ಒಂದು ಕಹಿ ನೆನಪು ಮತ್ತು ಎಚ್ಚರಿಕೆ….. ಜೂನ್ 25 – 1975,

ವಿಜಯ ದರ್ಪಣ ನ್ಯೂಸ್….. ಒಂದು ಕಹಿ ನೆನಪು ಮತ್ತು ಎಚ್ಚರಿಕೆ….. ಜೂನ್ 25 – 1975, ಜೂನ್ 25 – 2025…. ಸರಿಯಾಗಿ 50 ವರ್ಷಗಳ ಹಿಂದೆ….. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ…… ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ಗಣರಾಜ್ಯಗಳ ಒಕ್ಕೂಟ ವ್ಯವಸ್ಥೆಯ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ…

Read More

ಮೂರನೇ ಮ‌ಹಾಯುಧ್ಧದ ಸಾಧ್ಯತೆ ಎಷ್ಟು ಮತ್ತು ಹೇಗೆ……..

ವಿಜಯ ದರ್ಪಣ ನ್ಯೂಸ್…. ಮೂರನೇ ಮ‌ಹಾಯುಧ್ಧದ ಸಾಧ್ಯತೆ ಎಷ್ಟು ಮತ್ತು ಹೇಗೆ…….. ಎರಡು ಮಹಾ ಯುದ್ಧಗಳ ಪ್ರಾಥಮಿಕ ಕಾರಣಗಳು, ಯುದ್ಧಪೂರ್ವದ ಬೆಳವಣಿಗೆಗಳು, ಯುದ್ಧ ಪ್ರಾರಂಭವಾಗಲು ಕಾರಣವಾದ ದಿಢೀರ್ ಘಟನೆಗಳು, ಯುದ್ಧ ಮುಂದುವರಿದ ರೀತಿ ಮತ್ತು ಯುದ್ಧ ಮುಕ್ತಾಯವಾಗಲು ತೆಗೆದುಕೊಂಡ ಸಮಯ ‌ಹಾಗು ಅದಕ್ಕೆ ಕಾರಣವಾದ ಅಂಶಗಳು, ನಂತರದ ಆಂತರಿಕ ಸಂಘರ್ಷಗಳು ಮುಂತಾದ ಈ ಎಲ್ಲವನ್ನು ಮತ್ತೊಮ್ಮೆ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಈಗ ನಡೆಯುತ್ತಿರುವ ಘಟನೆಗಳು ಸ್ವಲ್ಪಮಟ್ಟಿಗೆ ಅದಕ್ಕೆ ತಾಳೆಯಾಗುತ್ತದೆ ಜೊತೆಗೆ ಕೆಲವು ಸನ್ನಿವೇಶಗಳು ಸಂಪೂರ್ಣ ಭಿನ್ನವೂ ಆಗಿದೆ……. ಎರಡೂ…

Read More

ಲೋಕಾಯುಕ್ತ ಭ್ರಷ್ಟಾಚಾರ……

ವಿಜಯ ದರ್ಪಣ ನ್ಯೂಸ್… ಲೋಕಾಯುಕ್ತ ಭ್ರಷ್ಟಾಚಾರ…… ತಾಯ ಎದೆ ಹಾಲೆ ವಿಷವಾದರೆ, ಬೇಲಿಯೇ ಎದ್ದು ಹೊಲ ಮೇಯ್ದರೆ, ರಕ್ಷಕರೇ ಭಕ್ಷಕರಾದರೇ, ಕಾಯುವವರೇ ಕೊಲ್ಲುವವರಾದರೇ, ಲೋಕಾಯುಕ್ತವೇ ಭ್ರಷ್ಠವಾದರೆ, ಶಿವ ಶಿವ ಶಿವಾ…….. ಭ್ರಷ್ಟಾಚಾರವೆಂಬುದು ಎಷ್ಟು ವ್ಯಾಪಕವಾಗಿದೆ ಎಂದರೆ ಮನುಷ್ಯನ ದೇಹದ ನರ ನಾಡಿಗಳಲ್ಲೂ ಭ್ರಷ್ಟಾಚಾರದ ವಿಷ ತುಂಬಿಕೊಂಡಿರುವಂತಿದೆ. ಅಂದರೆ ಕೆಟ್ಟ, ಭ್ರಷ್ಟ ಹಣದ ಪ್ರಭಾವ ಇಡೀ ಸಮಾಜವನ್ನು ಆವರಿಸಿಕೊಂಡಿದೆ. ಹಣ ಹೇಗಾದರೂ ಇರಲಿ, ಹೇಗಾದರೂ ಬರಲಿ ಹಣದಿಂದ ಎಲ್ಲವನ್ನೂ ಪಡೆಯಬಹುದು ಎನ್ನುವ ಮನೋಭಾವನೆಯ ವಾತಾವರಣ ಎಲ್ಲರಲ್ಲೂ ನಿರ್ಮಾಣವಾಗಿದೆ. ಈ…

