ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು

ವಿಜಯ ದರ್ಪಣ ನ್ಯೂಸ್….. ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ ಗೆ ಅನುಮತಿ ನೀಡಿರುವುದರ ವಿರುದ್ಧ ಸ್ಥಳೀಯರಿಂದ ನಿರಂತರವಾಗಿ ಪ್ರತಿಭಟನೆಯೂ ನಡೆಯುತಿತ್ತು ಈ ಕುರಿತು ಜನಪ್ರತಿನಿಧಿಗಳು ಕ್ರಷರ್ ಸ್ಥಾಪಿಸುವ ಕುರಿತು ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿರೋಧದ ಮದ್ಯೆಯೂ ಕ್ರಷರ್ ಗೆ ರಸ್ತೆ ಕಾಮಗಾರಿಯನ್ನ ಕ್ವಾರಿ ಮಾಲೀಕರು ನಡೆಸುತಿದ್ದರು. ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ…

Read More

ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಂಜನೇಯ ಮತ್ತು ಕ್ಯಾತ್ಯಾಯಿನಿ ಆಯ್ಕೆ.

ವಿಜಯ ದರ್ಪಣ ನ್ಯೂಸ್…..  ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ  ಆಂಜನೇಯ ಮತ್ತು  ಕ್ಯಾತ್ಯಾಯಿನಿ ಆಯ್ಕೆ. ಶಿಡ್ಲಘಟ್ಟ : ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಹಾಗೂ ಆನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೂರಿನ ಕಾತ್ಯಾಯಿನಿ ಅವರು 2023ನೇ ಸಾಲಿನ ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ಏಪ್ರಿಲ್ 21ರಂದು ನಡೆಯುವ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ, ಜನತೆಗೆ ಉತ್ತಮ ಹಾಗೂ ಗುಣಮಟ್ಟದ ಸೇವೆ ನೀಡುತ್ತಿರುವ ಸರ್ಕಾರಿ…

Read More

ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ, ಊರ ಜಾತ್ರೆ ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ ,ಊರ ಜಾತ್ರೆ ಮಹೋತ್ಸವ  ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿಯಲ್ಲಿ ನೆಲೆಸಿರುವ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನಾ ಮಹೋತ್ಸವದ 48ನೇ ದಿನದಂದು ದೀಪೋತ್ಸವ ಹಾಗೂ ಊರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಸ್ವಾಮಿಗೆ ಹೂವಿನ ಅಲಂಕಾರ, ಮಹಾ ಮಂಗಳಾರತಿ ನೆರವೇರಿಸಲಾಯಿತು,ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಗ್ರಾಮದ ಬೀದಿಗಳಲ್ಲಿ ಹಬ್ಬದ ಅಂಗವಾಗಿ ತಳಿರು ತೋರಣ ಕಟ್ಟಲಾಗಿದ್ದು, ರಂಗೋಲಿ, ದೀಪಗಳು…

Read More

ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ

ವಿಜಯ ದರ್ಪಣ ನ್ಯೂಸ್…. ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ ಶಿಡ್ಲಘಟ್ಟ : ತಾಲ್ಲೂಕಿನ ಪುರಾತನ ಕಾಲದ ಚಿಕ್ಕದಾಸರಹಳ್ಳಿಯ ಗುಟ್ಟಿನ ಮೇಲಿರುವ ಭೂನಿಳ ಸಮೇತ ಶ್ರೀಬ್ಯಾಟರಯಸ್ವಾಮಿ ದೇವಾಲಯದ ಪಕ್ಕದ ಕಲ್ಯಾಣಿಯನ್ನು ಟೈಟಾನ್ (Titan) ಕಂಪನಿಯ ನೆರವಿನಿಂದ ಸುಂದರವಾಗಿ ಪುನಶ್ಚೇತನ ಮಾಡಲಾಗಿದ್ದು, ಅದನ್ನು ತಾಲ್ಲೂಕು ಆಡಳಿತಕ್ಕೆ ಹಸ್ತಾಂತರ ಮಾಡಲಾಯಿತು. ತಹಶಿಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಪರಿಸರದ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಾಮಾಣಿಕ ಸಹಕಾರದೊಂದಿಗೆ…

Read More

ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್…. ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ದಾರ್ಮಿಕ ಪರಂಪರೆಯ ಭಾರತೀಯರ ಸಂಸ್ಕೃತಿಯನ್ನು ನಿರಂತರವಾದ ಧಾರ್ಮಿಕ ಕಾರ್ಯಗಳ ಮೂಲಕ ಮಾನಸಿಕ ನೆಮ್ಮದಿ, ಶಾಂತಿಯನ್ನು ಪಡೆಯಬಹುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸೋಮೇಶ್ವರಸ್ವಾಮಿ, ಶ್ರೀವೇಣುಗೋಪಾಲಸ್ವಾಮಿ ಹಾಗು ಶ್ರೀ ಯೋಗಿ ನಾರೇಯಣಯತೀಂದ್ರ ದೇವಾಲಯಗಳ ಮಹಾದ್ವಾರದ ಕಳಶಗಳ ಕುಂಭಾಭಿಷೇಕ, ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು…

Read More

ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ

ವಿಜಯ ದರ್ಪಣ ನ್ಯೂಸ್…. ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಹಿತ್ತಲಹಳ್ಳಿಗೆ ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಅವರು ಭೇಟಿ ನೀಡಿ ರೇಷ್ಮೆ ಕೃಷಿ ಮತ್ತು ಉದ್ಯಮದ ಬಗ್ಗೆ ಮಾಹಿತಿಯನ್ನು ಪಡೆದರು. ಹಿತ್ತಲಹಳ್ಳಿ ಗ್ರಾಮದ ಹಿಪ್ಪುನೇರಳೆ ತೋಟ, ರೇಷ್ಮೆ ಹುಳು ಸಾಕಾಣಿಕೆ ಮನೆ, ಚಂದ್ರಿಕೆ ಶೆಡ್‌ಗಳನ್ನು ವೀಕ್ಷಿಸಿದ ಬಳಿಕ ನಗರದಲ್ಲಿ ರೇಷ್ಮೆ ನೂಲು ಬಿಚ್ಚುವ ಘಟಕ, ಆಟೋಮ್ಯಾಟಿಕ್ ರೀಲಿಂಗ್ ಯಂತ್ರ (ಎ.ಆರ್.ಎಂ), ಮಲ್ಟಿ ಎಂಡ್ ಮಿಷನ್…

Read More

ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನೆಲೆಸಿರುವ ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗವನ್ನು ಭಕ್ತಿಬಾವ ಪರವಶಗಳಿಂದ ರಾತ್ರಿ ವಿಜೃಂಭಣೆಯಿಂದ ಆಚರಿಸಿದರು. ಗ್ರಾಮದಲ್ಲಿ ನಡೆಯುತ್ತಿರುವ 37 ನೇ ವರ್ಷದ ಹೂವಿನ ಕರಗ ಮಹೋತ್ಸವದಲ್ಲಿ ಗ್ರಾಮಸ್ಥರು  ಹಾಗು ಸುತ್ತ ಮುತ್ತಲಿನ ಗ್ರಾಮಗಳವರು ಭಾಗಿಯಾಗಿದ್ದರು,ಮನೆಗಳ ಮುಂದೆ ರಂಗೋಲಿ ಬಿಡಿಸಿ ಕರಗಕ್ಕೆ ಆರತಿ ಬೆಳಗಿ ಮಲ್ಲಿಗೆ ಹೂವನ್ನು ಅರ್ಪಿಸಿ ಅಮ್ಮನವರ ಆಸಿರ್ವಾದ ಪಡೆದರು. ವಹ್ನಿಕುಲ ಕ್ಷತ್ರಿಯರ ವತಿಯಿಂದ…

Read More

ಬಿ.ಆರ್.ಅಂಬೇಡ್ಕ‌ರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್… ಬಿ.ಆರ್. ಅಂಬೇಡ್ಕರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕ‌ರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ ನಮ್ಮ ರಕ್ಷಣೆಗೆ ಕಾನೂನು ನೀಡಿದ್ದಾರೆ ಇವೆಲ್ಲವನ್ನು ಅರಿತುಕೊಳ್ಳಬೇಕಿದ್ದು ನಾವು ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ಶಿಡ್ಲಘಟ್ಟ ನಗರದ ನ್ಯಾಯಾಲಯದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕ‌ರ್…

Read More

ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ

ವಿಜಯ ದರ್ಪಣ ನ್ಯೂಸ್….. ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ ಶಿಡ್ಲಘಟ್ಟ : ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯಲ್ಲಿ ಉನ್ನತ ಶಿಕ್ಷಣ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಭಾಗಿಯಾಗಿ ಬೆಳ್ಳೂಟಿ ಸಂತೋಷ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಇದಕ್ಕು ಮುನ್ನ ಬೆಳ್ಳೂಟಿ ಗ್ರಾಮದ ಶ್ರೀಗುಟ್ಟಾಂಜನೆಯಸ್ವಾಮಿ ಕಲ್ಯಾಣ ಮಂಟಪಕ್ಕೆ ಬೇಟಿ ನೀಡಿ ಕಲ್ಯಾಣ ಮಂಟಪವನ್ನು ವೀಕ್ಷಣೆ ಮಾಡಿ ಕಲ್ಯಾಣ ಮಂಟಪದ ಅಭಿವೃದ್ಧಿಯ ಬಗ್ಗೆ…

Read More

ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್….. ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಜಾತಿ ಗಣತಿ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ ಆದ ಕಾರಣ “ಜಾತಿ ಗಣತಿ ಮಂಡನೆ”ಗೆ ನಮ್ಮ ವಿರೋಧವಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರದಿಗೆ ಮಾತನಾಡಿದ ಅವರು ಜಾತಿ ಗಣತಿ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿರುವುದು ಮತ್ತು ಬಳಿಕ ಆ ವರದಿಯದ್ದೇ ಎನ್ನಲಾದ ಮಾಹಿತಿ ಸೋರಿಕೆ ಆಗಿರುವ ಹಿನ್ನೆಲೆಯಲ್ಲಿ…

Read More