Editor VijayaDarpana

ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್….. ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಶಿವಶಂಕರ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ20 :-ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

Read More

ಸಾರ್ಥಕ ಸಂಭ್ರಮ.

ವಿಜಯ ದರ್ಪಣ ನ್ಯೂಸ್… ಸಾರ್ಥಕ ಸಂಭ್ರಮ. ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿಯಲ್ಲಿ ಇತ್ತೀಚೆಗೆ ಮೂರು ದಿನ ಸಿದ್ಧಾರೂಢ ಮಿಷನ್ ನ 25 ರ ಸಂಭ್ರಮ ಅದ್ದೂರಿಯಾಗಿ ನಡೆಯಿತು. ಸಿದ್ಧಾರೂಢ ಮಿಷನ್ ನ ಅಧ್ಯಕ್ಷ ಡಾ. ಆರೂಢಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಸಿಂಧಗಿಯ ಶಾಂತಗಂಗಾಧರ ಶ್ರೀಗಳು ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣ ಮಾಡಿದರು. ಜಪಯಜ್ಞ ಗೀತೆ ವಚನ ಸಿದ್ಧಾರೂಢ ಚರಿತ್ರೆ ಪಾರಾಯಣದ ಬಳಿಕ ರಾಮಚಂದ್ರಾಪುರ ಮಠದ ಜಗದ್ಗುರು ರಾಘವೇಶ್ವರ ಭಾರತೀ ಶ್ರೀಗಳು ಅದ್ವೈತ ಕುರಿತು ಉಪನ್ಯಾಸ ನೀಡಿದರು. “ವ್ಯವಹಾರದಲ್ಲಿ ಏನೆಲ್ಲ ಭೇದ…

Read More

ಶ್ರೀ ಎಚ್ ಡಿ ದೇವೇಗೌಡ, 92, ನಾಟ್ ಔಟ್, ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ……..

ವಿಜಯ ದರ್ಪಣ ನ್ಯೂಸ್…. ಶ್ರೀ ಎಚ್ ಡಿ ದೇವೇಗೌಡ, 92, ನಾಟ್ ಔಟ್, ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ……..   ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ ಅಧಿಕಾರಕ್ಕೆ ಏರುವುದು ಎಷ್ಟು ಸೋಜಿಗವೋ, ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ…….. ಕೆಲವು ಪದ ವಿಶೇಷಣಗಳನ್ನು ಬಳಸಿ ಅವರ ಸಾಧನೆಗಳನ್ನು ವರ್ಣಿಸುವುದು ಒಂದು ಮುಖವಾದರೆ, ಅಷ್ಟೇ ಕೆಟ್ಟ ಪದ ವಿಶೇಷಣಗಳನ್ನು ಬಳಸಿ…

Read More

ಜೀವನ ನಮ್ಮದೇ ಪ್ರತಿಬಿಂಬ : ಜಯಶ್ರೀ ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್…. 🌻ದಿನಕ್ಕೊಂದು ಕಥೆ🌻 ಜೀವನ ನಮ್ಮದೇ ಪ್ರತಿಬಿಂಬ.. ಅಣ್ಣ-ತಂಗಿ ನಡುವಿನ ಜಗಳ ತಾರಕಕ್ಕೇರಿ, ತಂಗಿಯ ಗೊಂಬೆಯನ್ನು ಅಣ್ಣ ಒಡೆದುಹಾಕಿದ. ಅದಕ್ಕೆ ತಾಯಿ ಗದರಿದಳು. ತಂಗಿಯೆದುರು ಅವಮಾನವಾಯಿತೆಂದು ಭಾವಿಸಿದ ಮಗ ತಾಯಿಗೇ ಎದುರುತ್ತರ ನೀಡಿದ, ಬಿರುನುಡಿಗಳನ್ನಾಡಿದ. ಆವೇಶದಲ್ಲಿ ಮನೆಬಿಟ್ಟು ಊರಾಚೆಯ ಬೆಟ್ಟದ ಬಳಿ ಬಂದ. ಅಮ್ಮನ ಗದರಿಕೆಯನ್ನು ಮನದಲ್ಲಿಟ್ಟುಕೊಂಡು ‘ನಾನು ನಿನ್ನನ್ನು ದ್ವೇಷಿಸುತ್ತೇನೆ’ ಎಂದು ಜೋರಾಗಿ ಕಿರುಚಿದ. ಕ್ಷಣಾರ್ಧದಲ್ಲೇ ‘ನಾನು ನಿನ್ನನ್ನು ದ್ವೇಷಿಸುತ್ತೇನೆ’ ಎಂಬ ಮಾರ್ನಡಿ ಅವನ ಕಿವಿಗಪ್ಪಳಿಸಿತು. ಬಾಲಕನಿಗೆ ಭಯವಾಗಿ ಮನೆಗೆ ಓಡಿಬಂದು ಅಮ್ಮನ…

Read More

ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ……

ವಿಜಯ ದರ್ಪಣ ನ್ಯೂಸ್… ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ…… ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ ಇಂದಿಗೂ ಅನುಭವವೇ ಆಗಿಲ್ಲ. ಆದರೆ ಅಪ್ಪನಲ್ಲದೆ ಇನ್ನೊಂದು ಸಂಬಂಧವೇ ನನಗೆ ತಿಳಿದಿಲ್ಲ. ನನ್ನ ಬೆಳಗು, ನನ್ನ ಸ್ನಾನ, ನನ್ನ ತಿಂಡಿ, ನನ್ನ ಊಟ, ನನ್ನ ಅಳು, ನನ್ನ ನಗು, ನನ್ನ ಕೋಪ, ನನ್ನ ಸ್ಹೇಹಿತ, ನನ್ನ ಶತ್ರು, ನನ್ನ ನಿದ್ದೆ…

Read More

ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಆದೇಶ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ -2024 ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ.18  : ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂನ್ 03 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ…

Read More

ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ವಿವರ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ವಿವರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 18 : ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ 1)…

Read More

ಸತ್ಯ…….. ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ವಿಜಯ ದರ್ಪಣ ನ್ಯೂಸ್… ಸತ್ಯ…….. ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ…….. ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ ಸತ್ಯದ ಹುಡುಕಾಟ ನಿರಂತರವಾಗಿರಲಿ….. ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ, ಸತ್ಯದ ಹುಡುಕಾಟ ನಿರಂತರವಾಗಿರಲಿ……. ನಿಮ್ಮ ಜ್ಞಾನದ ಮಟ್ಟ ತುಂಬಿ…

Read More

ಸರ್ಕಾರಿ ನೌಕರರ ಕ್ರೀಡಾಕೂಟ: ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಸೂಚನೆ

ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರರ ಕ್ರೀಡಾಕೂಟ: ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 16  : 2023-24 ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂನ್. 21 ರಂದು ಹೊಸಕೋಟೆಯ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ…

Read More

ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ………

ವಿಜಯ ದರ್ಪಣ ನ್ಯೂಸ್… ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ……… ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್ತಾ ಸಮಾಜ ಸೇವೆ ಮಾಡುತ್ತಿದ್ದಾರೆ……. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ. ದಾನಿಗಳಿಂದ ಒಂದಷ್ಟು ಹಣ ಸಂಗ್ರಹಿಸಿ, ತನ್ನದೇ ಒಂದು ತಂಡ ಕಟ್ಟಿಕೊಂಡು, ಈ ರೀತಿ ಊರೂರು ಸುತ್ತುತ್ತಾ ಸರ್ಕಾರಿ ಶಾಲೆಗಳನ್ನು…

Read More