ಮರಣವೇ ಮಹಾ ನವಮಿ…….

ವಿಜಯ ದರ್ಪಣ ನ್ಯೂಸ್…. ಮರಣವೇ ಮಹಾ ನವಮಿ……. ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ…

Read More

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12……

ವಿಜಯ ದರ್ಪಣ ನ್ಯೂಸ್…. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12…… ಹೊಟ್ಟೆ ಪಾಡಿನ ವೇಶ್ಯೆಯರ ನಂತರ ನನ್ನನ್ನು ಅತಿಹೆಚ್ಚು ಕಾಡುವುದು ಬಾಲ ಕಾರ್ಮಿಕರು. ಪುಟ್ಟ ಮಕ್ಕಳು ಆ ಎಳೆಯ ವಯಸ್ಸಿನಲ್ಲಿ ಅತ್ಯಂತ ಕಠಿಣ ಕೆಲಸಗಳನ್ನು ಮಾಡುವುದು ಮತ್ತು ಅದೇ ಸಮಯದಲ್ಲಿ ಕೆಲವು ಶ್ರೀಮಂತರ ಮಕ್ಕಳು ಮಾಡಬಾರದ ಮೋಜು ಮಸ್ತಿ ಮಾಡುವುದನ್ನು ನೋಡಲು ಹಿಂಸೆಯಾಗುತ್ತದೆ….. ನಾವೇ ಹುಟ್ಟಿಸಿದ ನಮ್ಮದೇ ಅತ್ಯಂತ ಮುದ್ದಾದ ಮಕ್ಕಳು ಹೊಟ್ಟೆ ಪಾಡಿಗಾಗಿ ಇನ್ನೊಬ್ಬರ ಬಳಿ ದೈನೇಸಿಯಾಗಿ ದುಡಿಯುವ ದೃಶ್ಯಗಳನ್ನು ಒಮ್ಮೆ ಸುಮ್ಮನೆ…

Read More

” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್…

ವಿಜಯ ದರ್ಪಣ ನ್ಯೂಸ್…. ” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್… ಅರ್ಥವಾಯಿತೆ ? ಅರ್ಥವಾಗದವರಿಗೆ ಮತ್ತು ಅದರ ಇನ್ನಷ್ಟು ಆಳವಾದ ಹಾಗು ನಮ್ಮ ಸಮಾಜದ ವಾಸ್ತವಕ್ಕೆ ಸರಿಹೊಂದಬಹುದಾದ ಸರಳ ಅರ್ಥ ನೀಡುವ ಪ್ರಯತ್ನ. ಇದು ಎಲ್ಲಾ ವಯಸ್ಸಿನ, ಎಲ್ಲಾ ಪ್ರದೇಶದ, ಎಲ್ಲಾ ವರ್ಗಗಳಿಗೂ ಅನ್ವಯಿಸುವ ಮಾತು. ಆದರೂ ಹೆಚ್ಚಾಗಿ ಯುವ ವಯಸ್ಸಿನವರಿಗೆ ತುಂಬಾ ಎಚ್ಚರಿಕೆಯ ಅರ್ಥ ಕೊಡುತ್ತದೆ. ಮೊದಲಿಗೆ ಕೆಟ್ಟವರು ಎಂದರೆ ಯಾರು ? ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸಾಮಾನ್ಯವಾಗಿ…

Read More

ಮಾನವೀಯತೆ ಕಳೆದು ಹೋಗುವ ಮುನ್ನ…….

ವಿಜಯ ದರ್ಪಣ ನ್ಯೂಸ್….. ಮಾನವೀಯತೆ ಕಳೆದು ಹೋಗುವ ಮುನ್ನ……. ಮಾನವೀಯತೆ ಕಳೆದು ಹೋಗುವ ಮುನ್ನ……. ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ, ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು ನಿಜಕ್ಕೂ ಅದರ ಮೂಲ ಸ್ವರೂಪದಲ್ಲಿ ಉಳಿಸಬೇಕಾದ ಅನಿವಾರ್ಯತೆ ಈಗ ಅತ್ಯಂತ ಪ್ರಮುಖ ವಿಷಯವಾಗಬೇಕಿದೆ…….. ಅಭಿವೃದ್ಧಿಯ, ಆಧುನಿಕತೆಯ, ತಾಂತ್ರಿಕ ಪ್ರಗತಿಯ ಲಾಭಗಳನ್ನು ನಾವು ಪಡೆಯಬೇಕಾದರೆ ಮಾನವೀಯ ಮೌಲ್ಯಗಳ ಉಳಿವು ಮತ್ತು ಬೆಳವಣಿಗೆ ಬಹುಮುಖ್ಯ ಅಂಶ. ಇಲ್ಲದಿದ್ದರೆ ಎಲ್ಲಾ ಪ್ರಗತಿಯು…

