ತಕ್ಷಣವೇ ಅಭಿವೃದ್ಧಿ ನಿಗಮ ಜಾರಿಮಾಡಲು ಅದೇನು ತರಕಾರಿ ತಾಯಮ್ಮನ ಅಂಗಡಿಯಲ್ಲಿ ಸಿಗುವ ತರಕಾರಿಯೇ?

ವಿಜಯ ದರ್ಪಣ ನ್ಯೂಸ್ ಮಡಿಕೇರಿ: ಚುನಾವಣೆ ಪೂರ್ವದಲ್ಲಿ ಕೊಡಗು ಜಿಲ್ಲೆಗೆ ಸೀಮಿತವಾದ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿ ಅದನ್ನು ಎ.ಎಸ್ ಪೊನ್ನಣ್ಣ ನವರು ಬಿಡುಗಡೆ ಮಾಡಿದ್ದರು.ನಂತರ ಡಾ ಮಂತರ್ ಗೌಡ ರವರ ಪ್ರಣಾಳಿಕೆಯಲ್ಲಿ ಕೂಡ ಅವುಗಳಿಗೆ ಆದ್ಯತೆ ನೀಡಿದ್ದರು.ಒಟ್ಟು ಇಪ್ಪತ್ತೆಂಟು ಭರವಸೆಗಳಿದ್ದು ಅವುಗಳಲ್ಲಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕೂಡ ಒಂದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಯ ಜವಾಬ್ದಾರಿ ಶಾಸಕದ್ವಯರ ಹೊಣೆಗಾರಿಕೆಯಾಗಿದೆ.ಅದನ್ನು ಖಂಡಿತವಾಗಿ ಅವರು ಮಾಡಲು ಸಿದ್ದರಿದ್ದು ಈಗಾಗಲೇ ಪ್ರಕ್ರಿಯೆಗಳು ಆರಂಭಗೊಂಡಿದೆ. ಅಭಿವೃದ್ಧಿ ನಿಗಮ ಸ್ಥಾಪನೆ ಎನ್ನುವುದು…

Read More

ಹರೆಯದ ಮಕ್ಕಳನ್ನು ಬೆಳೆಸುವಲ್ಲಿ ಪೋಷಕರ ಪಾತ್ರ ಬಹು ಮುಖ್ಯ: ಜಯಂತಿ ರೈ

ವಿಜಯ ದರ್ಪಣ ನ್ಯೂಸ್. ಆಡಿ ಬಾ ಎನ ಕಂದ ಅಂಗಾಲ ತೊಳೆದೆನಾ………..  ಎಂದು ಪುಟ್ಟ ಕಂದನಿಗೆ ನೆನ್ನೆ ಮೊನ್ನೆವರೆಗೆ ಹೇಳುತಿದ್ದ ಅಮ್ಮ ಈಗೀಗ ಆಡಲು ಬಿಡುತಿಲ್ಲ, ಹೆಚ್ಚಾಗಿ ಹೊರಗೆ ಸ್ನೇಹಿತರೊಂದಿಗೆ ಬೆರೆಯಲು ಬಿಡಲ್ಲ ಯಾಕೆ ಅಮ್ಮ ಈ ರೀತಿ ಬದಲಾದಳು? ಹೆತ್ತಮ್ಮನ ಮನದಲ್ಲಿ ಯಾರಿಗೂ ಹೇಳಿಕೊಳ್ಳಲಾಗದ ಅವ್ಯಕ್ತ ಭಯ ಆವರಿಸಿದೆ. ತನ್ನ ಕಂದ ಮನೆಯಿಂದ ಶಾಲೆ/ ಕಾಲೇಜಿಗೆ ಹೊರಟಾಗ ಕಣ್ಣಿಗೆ ಕಾಣದ ದೇವರಲ್ಲಿ ಕಣ್ತುಂಬಿಕೊಂಡು ಮೌನವಾಗಿ ಕೇಳಿಕೊಳ್ಳುವುದೊಂದೆ ಮಗು ಸುರಕ್ಷಿತವಾಗಿ ಮನೆಗೆ ಹಿಂತಿರುಗಿ ಬರಲೆಂದು. ಬಾಲ್ಯದಲ್ಲಿ ಮಕ್ಕಳು…

Read More

ಸಂಧ್ಯಾರಾಗ: ಜಯಂತಿ ರೈ.

