ದ್ವೇಷದ ಹೇಳಿಕೆಯೊಂದನ್ನು ನೀಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್

ವಿಜಯ ದರ್ಪಣ ನ್ಯೂಸ್….  ದ್ವೇಷದ ಹೇಳಿಕೆಯೊಂದನ್ನು ನೀಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಅತ್ಯಂತ ದ್ವೇಷದ ಹೇಳಿಕೆಯೊಂದನ್ನು ನೀಡಿದ್ದಾರೆ. ಹಿಂದೂ ಮುಸ್ಲಿಂ, ಪಾಕಿಸ್ತಾನ ಮತ್ತು ಭಾರತದ ನಡುವೆ ತುಂಬಾ ದ್ವೇಷ ಮತ್ತು ಅಸೂಯೆ ಬರುವ ರೀತಿಯಲ್ಲಿ ಉದ್ರೇಕಿಸಿ ಮಾತನಾಡಿದ್ದಾರೆ. ಸಾಗರೋತ್ತರ ಪಾಕಿಸ್ತಾನಿ ಪ್ರಜೆಗಳ ಸಮಾವೇಶದಲ್ಲಿ ಪಾಕಿಸ್ತಾನದ ಅಧ್ಯಕ್ಷರು ಮತ್ತು ಹಿರಿಯ ಸಚಿವರ ಸಮ್ಮುಖದಲ್ಲಿ ಈ ಮಾತನ್ನು ಹೇಳಿದ್ದಾರೆ. ಖಂಡಿತವಾಗಲೂ ಯಾವುದೇ ದೇಶದ ಸೈನಿಕ ಮುಖ್ಯಸ್ಥರು ಆ…

Read More

ವಿನಯವೆಂದರೆ ಮರ್ಯಾದೆಯಾಗಿ ಮಾತನಾಡುವುದು ಮಾತ್ರವಲ್ಲ, ವಿರೋಧಿಗೂ ಒಳ್ಳೆಯದನ್ನು ಮಾಡಬೇಕೆಂಬ ಇಚ್ಚೆ……..

Vijaya darpana News… ವಿನಯವೆಂದರೆ ಮರ್ಯಾದೆಯಾಗಿ ಮಾತನಾಡುವುದು ಮಾತ್ರವಲ್ಲ, ವಿರೋಧಿಗೂ ಒಳ್ಳೆಯದನ್ನು ಮಾಡಬೇಕೆಂಬ ಇಚ್ಚೆ…….. — ಮಹಾತ್ಮಾ ಗಾಂಧಿ. ಸಾಮಾಜಿಕ ಜಾಲತಾಣಗಳ ಚರ್ಚೆಗಳ ಅಬ್ಬರದಲ್ಲಿ ಗಾಂಧಿಯವರ ಈ ಮಾತುಗಳು ಪ್ರತಿಕ್ಷಣವೂ ನೆನಪಾಗುತ್ತಿದೆ. ಹೊಸ ಹೊಸ ತಾಣಗಳು ಅತ್ಯುತ್ತಮ ವೇದಿಕೆಗಳನ್ನು ಒದಗಿಸಿಕೊಡುತ್ತಿವೆ. ಕೋವಿಡ್ ಸಮಯದಲ್ಲಿ ಜನರ ಬಳಿ ತುಸು ಹೆಚ್ಚೇ ಸಮಯ ಉಳಿಯುತ್ತಿದೆ. ಮನೆಯಲ್ಲಿಯೇ ಕುಳಿತು ಸಾಕಷ್ಟು ಅಭಿಪ್ರಾಯ ಹಂಚಿಕೊಳ್ಳುವ ಅವಕಾಶಗಳೂ ಇವೆ. ಆದರೆ ಬಹುಮುಖ್ಯವಾಗಿ ವಿನಯ ಮತ್ತು ಸಭ್ಯತೆ ಮಾಯವಾಗುತ್ತಿದೆ. ಅಧ್ಯಯನ ಚಿಂತನೆ ವಾಕ್ ಚಾತುರ್ಯ ಸ್ವಲ್ಪ…

Read More

” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರಾದೃಷ್ಟಕ್ಕಿಂತಲೂ ಪ್ರಬಲ…..”

