಸರಾ – ಸ್ಥಧಿ೯ಗಳು ಸ್ಥಳದಲ್ಲಿಯೇ ಅಕ್ಟೋಬರ್ 22ರಂದು ಹೆಸರು ನೋಂದಾಯಿಕೊಳ್ಳಲು ಆಹ್ವಾನ..

ವಿಜಯ ದರ್ಪಣ ನ್ಯೂಸ್  ಮಡಿಕೇರಿ ಅ.15- ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ನಗರಸಭಾ ಸದಸ್ಯೆಯರು, ಮಹಿಳೆಯರ ಬಳಗ, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೖದ್ದಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 22 ರಂದು ಭಾನುವಾರ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಿಳಾ ದಸರಾದ ವಿವಿಧ ಸ್ಪಧೆ೯ಗಳಿಗೆ ಸ್ಲಳದಲ್ಲಿಯೇ ಹೆಸರು ನೋಂದಾಯಿಸಬಹುದಾಗಿದೆ. ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಮತ್ತು ಮಹಿಳಾ ದಸರಾ ಸಮಿತಿ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ಜಂಟಿ ಪ್ರಕಣೆಯಲ್ಲಿ ತಿಳಿಸಿದ್ದಾರೆ. ಅ.22 ರಂದು…

Read More

ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭದೊಂದಿಗೆ ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಉಂಟಾಗಲಿದೆ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 15, 2023: ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ಕೇಂದ್ರವನ್ನು ಮುಖ್ಯ ಅತಿಥಿಗಳಾದ  ರಿಜ್ವಾನ್ ಅರ್ಷಾದ್, ವಿಧಾನಸಭೆ ಸದಸ್ಯರು, ಶಿವಾಜಿನಗರ, ಕರ್ನಾಟಕ ಅವರು  ನಾವೀದ್ ಅಹಮದ್ ಖಾನ್, ಕಾರ್ಯದರ್ಶಿ, ಮುಸ್ಲಿಂ ಆರ್ಫನೇಜ್,  ರಾಘಬ್ ಪ್ರಸಾದ್ ಪಾಂಡಾ, ಸಹ-ಸ್ಥಾಪಕರು ಮತ್ತು ಸಿಇಒ, ಸಂತಾನ ಮತ್ತು…

Read More

ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..

ವಿಜಯ ದರ್ಪಣ ನ್ಯೂಸ್  ಆಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿರುವ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and agriculture organization ( FAO ) ಸ್ಥಾಪಿಸಿದ…

Read More

ಮೈಸೂರು ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಅಗತ್ಯ ಸಹಕಾರ: ಶಾಸಕ ಜಿ.ಡಿ. ಹರೀಶ್‌ಗೌಡ

ವಿಜಯ ದರ್ಪಣ ನ್ಯೂಸ್ ಮೈಸೂರು ಅಕ್ಟೋಬರ್ 13: ಹುಣಸೂರು ತಾಲ್ಲೂಕು ಗಾವಡಗೆರೆಯ ಓಂ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲು ಉದ್ದೇಶಿಸಿರುವ ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ. ಹರೀಶ್‌ಗೌಡ ಭರವಸೆ ನೀಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಲಿರುವ ಸಮ್ಮೇಳನ ಸಂಬಂಧ ಶುಕ್ರವಾರ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತ ಕಾಪಾಡುವುದು…

Read More

ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯಿಂದ ಕಾವೇರಿ ಹೋರಾಟ ಮುಂದುವರಿಸಲು ತೀರ್ಮಾನ

ವಿಜಯ ದರ್ಪಣ ನ್ಯೂಸ್  ಮಂಡ್ಯ :- ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟ ಮುಂದುವರಿಸಲು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಿರ್ಣಯಿಸಿದೆ. ಮಂಡ್ಯ  ನಗರದ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿ ಸ್ಥಳದಲ್ಲಿ ನಡೆದ ಸಭೆಯಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನದಿ ನೀರು ಪ್ರಾಧಿಕಾರ ನೀರು ಬಿಡುಗಡೆ ಮಾಡುವಂತೆ ಆದೇಶ ಮಾಡಿರುವುದನ್ನು ಸಭೆ ತೀವ್ರವಾಗಿ ಖಂಡಿಸಿತು. ಕಾವೇರಿ ನದಿ ನೀರು…