ಸಂಧ್ಯಾರಾಗ ಬದುಕಿನ ಪಯಣದಲ್ಲಿ ಜೀವ ಸಂಕುಲ ವಯಸ್ಸಿನ ಪ್ರಭಾವಕ್ಕೆ ಒಳಗಾಗುವುದು ಸೃಷ್ಟಿಯ ನಿಯಮ. ಹುಟ್ಟು ಸಾವಿನ ಜೀವನ ಚಕ್ರದಲ್ಲಿ ವೃದ್ಧಾಪ್ಯದ ಕಾಲಘಟ್ಟವನ್ನು ದಾಟಿಯೇ ಮುಂದೆ ಸಾಗಬೇಕು. ಮಧ್ಯ ವಯಸ್ಸಿನವರೆಗೂ ಕಾಡದ ಅನೇಕ ಸಮಸ್ಯೆಗಳಾದ ಏಕಾಂಗಿತನ , ಅಭದ್ರತೆ , ಭಯ , ಆಸರೆಯ ಅಗತ್ಯತೆ , ತನ್ನಂತಾನೇ ಹಿರಿಯ ನಾಗರಿಕರಲ್ಲಿ ತಲೆದೋರುತ್ತದೆ. ಮಕ್ಕಳು ಮುಪ್ಪಿನಲ್ಲಿ ಆಧಾರವಾಗುವರೆಂದು ಪ್ರೀತಿಯಿಂದ ಬೆಳೆಸಿ ತಮ್ಮ ಕಷ್ಟಗಳಿಂದ ಮಕ್ಕಳು ನಲುಗಬಾರದೆಂಬ ದೃಷ್ಟಿಯಿಂದ ಬೆಳೆಸಿದ ಅನೇಕ ತಂದೆ ತಾಯಿಗಳಿಗೆ ಮುಪ್ಪಿನಲ್ಲಿ ಸಿಗುವುದಾದರೂ ಏನು? ….

Read More

ವೀರಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ ಶೀಘ್ರ ಪುನರ್ ಸ್ಥಾಪಿಸಿ: ಉದ್ಘಾಟನಾ ಫಲಕ ಸ್ತoಬ ಕೂಡ ಸ್ಮಾರಕದಂತೆ, ಸಂರಕ್ಷಿಸಲು ಅಧಿಕಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ .ಆಗಸ್ಟ್ 25  ರಾಷ್ಟ್ರಕಂಡ ಮಹಾನ್ ಸೇನಾ ನಾಯಕ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಶೀಘ್ರ ಪುನರ್ ಸ್ಥಾಪಿಸಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸ್ಥಳಾಂತರಿಸಲಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಹಾಗೂ ಸ್ಥಳೀಯ ಶಾಸಕ ಡಾ.ಮಂತರ್ ಗೌಡ…

Read More

ಮಡಿಕೇರಿ ನಗರದಲ್ಲಿ ಅನಧಿಕೃತ ಮಳಿಗಳ ನಿರ್ಮಾಣ : ಕಣ್ಮುಚ್ಚಿ ಕುಳಿತ ನಗರಸಭೆ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ , ಆಗಸ್ಟ್ 20  ಮಡಿಕೇರಿ ನಗರದ ಚಿಕ್ಕಪೇಟೆಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಹಳೆಯ ಮರ್ಕರ ಕ್ಲಿನಿಕ್ ಜಾಗದಲ್ಲಿ ಈಗ ನೂತನವಾಗಿ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಈ ಮಳಿಗಳಿಗೆ ಕೇವಲ ಒಂದು ವರ್ಷಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಹಾಗಿದ್ದರೂ ಇಲ್ಲಿ ನಿರ್ಮಾಣ ಆಗುತ್ತಿರುವ ವ್ಯಾಪಾರ ಮಳಿಗೆಗಳ ನಿರ್ಮಾಣದ ತಂತ್ರಜ್ಞಾನ ನೋಡಿದರೆ ಕಾಯಂ ಮಾಡಿದ ರೀತಿ ಕಾಣುತ್ತಿದೆ. ಈ ಮಳಿಗೆಗಳ ನಿರ್ಮಾಣದ ಸಮಯದಲ್ಲಿ ನಗರ ಸಭೆ ವತಿಯಿಂದ ಕೇವಲ 6 ಮಳಿಗೆಗಳಿಗೆ…