ವಿಜಯ ದರ್ಪಣ ನ್ಯೂಸ್…. ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರಾದೃಷ್ಟಕ್ಕಿಂತಲೂ ಪ್ರಬಲ…..” ಚಾರ್ಲ್ಸ್ ಡಿಕನ್ಸ್……. ಇತ್ತ ಕಡೆ, ” ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ ” ಎಂದೂ ಲೋಕರೂಡಿಯಾಗಿ ಮತ್ತು ವ್ಯಾವಹಾರಿಕವಾಗಿ ಹೇಳಲಾಗುತ್ತದೆ……….. ಚಾರ್ಲ್ಸ್ ಡಿಕನ್ಸ್ ಇಂಗ್ಲೆಂಡಿನ ಪ್ರಖ್ಯಾತ ಬರಹಗಾರ ಮತ್ತು ಚಿಂತಕ. ಈ ಎರಡೂ ಹೇಳಿಕೆಗಳ ವೈರುಧ್ಯಗಳು ನಮ್ಮನ್ನು ಜೀವನ ಪರ್ಯಂತ ಕಾಡುತ್ತದೆ. ಅದರಲ್ಲೂ ಭಾರತೀಯ ಸಮಾಜದಲ್ಲಿ ನಾವು ಪ್ರೀತಿ ಮತ್ತು ಸತ್ಯದ ಹಾದಿಯಲ್ಲಿ ನಡೆಯಬೇಕೆ, ವ್ಯಾವಹಾರಿಕ ಹಾದಿಯಲ್ಲಿ…

Read More

ಜಾತಿ ಎಂಬ ಹುಚ್ಚು ಪರಿಕಲ್ಪನೆ ಮತ್ತು ಶ್ರೇಷ್ಠತೆಯ ವ್ಯಸನ…..

ವಿಜಯ ದರ್ಪಣ ನ್ಯೂಸ್…. ಜಾತಿ ಎಂಬ ಹುಚ್ಚು ಪರಿಕಲ್ಪನೆ ಮತ್ತು ಶ್ರೇಷ್ಠತೆಯ ವ್ಯಸನ….. ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಕನಕದಾಸರು, ಮಾನವ ಕುಲ ತಾನೊಂದು ವಲಂ ಮಹಾಕವಿ ಪಂಪ, ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು ಬಸವಣ್ಣ, ವಿಶ್ವ ಮಾನವ ಪ್ರಜ್ಞೆ ಕುವೆಂಪು, ವಸುದೈವ ಕುಟುಂಬ ಭಗವದ್ಗೀತೆ, ಸರ್ವೋದಯ ಮಹಾತ್ಮ ಗಾಂಧಿ, “ಭಾರತೀಯರಾದ ನಾವು ” ಸಂವಿಧಾನದ ಪೀಠಿಕೆ ಬಾಬಾ ಸಾಹೇಬ್ ಅಂಬೇಡ್ಕರ್, ಹೀಗೆ ಈ ನೆಲದ ದಾರ್ಶನಿಕರು, ಚಿಂತಕರು, ಹೋರಾಟಗಾರರು, ಮಹಾತ್ಮರು…

Read More

ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ……

ವಿಜಯ ದರ್ಪಣ ನ್ಯೂಸ್….. ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ…… ಈ ವಿಷಯಗಳ ಬಗ್ಗೆ ಒಂದು ನಿರ್ದಿಷ್ಟ, ಸ್ಪಷ್ಟ ತೀರ್ಮಾನ ಕೈಗೊಳ್ಳುವುದು ಅಷ್ಟು ಸುಲಭವಲ್ಲ. ಸಹಜವಾಗಿ ಆ ಕ್ಷಣದ ಸತ್ಯ ಅಥವಾ ಭಾವನಾತ್ಮಕತೆ ಅಥವಾ ಆಗಿನ ನಮ್ಮ ಮನಸ್ಥಿತಿ ಆಧಾರದ ಮೇಲೆ ಮೇಲ್ನೋಟಕ್ಕೆ ಒಂದು ತೀರ್ಪು ಕೊಡಬಹುದು. ಆದರೆ ಸಮಗ್ರವಾಗಿ, ಸಮಾಜದ ಒಟ್ಟು ಹಿತಾಸಕ್ತಿ, ವ್ಯವಸ್ಥೆಯ ವಾಸ್ತವತೆ, ದೇಶದ ದೂರದೃಷ್ಟಿಯ ಅನುಕೂಲತೆ ಎಲ್ಲವನ್ನೂ ನೋಡಿಕೊಂಡು ಇದು ಹೀಗೆ ಇರಬೇಕು ಎಂದು ತೀರ್ಮಾನ ಕೈಗೊಳ್ಳುವುದು ಒಂದು ಸಂಕುಚಿತ ಮನೋಭಾವಕ್ಕೆ…

Read More

ಡೊನಾಲ್ಡ್ ಟ್ರಂಪ್ ಅಹಂಕಾರ ಮತ್ತು ತಿಕ್ಕಲುತನಕ್ಕೆ ಅಮೆರಿಕದ ಮತದಾರರೇ ಹೊಣೆ……..