Read More

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ವಿಜಯ ದರ್ಪಣ ನ್ಯೂಸ್…. ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……   ಮುಗಿಲು ಮುಟ್ಟಿದ ಕ್ರಿಕೆಟ್ ಪ್ರೇಮಿಗಳ ಸಂಭ್ರಮ……. ಎಲ್ಲರಿಗೂ ಅಭಿನಂದನೆಗಳು, ಆದರೆ………. ಕ್ರೀಡಾ ಘನತೆಯನ್ನು – ಭಾರತದ ನಾಗರಿಕ ಪ್ರಜ್ಞೆಯನ್ನು ಉಳಿಸೋಣ ಮತ್ತು ವಿಶ್ವಕ್ಕೆ ಪ್ರಚರಿಸೋಣ………. ಕ್ರಿಕೆಟ್ ಒಂದು ಜೂಜಾಟವಲ್ಲ, ಮೋಜಿನಾಟವೂ ಅಲ್ಲ, ಮನರಂಜನೆಯೂ ಅಲ್ಲ, ವ್ಯಾಪಾರವು ಅಲ್ಲ, ದೇಶದ ಸ್ವಾಭಿಮಾನದ ಪ್ರಶ್ನೆಯೂ ಅಲ್ಲ,, ಅದೊಂದು ಕ್ರೀಡೆ, ಕೇವಲ ಕ್ರೀಡೆ ಮಾತ್ರ…….. ಅಂತಹ ಒಂದು ಸ್ಪರ್ದೆಯಲ್ಲಿ ನಿನ್ನೆ RCB ಗೆದ್ದಿದೆ. ಅದಕ್ಕೆ…

Read More

ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು…

ವಿಜಯ ದರ್ಪಣ ನ್ಯೂಸ್… ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು… ಪ್ರಖ್ಯಾತ ಸಿನಿಮಾ ನಟನೊಬ್ಬನನ್ನು ಕೊಲೆ ಆರೋಪದ ಖಚಿತ ಆಧಾರದ ಮೇಲೆ ಪಂಚತಾರಾ ಹೋಟೆಲ್ಲಿನ ವ್ಯಾಯಾಮ ಶಾಲೆಯಿಂದ ಬಂಧಿಸಿ ಕರೆತರಲಾಗುತ್ತದೆ. ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತದೆ. ಮಾಧ್ಯಮ ಲೋಕ ಪೊಲೀಸ್ ತನಿಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಕೊಲೆ ಆರೋಪಿ ಯಾವ ರೀತಿ ಕೊಲೆ ಮಾಡಿದ ಎಂಬುದನ್ನು ಬಹುತೇಕ ಮಾಧ್ಯಮಗಳು ತಮಗೆ ತೋಚಿದಂತೆ ಹೇಳುತ್ತವೆ. ಪೋಲಿಸ್ ತನಿಖಾ ವರದಿ ತುಂಬಾ ಸ್ಪಷ್ಟವಾಗಿ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸುತ್ತದೆ….

Read More

ಹಿಂಸೆಯ ಇತಿಹಾಸಕ್ಕೆ ಅಹಿಂಸೆಯ ನೆಲದಲ್ಲಿ ಕೊನೆ ಎಂದು ?

ವಿಜಯ ದರ್ಪಣ ನ್ಯೂಸ್…. ಹಿಂಸೆಯ ಇತಿಹಾಸಕ್ಕೆ ಅಹಿಂಸೆಯ ನೆಲದಲ್ಲಿ ಕೊನೆ ಎಂದು ? ರಾಯಲಸೀಮಾ ರಕ್ತ ಚರಿತ್ರ, ಭೀಮಾತೀರದ ಹಂತಕರು, ಚಂಬಲ್ ಕಣಿವೆಯ ದರೋಡೆಕೋರರು, ಮುಂಬೈಯ ಮಾಫಿಯಾ ಡಾನ್ಗಳು, ಕಾಶ್ಮೀರದ ಆಜಾದಿ – ಜಿಹಾದಿ ಭಯೋತ್ಪಾದಕರು, ಗೋಧ್ರಾ ಹತ್ಯಾಕಾಂಡದ ನರಹಂತಕರು, ಪಂಜಾಬಿನ ಖಾಲಿಸ್ತಾನ್ ಭಯೋತ್ಪಾದಕರು, ಕೇರಳ ಕಣ್ಣೂರಿನ ಸರಣಿ ಹತ್ಯೆಗಳು, ಮಂಗಳೂರಿನ ಪ್ರತಿಕಾರದ ಕೊಲೆಗಳು, ಛತ್ತೀಸ್ಗಡದ ನಕ್ಸಲ್ ಹತ್ಯೆಗಳು, ಉತ್ತರ ಪ್ರದೇಶದ ಮೀರತ್ ಕೋಮು ಗಲಭೆಗಳು, ದೆಹಲಿಯ ಸಿಖ್ ಹತ್ಯಾಕಾಂಡ, ಮಣಿಪುರದ ಜನಾಂಗೀಯ ಕೋಮು ದಳ್ಳುರಿ, ಅಸ್ಸಾಂನ…

Read More

ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ…..