Read More

ನಾಗರ ಪಂಚಮಿ ಹಬ್ಬದ ಸಂಭ್ರಮ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ, ಆಗಸ್ಟ್ 20 ನಾಗರ ಪಂಚಮಿ ಹಬ್ಬದ ಸಂಭ್ರಮ. ಆಷಾಢ ಕಳೆದು ಎಲ್ಲ ಹಬ್ಬ ಹರಿದಿನಗಳಿಗೆ ಮುನ್ನುಡಿಯಿಡುವುದು ನಾಗರ ಪಂಚಮಿ ಹಬ್ಬ. ಈ ಹಬ್ಬವು ಮುಂದೆ ಬರಲಿರುವ ಸಾಲು ಸಾಲು ಹಬ್ಬಗಳಿಗೆ ಮೊದಲ ಮೆಟ್ಟಿಲು. ಹೆಂಗಳೆಯರು ಮಕ್ಕಳು ಸಂಭ್ರಮದಿಂದ ಸಂಭ್ರಮಿಸುವ ಹಬ್ಬ. ಹಿಂದೂ ಧರ್ಮದಲ್ಲಿ ನಾಗದೇವರಿಗೆ ವಿಶೇಷ ಮಹತ್ವವಿದೆ. ನಾಗರ ಪಂಚಮಿ ಹಬ್ಬದಂದು ಸಂತೋಷ ಸಮೃದ್ಧಿಯ ಬದುಕಿಗಾಗಿ ಹೊಲಗಳಲ್ಲಿನ ಬೆಳೆಗಳ ರಕ್ಷಣೆಗಾಗಿ ಹಾವುಗಳನ್ನು ಪೂಜಿಸಲಾಗುತ್ತದೆ. ನಾಗದೇವರಿಗೂ ಮನುಜರಿಗೂ ಅವಿನಾಭಾವ ಸಂಬಂಧ. ಜಗತ್ತಿನೆಲ್ಲೆಡೆ ಬೇರೆ…

Read More

ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ.

ವಿಜಯ ದರ್ಪಣ ನ್ಯೂಸ್. ಮಡಿಕೇರಿ. ಆಗಸ್ಟ್ 15 ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಅತಿಥಿಗಳಾಗಿ ಆಗಮಿಸಿದ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟದ ಬಗ್ಗೆ ಹಿತ ನುಡಿಗಳನ್ನಾಡಿದರು. ಅನಂತರ ವೇದಿಕೆಯ ವತಿಯಿಂದ ಮಂಗೆರ ಮುತ್ತಣ್ಣ ವೃತ್ತದಲ್ಲಿ ಶಾಲಾ ಮಕ್ಕಳು ಸಾರ್ವಜನಿಕರು…

Read More

ಪ್ರವಾಸಿಗರನ್ನು ಕೈಬೀಸಿ ಕರೆಯುತಿವೆ ಕೊಡಗಿನ ಜಲಪಾತಗಳು

ಕೊಡಗು ಜಿಲ್ಲೆ , ಸೋಮವಾರಪೇಟೆ ಈಚೆಗೆ 10 ದಿನಗಳ ಕಾಲ ಬಿಡದಂತೆ ಸುರಿದ ಭಾರಿ ಮಳೆಯಿಂದ  ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಮಳೆಗಾಲದಲ್ಲಿ ಜೀವ ತಳೆಯುವ ಜಲಪಾತಗಳು ಮೈದುಂಬಿದ್ದು, ಪ್ರವಾಸಿಗರನ್ನು ಇನ್ನಿಲ್ಲದಂತೆ ಆಕರ್ಷಿಸುತ್ತಿವೆ. ಬೆಟ್ಟ ಗುಡ್ಡಗಳು, ಕಾಫಿ ತೋಟಗಳಲ್ಲಿ ಅನೇಕ ಜಲಪಾತಗಳನ್ನು ಕಾಣಬಹುದು. ಮುಂಗಾರು ಪ್ರಾರಂಭವಾದೊಡನೆ ಸಾವಿರಾರು ಪ್ರವಾಸಿಗರು ಜಿಲ್ಲೆಯತ್ತ ಹಜ್ಜೆ ಇರಿಸುವುದು ಸಾಮಾನ್ಯ. ವಾರದ ಕೊನೆಯಲ್ಲಂತೂ ರಾಜ್ಯ ಸೇರಿದಂತೆ ಹೊರ ರಾಜ್ಯದ ಪ್ರವಾಸಿಗರು ಜಿಲ್ಲೆಗೆ ಆಗಮಿಸಿ ಮಳೆಯಲ್ಲಿ ಮಿಂದು ಜಲಪಾತಗಳ ಸೊಬಗನ್ನು ಸವಿದು ಹಿಂದಿರುಗುತ್ತಿದ್ದಾರೆ. ನಿಸರ್ಗ ರಮಣೀಯತೆಯನ್ನು ತನ್ನೊಡಲಲ್ಲಿ…