ವಿಜಯ ದರ್ಪಣ ನ್ಯೂಸ್…. ಡೊನಾಲ್ಡ್ ಟ್ರಂಪ್ ಅಹಂಕಾರ ಮತ್ತು ತಿಕ್ಕಲುತನಕ್ಕೆ ಅಮೆರಿಕದ ಮತದಾರರೇ ಹೊಣೆ…….. ಯಾವುದೇ ಪ್ರಜಾಪ್ರಭುತ್ವ ದೇಶದಲ್ಲಿ ಆ ದೇಶದ ಜನಪ್ರತಿನಿಧಿಗಳಾಗಿ ಅಥವಾ ಆ ದೇಶದ ಮುಖ್ಯಸ್ಥರಾಗಿ ಪ್ರಧಾನಿ ಅಥವಾ ಅಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡುವಾಗ ಮತದಾರರು ಸಮಗ್ರವಾಗಿ ಪಕ್ಷ ಮತ್ತು ಅಭ್ಯರ್ಥಿಗಳ ಬಗ್ಗೆ ಚಿಂತಿಸಿ ಮತ ಚಲಾಯಿಸಬೇಕಾಗುತ್ತದೆ. ಯಾವುದೋ ಧರ್ಮ, ಜಾತಿ, ರಾಷ್ಟ್ರೀಯತೆ, ಅಭಿವೃದ್ಧಿಯ ಭರವಸೆ ಮುಂತಾದ ಭ್ರಮಾತ್ಮಕ ವಿಷಯಗಳಿಗೆ ಮರುಳಾಗಿ ವಿವೇಚನೆ ಇಲ್ಲದೆ ನೈತಿಕತೆ ಇಲ್ಲದ ವ್ಯಕ್ತಿಯನ್ನು ಅಧ್ಯಕ್ಷನನ್ನಾಗಿ ಮಾಡಿದರೆ ಅದರ…

Read More

ಅಭಿವೃದ್ಧಿ ಎಂದರೆ……

ವಿಜಯ ದರ್ಪಣ ನ್ಯೂಸ್….. ಅಭಿವೃದ್ಧಿ ಎಂದರೆ…… ಜನಸಂಖ್ಯೆಯ ಆಧಾರದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದರೆ ಆ ದೇಶ ಇನ್ನೂ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿಲ್ಲಾ ಎಂದೇ ಹೇಳಬೇಕು. ಆಧುನಿಕತೆ ಬೆಳೆದಂತೆ ಅಪರಾಧಗಳು ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿಯ ದಾರಿ ತಪ್ಪಾಗಿದೆ ಎಂದೇ ಭಾವಿಸಬೇಕು. ಅಕ್ಷರಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಮೋಸ, ವಂಚನೆ, ಭ್ರಷ್ಟಾಚಾರ ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿ ಅನುಮಾನಾಸ್ಪದವಾಗಿದೆ ಎಂದು ಊಹಿಸಬಹುದು. ಆಸ್ಪತ್ರೆ, ಸಿಸಿ ಟಿವಿ, ಮೆಡಿಕಲ್ ಲ್ಯಾಬೋರೇಟರಿಗಳು, ಪೋಲೀಸ್ ಸ್ಟೇಷನ್ನುಗಳು ಹೆಚ್ಚಳವಾದಷ್ಟು ದೇಶದ ಅಭಿವೃದ್ಧಿ ಹಿಮ್ಮುಖವಾಗಿದೆ ಎಂದು…

Read More

ಭವಿಷ್ಯದ ಸಮಾಜಕ್ಕಾಗಿ…….

ವಿಜಯ ದರ್ಪಣ ನ್ಯೂಸ್… ಭವಿಷ್ಯದ ಸಮಾಜಕ್ಕಾಗಿ……. ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು……. ಮೊದಲನೆಯದಾಗಿ, ಮೂರು ವರ್ಷ ಮೇಲ್ಪಟ್ಟ ತಮ್ಮ ಮಕ್ಕಳನ್ನು ಮೊದಲ ಆದ್ಯತೆಯಾಗಿ ಹೆಚ್ಚು ಹೆಚ್ಚು ಕ್ರೀಡಾಂಗಣ ಮತ್ತು ಗ್ರಂಥಾಲಯಗಳಿಗೆ ಉದ್ದೇಶಪೂರ್ವಕವಾಗಿಯೋ, ಬಲವಂತವಾಗಿಯೋ ಕರೆದುಕೊಂಡು ಹೋಗುತ್ತಿರಬೇಕು. ಆ ಜಾಗದಲ್ಲಿಯೇ ಹೆಚ್ಚು ಸಮಯ ಅವರು ಕಳೆಯುವಂತೆ ನೋಡಿಕೊಳ್ಳಬೇಕು. ಅವರು ಯಾವ…

Read More

ಕೃಷ್ಣ ಮತ್ತು ಗಾಂಧಿ….