Read More

ಯೋಗ ಮತ್ತು ಧ್ಯಾನ,

ವಿಜಯ ದರ್ಪಣ ನ್ಯೂಸ್… ಯೋಗ ಮತ್ತು ಧ್ಯಾನ, ಧೀರ್ಘ ಲೇಖನ ಓದುವ ತಾಳ್ಮೆಯೂ ಇರಲಿ…. ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ ಮತ್ತು ಧ್ಯಾನದ ಪರಿಕಲ್ಪನೆಯ ಸುತ್ತ ಒಂದಷ್ಟು ಅನಿಸಿಕೆಗಳು…….. ಕಾಯಕವೇ ಕೈಲಾಸ ಎಂದು ತನ್ನ ಶ್ರಮದಿಂದಲೇ ತನ್ನ ಅಗತ್ಯಗಳನ್ನು ಪೂರೈಸಿಕೊಂಡು ಬದುಕನ್ನು ಸರಳವಾಗಿ, ಸಹಜವಾಗಿ, ಪ್ರಕೃತಿಯ ನಿಷ್ಠೆಯಿಂದ ಬದುಕು ಸಾಗಿಸುತ್ತಿದ್ದರೆ ಅದೇ ಖಂಡಿತವಾಗಲೂ ಅತ್ಯುತ್ತಮ ಜೀವನ ಶೈಲಿ. ಬಹುಶಃ ನಾಗರಿಕತೆಯ ಪ್ರಾರಂಭದಲ್ಲಿ ಮನುಷ್ಯ ಹೀಗೆ ಇತರ ಎಲ್ಲಾ ಪ್ರಾಣಿಗಳಂತೆ ಜೀವಿಸುತ್ತಿದ್ದನು. ಅಂದರೆ ಹೆಚ್ಚು…

Read More

ಹುಚ್ಚು ಯೋಚನೆ ಮತ್ತು ಯೋಜನೆ…….

ವಿಜಯ ದರ್ಪಣ ನ್ಯೂಸ್… ಹುಚ್ಚು ಯೋಚನೆ ಮತ್ತು ಯೋಜನೆ……. ಕಾವೇರಿ ಆರತಿ ಮತ್ತು ಕೆಆರ್‌ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ……….. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪಡ್ತೀರಿ. ಅದೊಂದು ಜೀವ ಜಲ. ಅದನ್ನು ಅದರ ಪಾಡಿಗೆ ಬಿಟ್ಟು ಬಿಡಿ…… ಕೃಷಿಗಾಗಿಯೋ, ಕುಡಿಯುವ ನೀರಿಗಾಗಿಯೋ ಎಷ್ಟು ಸಾಧ್ಯವೋ ಅಷ್ಟು ಅದನ್ನ ಸಹಜ ರೀತಿಯಲ್ಲೇ ಉಪಯೋಗಿಸಿಕೊಳ್ಳಿ ಅಷ್ಟೇ. ಅದು ನದಿಗೆ ನೀವು ಕೊಡಬಹುದಾದ ಬಹುದೊಡ್ಡ ಕೊಡುಗೆ….

Read More

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..

ವಿಜಯ ದರ್ಪಣ ನ್ಯೂಸ್….. ವಿಚಿತ್ರ ಸ್ವಾರ್ಥದ ನ್ಯಾಯ ನೀತಿ….. ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,……….. ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ…

