ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ
ವಿಜಯ ದರ್ಪಣ ನ್ಯೂಸ್…. ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ ಬೆಂಗಳೂರು ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡಲು ಸಿದ್ಧರಾಗಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ ಕಣಕ್ಕೆ ಇಳಿಸೋಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಸೂಚಿಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಯಾರೂ ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ. ಒಬ್ಬ ಕಾರ್ಯಕರ್ತ ಎಂದು ಕರೆಯಿರಿ ಸಾಕು….
