ಖಿನ್ನತೆಯಿಂದ ಹೊರ ಬಂದರೆ ಉಲ್ಲಾಸದ ಜೀವನ
ವಿಜಯ ದರ್ಪಣ ನ್ಯೂಸ್…. ಖಿನ್ನತೆಯಿಂದ ಹೊರ ಬಂದರೆ ಉಲ್ಲಾಸದ ಜೀವನ ಲೇಖನ ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಈಗಿನ ಜೀವನ ಕಾದ ಹೆಂಚಿನ ಮೇಲೆ ನಿಂತಂತಿದೆ. ಪ್ರತಿದಿನ ಒತ್ತಡ ಆತಂಕ ಇದ್ದೇ ಇರುತ್ತದೆ. ಹೀಗಾಗಿ ನಾವೆಲ್ಲ ಬೇರೆ ಬೇರೆ ಮಾನಸಿಕ ಕಾಯಿಲೆಗಳಿಗೆ ಈಡಾಗುವುದು ಸಾಮಾನ್ಯ ಎನ್ನುವಂತಾಗಿದೆ. ಇಂದು ಲಕ್ಷಾಂತರ ಜನರು ಖಿನ್ನತೆ ಮತ್ತು ಆತಂಕದಿಂದ ಬಳಲುತ್ತಿದ್ದಾರೆ. ಅದರ ಕಾರಣಗಳು ಹಲವು ಆಗಿರಬಹುದು. ಪ್ರೀತಿಪಾತ್ರರ ಹಠಾತ್ ಕಳೆದುಕೊಳ್ಳುವಿಕೆ. ಜೀವನಶೈಲಿಯ ಬದಲಾವಣೆಗಳು ದುಃಖ, ಮಾನಸಿಕ, ದೈಹಿಕ…