Read More

ಅಪ್ಪನ ದಿನ…….. ತಂದೆ ಎಂಬ ಪಾತ್ರವ ಕುರಿತು……

ವಿಜಯ ದರ್ಪಣ ನ್ಯೂಸ್…. ಅಪ್ಪನ ದಿನ…….. ತಂದೆ ಎಂಬ ಪಾತ್ರವ ಕುರಿತು…… ಅಪ್ಪಾ………… ಸ್ವಲ್ಪ ಇಲ್ಲಿ ನೋಡಪ್ಪಾ……. ಅಪ್ಪನ ಬಗ್ಗೆ ಬರೆಯುವುದು ಏನೂ ಉಳಿದಿಲ್ಲ. ಎಲ್ಲವೂ ಬಟಾಬಯಲು. ಏಕೆಂದರೆ ಭಾರತೀಯ ಸಮಾಜ ಪುರುಷ ಪ್ರಧಾನ ಕೌಟುಂಬಿಕ ವ್ಯವಸ್ಥೆ ಹೊಂದಿದೆ. ( ಜಾಗತೀಕರಣದ ನಂತರ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾದ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾವಲಂಬನೆ ಸಾಧ್ಯವಾದ ನಂತರ ಸ್ವಲ್ಪ ಬದಲಾವಣೆ ಕಾಣುತ್ತಿದೆ. ) ಈ ದೇಶದ ಇಂದಿನ ಎಲ್ಲಾ ಪರಿಸ್ಥಿತಿಗಳ ಬಹುಮುಖ್ಯ ಪಾತ್ರದಾರಿ ಅಪ್ಪ, ಅಮ್ಮ…

Read More

ಮರಣವೇ ಮಹಾ ನವಮಿ…….

ವಿಜಯ ದರ್ಪಣ ನ್ಯೂಸ್…. ಮರಣವೇ ಮಹಾ ನವಮಿ……. ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ…

Read More

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12……

ವಿಜಯ ದರ್ಪಣ ನ್ಯೂಸ್…. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12…… ಹೊಟ್ಟೆ ಪಾಡಿನ ವೇಶ್ಯೆಯರ ನಂತರ ನನ್ನನ್ನು ಅತಿಹೆಚ್ಚು ಕಾಡುವುದು ಬಾಲ ಕಾರ್ಮಿಕರು. ಪುಟ್ಟ ಮಕ್ಕಳು ಆ ಎಳೆಯ ವಯಸ್ಸಿನಲ್ಲಿ ಅತ್ಯಂತ ಕಠಿಣ ಕೆಲಸಗಳನ್ನು ಮಾಡುವುದು ಮತ್ತು ಅದೇ ಸಮಯದಲ್ಲಿ ಕೆಲವು ಶ್ರೀಮಂತರ ಮಕ್ಕಳು ಮಾಡಬಾರದ ಮೋಜು ಮಸ್ತಿ ಮಾಡುವುದನ್ನು ನೋಡಲು ಹಿಂಸೆಯಾಗುತ್ತದೆ….. ನಾವೇ ಹುಟ್ಟಿಸಿದ ನಮ್ಮದೇ ಅತ್ಯಂತ ಮುದ್ದಾದ ಮಕ್ಕಳು ಹೊಟ್ಟೆ ಪಾಡಿಗಾಗಿ ಇನ್ನೊಬ್ಬರ ಬಳಿ ದೈನೇಸಿಯಾಗಿ ದುಡಿಯುವ ದೃಶ್ಯಗಳನ್ನು ಒಮ್ಮೆ ಸುಮ್ಮನೆ…

Read More

” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್…

ವಿಜಯ ದರ್ಪಣ ನ್ಯೂಸ್…. ” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್… ಅರ್ಥವಾಯಿತೆ ? ಅರ್ಥವಾಗದವರಿಗೆ ಮತ್ತು ಅದರ ಇನ್ನಷ್ಟು ಆಳವಾದ ಹಾಗು ನಮ್ಮ ಸಮಾಜದ ವಾಸ್ತವಕ್ಕೆ ಸರಿಹೊಂದಬಹುದಾದ ಸರಳ ಅರ್ಥ ನೀಡುವ ಪ್ರಯತ್ನ. ಇದು ಎಲ್ಲಾ ವಯಸ್ಸಿನ, ಎಲ್ಲಾ ಪ್ರದೇಶದ, ಎಲ್ಲಾ ವರ್ಗಗಳಿಗೂ ಅನ್ವಯಿಸುವ ಮಾತು. ಆದರೂ ಹೆಚ್ಚಾಗಿ ಯುವ ವಯಸ್ಸಿನವರಿಗೆ ತುಂಬಾ ಎಚ್ಚರಿಕೆಯ ಅರ್ಥ ಕೊಡುತ್ತದೆ. ಮೊದಲಿಗೆ ಕೆಟ್ಟವರು ಎಂದರೆ ಯಾರು ? ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸಾಮಾನ್ಯವಾಗಿ…

Read More