Read More

ಕೆಂಗಣ್ಣು (ಮದ್ರಾಸ್ ಐ)

ಕೆಂಗಣ್ಣು ====== ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿ ಕೊಳ್ಳುತ್ತಿದ್ದ ಕೆಂಪು ಕಣ್ಣು ಎಲ್ಲಾ ಕಡೆ ಈಗ ಮಳೆಗಾಲದಲ್ಲಿ ಶುರುವಾಗಿದ್ದು, ಮಳೆಯ ಬಗ್ಗೆ ಮಾತನಾಡುತ್ತಿರುವವರೆಲ್ಲ ಈ “ಮದ್ರಾಸ್ ಐ” ಬಗ್ಗೆ ಮಾತನಾಡ ತೊಡಗಿದ್ದಾರೆ. ಈಗ ಇದು ಸಾಧಾರಣವಾಗಿ ಮಕ್ಕಳಲ್ಲಿ ಹೆಚ್ಚು ಕಾಣಿಸಿ ಕೊಳ್ಳುತ್ತಿದೆ. ಇದು ವೈರಸ್ನಿಂದ ಬರುವ ರೋಗ. ಈ ವೈರಸ್ ಗಳು ಬಹಳ ಬೇಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಶಾಲೆಗಳಲ್ಲಿ ಮತ್ತು ವಿದ್ಯಾರ್ಥಿಗಳು ಜೊತೆಯಾಗಿರುವ ಹಾಸ್ಟೆಲ್ಗಳಲ್ಲಿ ಬಹಳ ಬೇಗ ಹರಡಿ, ಜನರು ಚಿಂತೆಗೆ ಒಳಗಾಗುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರಿಗೆ ಬಂದರೆ,…

Read More

ಉಳಿದ ಕಾಲು: ಡಾ. ಕೆ. ಬಿ. ಸೂರ್ಯ ಕುಮಾರ್

ವಿಜಯ ದರ್ಪಣ ನ್ಯೂಸ್, ಮಡಿಕೇರಿ  ಉಳಿದ ಕಾಲು ಡಾ. ಕೆ. ಬಿ. ಸೂರ್ಯ ಕುಮಾರ್ ಮಡಿಕೇರಿಯ ಜಿಲ್ಲಾಸ್ಪತ್ರೆಗೂ ಪಿರಿಯಾ ಪಟ್ಟಣ, ರಾಮನಾಥಪುರ, ಬೆಟ್ಟದಪುರಕ್ಕೂ ಅದೇನೋ ಅವಿಭಾಜ್ಯ ಸಂಬಂಧ. ಅಲ್ಲಿಯೇ ಹತ್ತಿರದಲ್ಲಿ ಆಸ್ಪತ್ರೆಗಳು ಇದ್ದರೂ ಅನೇಕ ರೋಗಿಗಳು ಇತ್ತ ಧಾವಿಸುವುದು ಇಂದಿಗೂ ನಡೆದಿದೆ. ಹಿಂದೆ ಆ ಭಾಗಗಳಲ್ಲಿ ಕ್ಷಯರೋಗ ತುಸು ಹೆಚ್ಚಾಗಿದ್ದು ಇಲ್ಲಿಗೆ ಬಂದು ದಾಖಲಾಗುತ್ತಿದ್ದವರ ಸಂಖ್ಯೆ ತುಂಬಾ ಜಾಸ್ತಿ ಇತ್ತು. ಆಗೆಲ್ಲಾ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಷಯ ರೋಗದ ಇಂಜೆಕ್ಷನ್, ಮಾತ್ರೆ ಮತ್ತು ವಾರ್ಡಿನಲ್ಲಿ ಪುಷ್ಠಿಕರವಾದ ಭೋಜನ, ಮೊಟ್ಟೆ…

Read More