ವಿಜಯ ದರ್ಪಣ ನ್ಯೂಸ್…. ಮಂಗಳೂರಿನ ಪ್ರತೀಕಾರದ ಕೋಮು ಹತ್ಯೆಗಳಿಗೆ ನಾವೇ ಇತಿಶ್ರೀ ಹಾಡಬೇಕಿದೆ…. ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ….. ತುಂಬಾ ಕಷ್ಟದ ಸಮಯ ಕಣ್ರೀ. ತಲೆಗೊಂದು ಮಾತನಾಡಬೇಡಿ. ಕೂಗಾಡಬೇಡಿ, ಕಿರುಚಾಡಬೇಡಿ. ಪೆಟ್ರೋಲ್ ಸುರಿಯಬೇಡಿ, ಬೆಂಕಿ ಹಚ್ಚಬೇಡಿ….. ಸ್ವಲ್ಪವೂ ಕಾಮನ್ ಸೆನ್ಸ್ ಇಲ್ಲವಲ್ರೀ. ಸಮಸ್ಯೆ ಒಂದೋ ಎರಡೋ ಅಲ್ಲ, ಹಲವಾರು….. ಕೊರೋನಾ ವೈರಸ್, ಭೀಕರ ಮಳೆ, ಪೆಹಲ್ಗಾಮ್ ಹತ್ಯಾಕಾಂಡ, ಪಾಕಿಸ್ತಾನದೊಂದಿಗೆ ಸಂಘರ್ಷ, ರೈತರ ಸಮಸ್ಯೆ, ಇವುಗಳ ಮಧ್ಯೆ ಹಿಂದೂ ಮುಸ್ಲಿಂ ಆಂತರಿಕ ಸಂಘರ್ಷ ಪ್ರಾರಂಭವಾದರೆ ಅದನ್ನು…

Read More

ಭಾಷೆ ಎಂಬ……..,

ವಿಜಯ ದರ್ಪಣ ನ್ಯೂಸ್… ಭಾಷೆ ಎಂಬ…….., ಭಾಷೆ ಎಂಬ ಭಾವ, ಭಾಷೆ ಎಂಬ ಸಂವಹನ ಮಾಧ್ಯಮ, ಭಾಷೆ ಎಂಬ ಸಂಸ್ಕೃತಿ, ಭಾಷೆ ಎಂಬ ಬದುಕು, ಭಾಷೆ ಎಂಬ ಅಭಿಮಾನ, ಭಾಷಾವಾರು ಪ್ರಾಂತ್ಯಗಳು, ಭಾಷೆ ಎಂಬ ಶ್ರೇಷ್ಠತೆಯ ವ್ಯಸನ, ಭಾಷೆ ಎಂಬ ಸಂಕುಚಿತತೆ, ಭಾಷೆ ಎಂಬ ಅನಾವಶ್ಯಕ ವಿವಾದಗಳು…….. ಯಾವ ಭಾಷೆ ಎಷ್ಟು ಹಳೆಯದು ? ಯಾವ ಭಾಷೆಯಿಂದ ಇನ್ಯಾವ ಭಾಷೆ ಹುಟ್ಟಿದೆ ? ಯಾವ ಭಾಷೆಯಿಂದ ಮತ್ಯಾವ ಭಾಷೆ ಸತ್ತಿದೆ ? ಯಾವ ಭಾಷೆ ಶ್ರೇಷ್ಠ ?…

Read More

ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು…….

ವಿಜಯ ದರ್ಪಣ ನ್ಯೂಸ್.. ಕನ್ನಡಿಗರ ಒಳಧ್ವನಿ……. ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು……. ತಮನ್ನಾ ಭಾಟಿಯಾ ಎಂಬ ಸಿನಿಮಾ ನಟಿಯನ್ನು ಕರ್ನಾಟಕದ ಪಾರಂಪರಿಕ ಉದ್ಯಮ ಸಂಸ್ಥೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ಮೈಸೂರ್ ಸ್ಯಾಂಡಲ್ ಸೋಪಿನ ಅಧಿಕೃತ ರಾಯಭಾರಿಯಾಗಿ ಆರು ಕೋಟಿಗೂ ಹೆಚ್ಚು ಹಣ ನೀಡಿ ಒಪ್ಪಂದ ಮಾಡಿಕೊಂಡಿದ್ದು, ಅದು ಬಹಿರಂಗವಾದ ತಕ್ಷಣವೇ ಬಹುತೇಕ ಕನ್ನಡ ನಾಡಿನ ಹೋರಾಟದ ಮನಸ್ಸುಗಳು ತೀಕ್ಷ್ಣ ಪ್ರತಿಕ್ರಿಯೆ ನೀಡಿ ಅದಕ್ಕೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದವು. ಸಂಸ್ಥೆಯ…

Read More