ವಿಜಯ ದರ್ಪಣ ನ್ಯೂಸ್…. ಕೃಷ್ಣ ಮತ್ತು ಗಾಂಧಿ…. *************** ಮಹಾಭಾರತದ ಶ್ರೀಕೃಷ್ಣ — ಸ್ವಾತಂತ್ರ್ಯ ಸಂಗ್ರಾಮದ ಮಹಾತ್ಮ ಗಾಂಧಿ……… ಭಾರತೀಯರನ್ನು ಅತಿಹೆಚ್ಚು ಕಾಡುತ್ತಿರುವ – ಪ್ರಭಾವಿಸುತ್ತಿರುವ – ಚರ್ಚಿಸುತ್ತಿರುವ ಚಿಂತನೆಗಳು ವ್ಯಕ್ತಿತ್ವಗಳು ಮತ್ತು ಸಂಸ್ಕೃತಿಯ ರಾಯಭಾರಿಗಳು………. ಮಹಾಭಾರತದಲ್ಲಿ ಅನೇಕ ಪಾತ್ರಗಳಿದ್ದರು ಅದರ ಸೂತ್ರದಾರ ಕೃಷ್ಣ, ಸ್ವಾತಂತ್ರ್ಯ ಹೋರಾಟದಲ್ಲು ಅನೇಕ ವ್ಯಕ್ತಿಗಳಿದ್ದರೂ ಗಾಂಧಿಯೇ ಮುಖ್ಯ ಸೂತ್ರದಾರರು…. ಮಹಾಭಾರತ ಎಲ್ಲೆಲ್ಲಿಂದಲೋ ಪ್ರಾರಂಭವಾಗಿ ಕೊನೆಗೆ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರ ಜಯದೊಂದಿಗೆ ಬಹುತೇಕ ಮುಕ್ತಾಯವಾಗುತ್ತದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮ ಸಹ ಅಲ್ಲಲ್ಲಿ ನಿಧಾನವಾಗಿ…

Read More

ಪ್ರಬುದ್ಧತೆ…….

ವಿಜಯ ದರ್ಪಣ ನ್ಯೂಸ್…. ಪ್ರಬುದ್ಧತೆ……. ಇತ್ತೀಚಿನ ವರ್ಷಗಳ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಕಟಣೆಯಲ್ಲಿ ಕ್ರಾಂತಿಯಾಗಿದೆ. ಅನೇಕ ಸಮೂಹ ಸಂಪರ್ಕ ಮಾಧ್ಯಮಗಳ ಮೂಲಕ ಪ್ರತಿಯೊಬ್ಬರು ತಮ್ಮ ತಮ್ಮ ಅಭಿಪ್ರಾಯಗಳನ್ನು, ಭಾವನೆಗಳನ್ನು ವ್ಯಕ್ತಪಡಿಸಲು ವೇದಿಕೆ ಇದೆ. ಇದು ಒಂದು ರೀತಿ ಅತ್ಯದ್ಭುತ ಪ್ರಜಾಪ್ರಭುತ್ವೀಯ ಕ್ರಾಂತಿ ಎಂದು ಹೇಳಬಹುದು. ಆದರೆ ಆ ಅಭಿವ್ಯಕ್ತಿಯ ಗುಣಮಟ್ಟದಲ್ಲಿ ಕುಸಿತವನ್ನು ಕಾಣುತ್ತಿರುವುದು ಸ್ವಲ್ಪಮಟ್ಟಿಗೆ ಆತಂಕಕಾರಿ ಬೆಳವಣಿಗೆಯಾಗಿದೆ. ಜೀವನಾನುಭವ ಪದಗಳಲ್ಲಿ ವ್ಯಕ್ತವಾದರೆ ಅದು ಆಳವಾಗಿರುತ್ತದೆ. ಆದರೆ ಪದಗಳಲ್ಲಿ ಜೀವನಾನುಭವವನ್ನು ಕಾಲ್ಪನಿಕವಾಗಿ…

Read More