Read More

ದಾಳಿಂಬೆ ಬೆಳೆ ನಿರ್ವಹಣೆಗೆ ಅವಶ್ಯಕ ಜ್ಞಾನ ಅಗತ್ಯ: ಗುಣವಂತ.ಜೆ

ವಿಜಯ ದರ್ಪಣ ನ್ಯೂಸ್ ಬಿಜ್ಜವರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 13:: ದಾಳಿಂಬೆ ಬೆಳೆಯನ್ನು ಸಮಗ್ರವಾಗಿ ನಿರ್ವಹಣೆ ಮಾಡಲು ರೈತರಿಗೆ ಅವಶ್ಯಕ ಜ್ಞಾನ ಅಗತ್ಯವಿದ್ದು ವಿಚಾರ ಸಂಕಿರಣ ಕಾರ್ಯಕ್ರಮ ಗಳು ಸಹಾಯವಾಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ದಾಳಿಂಬೆ ಬೆಳೆಯ ಕ್ಷೇತ್ರೋತ್ಸವ ಮತ್ತು ವಿಚಾರ ಸಂಕಿರಣ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ…

Read More

ಪಿ.ಎಂ ಮಣ್ಣೂರ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಪಿ.ಎಂ ಮಣ್ಣೂರ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ಬೆಂಗಳೂರು:ಹಿರಿಯ ಪತ್ರಕರ್ತ, ಸತ್ಯಕಾಮ ಪತ್ರಿಕೆ ಸಂಪಾದಕ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕಲಬುರ್ಗಿಯ ಪಿ.ಎಂ.ಮಣ್ಣೂರ (78)ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸುತ್ತದೆ. ಆರು ದಶಕಗಳ ಕಾಲ ಪತ್ರಕರ್ತರಾಗಿದ್ದ ಮಣ್ಣೂರ ಅವರು ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ. ಪತ್ರಕರ್ತರಾಗಿ 371(ಜೆ) ಹೋರಾಟದಲ್ಲಿ ತೊಡಗಿಸಿಕೊಂಡಿದ್ದನ್ನು KUWJ ಸ್ಮರಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ…

Read More

ಮಡಿಕೇರಿ ದಸರಾ ಅಲಂಕಾರ ಸ್ಪರ್ಧೆಗಳಿಗೆ ಆಹ್ವಾನ

ವಿಜಯ ದರ್ಪಣ ನ್ಯೂಸ್ ಮಡಿಕೇರಿ ದಸರಾ ಅಲಂಕಾರ ಸ್ಪರ್ಧೆಗಳಿಗೆ ಆಹ್ವಾನ ಮಡಿಕೇರಿ ಅಕ್ಟೋಬರ್ 12: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಸಂಪ್ರದಾಯಿಕವಾಗಿ ನಡೆಯುತ್ತಿದು ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ವತಿಯಿಂದ ನವರಾತ್ರಿ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ   ಅಕ್ಟೋಬರ್ 15 ರಂದು ಕರಗ ಸಾಗುವ ರಸ್ತೆಯಲ್ಲಿ ರಂಗೋಲಿ ಸ್ಪರ್ಧೆ ಆಯೋಜಿತವಾಗಿದ್ದು ಚುಕ್ಕಿ,, ಪುಡಿ. ಎಳೆ.ಮತ್ತು ಪುಷ್ಪ ರಂಗೋಲಿ ವಿಭಾಗಗಳ ಸ್ಪರ್ಧೆಗಳು ಜರುಗಲಿದೆ. ಅಕ್ಟೋಬರ್ 23 ರಂದು ಆಯುಧ ಪೂಜೆ ಅಂಗವಾಗಿ…

Read More

ಕೆಯುಡಬ್ಯುಜೆ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

 ವಿಜಯ ದರ್ಪಣ ನ್ಯೂಸ್ ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿಛಾಯಾಚಿತ್ರ/ವಿಡಿಯೊ ಕ್ಲಿಪ್ಪಿಂಗ್ ಆಹ್ವಾನಿಸಲಾಗಿದೆ. ಮಾಧ್ಯಮದಲ್ಲಿ ಪ್ರಕಟವಾದ/ಪ್ರಸಾರವಾದ ವರದಿ ಸಹಿತ ಅರ್ಜಿಗಳನ್ನು ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರೋಡ್, ಬೆಂಗಳೂರು-560009 ಇಲ್ಲಿಗೆ ದಿನಾಂಕ 30.10.2023 ರೊಳಗಾಗಿ ತಲಪುವಂತೆ ಕಳುಹಿಸಲು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ…

Read More