ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳು

ವಿಜಯ ದರ್ಣಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 31  ‌‌‌‌‌‌‌‌‌‌ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತಿದೆ. ಇಲಾಖಾ ಯೋಜನೆಗಳಾದ ಯಂತ್ರಚಾಲಿತ ಮೋಟಾರು ವಾಹನ, ಶ್ರವಣ ದೋಷವುಳ್ಳ ವಿಕಲಚೇತನರಿಗೆ ಹೊಲಿಗೆ ಯಂತ್ರ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ವಿಕಲಚೇತನರಿಗೆ ಪ್ರೋತ್ಸಾಹಧನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನ ಸಲಕರಣೆ ವಿತರಣೆ, ಸ್ವಯಂ ಉದ್ಯೋಗಕ್ಕೆ “ಆಧಾರ” … Read more

ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಹೇವಿಜಯ ದರ್ಣಣ ನ್ಯೂಸ್.                               ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 30 : ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ … Read more

ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ಒಂದು ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಅದೃಷ್ಟ: ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ.

ವಿಜಯ ದರ್ಪಣ ನ್ಯೂಸ್.                                ಬೆಂಗಳೂರು: ಮೇ 23    ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ಒಂದು ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಅದೃಷ್ಟ. ನಾನು 1962 ರಲ್ಲಿ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿ 1991 ರಿಂದ ಸಂಸತ್ ಸದಸ್ಯನಾಗಿದ್ದೆ. 32 ವರ್ಷಗಳ ಹಿಂದೆ ನಾನು ಈ ಮಹಾನ್ ಸದನವನ್ನು ಪ್ರವೇಶಿಸಿದಾಗ, ನಾನು ಪ್ರಧಾನಿಯಾಗುತ್ತೇನೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ … Read more

ಮುಟ್ಟು ಗುಟ್ಟಿನ ವಿಷಯವೇನಲ್ಲ ಇದೊಂದು ಜೈವಿಕ ಕ್ರಿಯೆ.

ವಿಜಯ ದರ್ಣಣ ನ್ಯೂಸ್ ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ ಮುಟ್ಟಿಗೂ ಒಂದು ಘನತೆ ಇದೆ. ಮೂಡನಂಬಿಕೆ ಮತ್ತು ಕೀಳರಿಮೆಗಳನ್ನು ಬಿಟ್ಟು ಮುಟ್ಟಿನ ಬಗೆಗೆ ಅಗತ್ಯವಿರುವ ಸ್ವಚ್ಛತೆಯ ಕಡೆ  ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಬೇಕಿದೆ.  ನಿಸರ್ಗದತ್ತವಾದ ಮುಟ್ಟೆಂಬ ಜೈವಿಕ ಕ್ರಿಯೆಗೆ ಅಂಟು ಮಂಟಿನ ಸೋಂಕಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪದ್ಮರೇಖಾ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್,  ESAF ಫೌಂಡೇಶನ್,ಹ್ಯುಮಾನಿಟಿ ಫಸ್ಟ್ ಫೌಂಡೇಶನ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು … Read more

ಅಪ್ಪನ ಧ್ಯಾನ ಮತ್ತು ಮಗಳು ಶೈಲ ಕೃತಿಗಳು ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್  ಬೆಂಗಳೂರು: ಗಾಂಧಿನಗರದಲ್ಲಿ ಇರುವ ಬಸಂತ್ ರೆಸಿಡೆಸ್ಸಿ ಸಭಾಂಗಣದಲ್ಲಿ ಶ್ರೀಮತಿ ರೇವತಿ ಉಪ್ಪಿನ ರವರ ವಿರಚಿತ ಅಪ್ಪನ ಧ್ಯಾನ , ಮಗಳು ಶೈಲ ಎರಡು ಕೃತಿ ಬಿಡುಗಡೆ ಮಾಡಿದವು. ಯಾದಗಿರಿ ಜಿಲ್ಲೆಯ ಪೌರಯುಕ್ತ ