ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ

ವಿಜಯ ದರ್ಪಣ ನ್ಯೂಸ್…… ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ ಶಿಡ್ಲಘಟ್ಟ : ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಪುರಬೈರೇನಹಳ್ಳಿ ಬಳಿ ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಸರ್ಕಾರದ ವಿವಿಧ ಇಲಾಖೆಗಳು ಅನುಮತಿ ನೀಡಿದ್ದು ಅದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯಿಂದ ಯಾವುದೆ ರೀತಿಯ ಪರವಾನಗಿ ನೀಡಬಾರದು ಎಂದು ಪುರಬೈರೇನಹಳ್ಳಿ ಸುತ್ತ ಮುತ್ತಲ ಗ್ರಾಮಸ್ಥರು ದಿಬ್ಬೂರಹಳ್ಳಿ ಗ್ರಾಮಪಂಚಾಯಿತಿ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲ್ಲೂಕಿನ…

Read More

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ.

ವಿಜಯ ದರ್ಪಣ ನ್ಯೂಸ್…. ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಶಿಡ್ಲಘಟ್ಟದ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ. ಶಿಡ್ಲಘಟ್ಟ: ತಾಲ್ಲೂಕಿನ ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘಗಳ ಕ್ಷೇತ್ರದಿಂದ ಎ.ನಾಗರಾಜ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ಸ್ಕೂಲ್ ನಾಗರಾಜ್ ಅವಿರೋಧ ಆಯ್ಕೆಯಾಗಿದ್ದು ಅವರ ಅಭಿಮಾನಿಗಳು, ಬೆಂಬಲಿಗರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ತಾಲ್ಲೂಕಿನ ಎಸ್‌ಎಫ್‌ಸಿಎಸ್…

Read More

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ 

ವಿಜಯ ದರ್ಪಣ ನ್ಯೂಸ್….  ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ಶಿಡ್ಲಘಟ್ಟ : ಡಾ.ಬಿ.ಆರ್‌.ಅಂಬೇಡ್ಕ‌ರ್ ಆಶಯದಂತೆ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಹಾಗು ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೇಶದ ಸತ್ಪಜೆಗಳನ್ನಾಗಿ ರೂಪಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ತಿಳಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿಯಲ್ಲಿ ಅಂಬೇಡ್ಕರ್ ಮತ್ತು ಜಗಜೀವನ ರಾಷ್ಟ್ರ ಬಳಗದಿಂದ ಆಯೋಜಿಸಿದ್ದ ಅಂಬೇಡ್ಕರ್ ಹಾಗೂ ಬಾಬುಜಗಜೀವನ್ ರಾಂ ಜಯಂತಿಯಲ್ಲಿ ಬಾಗವಹಿಸಿ ಅವರು…

Read More

ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್… ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಬೆಳಗ್ಗೆಯಿಂದ ಸಂಜೆವರೆಗೂ ದುಡಿದರೂ ತಕ್ಕ ಕೂಲಿ ಸಿಗದೇ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ನಿರ್ದಿಷ್ಟ ಕೆಲಸದ ಅವಧಿಯಿಲ್ಲ, ದುಡಿಮೆ ಹೆಚ್ಚು, ಅನುಕೂಲ ಕಡಿಮೆ ಇವು ಇಂದಿನ ಕಾರ್ಮಿಕ ಪರಿಸ್ಥಿತಿಗಳು ವಿಶೇಷವಾಗಿ ರೇಷ್ಮೆ ಉದ್ಯಮದಲ್ಲಿ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಿಲ್ಲದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ…

Read More

ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ,  ಕುರಿಗಳು ಸಾವು 

ವಿಜಯ ದರ್ಪಣ ನ್ಯೂಸ್…. ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ,  ಕುರಿಗಳು ಸಾವು ಶಿಡ್ಲಘಟ್ಟ : ತಾಲ್ಲೂಕಿನ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕುರಿಗಳ ಹಿಂಡಿನ ಮೇಲೆ ಭಾನುವಾರ ತಡರಾತ್ರಿ ಹತ್ತಾರು ಬೀದಿ ನಾಯಿಗಳ ಗುಂಪು ದಾಳಿ ನಡೆಸಿ ಕುರಿಗಳ ಕತ್ತುಗಳನ್ನು ಕಚ್ಚಿ ಹಲ್ಲೆ ನಡೆಸಿದ ಪರಿಣಾಮ ಸುಮಾರು ೫ ಕುರಿಗಳು ಸಾವನ್ನಪ್ಪಿದ್ದು, ೪ ಕುರಿಗಳು ಗಂಭೀರ ಗಾಯಗೊಂಡಿವೆ. ಕುತ್ತಾಂಡಹಳ್ಳಿ ಗ್ರಾಮದ ಮುನಿವೆಂಕಟರಾಯಪ್ಪ ಎಂಬುವರಿಗೆ ಸೇರಿದ ಕುರಿಗಳು ಕುರಿ ದೊಡ್ಡಿಯಲ್ಲಿದ್ದಾಗ, ದೊಡ್ಡಿಗೆ ನುಗ್ಗಿದ ಬೀದಿ ನಾಯಿಗಳು ಕುರಿಗಳ ಮೇಲೆ ದಾಳಿ…

Read More

ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್

ವಿಜಯ ದರ್ಪಣ ನ್ಯೂಸ್….. ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಶಿಡ್ಲಘಟ್ಟ : ನಗರದಲ್ಲಿ ಮೊದಲಿನಿಂದಲೂ ಹಿಂದೂ-ಮುಸ್ಲಿಂ ಬಾಂಧವರಲ್ಲಿ ಶಾಂತಿ ಸೌಹಾರ್ದತ ನೆಲೆಸಿದ್ದು ಸಂತಸದ ವಿಷಯವಾಗಿದೆ‌ ಮುಂದೆಯೂ ಈ ರೀತಿಯ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದರು. ನಗರದ ನಗರ ಠಾಣೆಯಲ್ಲಿ ಮೇ-25 ರಂದು ನಡೆಯಲಿರುವ ಶ್ರೀರಾಮ ಶೋಭಾಯಾತ್ರೆ ಅಂಗವಾಗಿ ವಿವಿಧ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಶ್ರೀರಾಮ ಶೋಭಾ ಯಾತ್ರೆ ಸಂದರ್ಭದಲ್ಲಿ ನಗರದ ಪ್ರಮುಖ…

Read More

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್…. ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರ ಹುಟ್ಟು ಹಬ್ಬ ಆಚರಣೆ “* ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾಜಿ ಪ್ರದಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ಜನುಮ ದಿನದ ಪ್ರಯುಕ್ತ   ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಭೇಟಿ ಮಾಡಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ಅವರ ಆಶಿರ್ವಾದ ಪಡೆದರು.*” ಶಿಡ್ಲಘಟ್ಟ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರ 93ನೇ ಜನ್ಮದಿನವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು…

Read More

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ 

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಶಿಡ್ಲಘಟ್ಟ : ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ತಹಸೀಲ್ದಾರ್ ಬಿ.ಎನ್.ಸ್ವಾಮಿತಿಳಿಸಿದರು. ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಇಂದು ವಿಶ್ವ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಡೆಂಗ್ಯೂ ಜಾಗೃತಿ ಮತ್ತು ಜಾಥಾಕ್ಕೆ ಚಾಲನೆ ನೀಡಿ ಅವರು…

Read More

ನಾಟ್ಯಲೀಲ ಟ್ರಸ್ಟ್ ವತಿಯಿಂದ “ಮಾತೃ ವಂದನ” ನೃತ್ಯ ಪ್ರದರ್ಶನ

ವಿಜಯ ದರ್ಪಣ ನ್ಯೂಸ್….. ನಾಟ್ಯಲೀಲ ಟ್ರಸ್ಟ್ ವತಿಯಿಂದ “ಮಾತೃ ವಂದನ” ನೃತ್ಯ ಪ್ರದರ್ಶನ ಶಿಡ್ಲಘಟ್ಟ : ವಿಶ್ವ ಅಮ್ಮಂದಿರ ದಿನದ ಅಂಗವಾಗಿ ಬೆಂಗಳೂರಿನ ಗೊಟ್ಟಿಗೆರೆಯಲ್ಲಿ ನಾಟ್ಯಲೀಲ ಟ್ರಸ್ಟ್ ವತಿಯಿಂದ ಆಯೋಜಿಸಲಾದ “ಮಾತೃ ವಂದನ” ನೃತ್ಯ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ನಗರದ S.R.ಡ್ಯಾನ್ಸ್ ಅಕಾಡೆಮಿಯ ನೃತ್ಯಪಟುಗಳು ಗಮನ ಸೆಳೆದಿದ್ದಾರೆ. ಈ ವಿಶೇಷ ನೃತ್ಯೋತ್ಸವವು “ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ಸ್ಥಾನ ಪಡೆಯುವ ಗೌರವವನ್ನು ಸಂಪಾದಿಸಿದೆ. ಅಮ್ಮಂದಿರಿಗೆ ನೃತ್ಯದ ಮೂಲಕ ನಮನ ಸಲ್ಲಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ದೇಶದ…

Read More

ರೈತರು ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ನಿಗಮಗಳ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಫಲಾನುಭವಿಗಳಿಗೆ ನಿಗಮಗಳ ಸೌಲಭ್ಯಗಳನ್ನು ತಲುಪಿಸಲು ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ವಾಲ್ಮೀಕಿ ನಿಗಮದ ಜೊತೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬ ನಿಗಮ, ಭೋವಿ ಅಭಿವೃದ್ಧಿ ನಿಗಮ ಹಾಗು ಬಿಸಿಎಂಎ ದೇವರಾಜ ಅರಸು ಅಭಿವೃದ್ಧಿ ನಿಗಮಗಳಿಂದ ಈ ಯೋಜನೆಗಳನ್ನು ರೈತರು ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಅವರು ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 2021-22 ಹಾಗೂ…

Read More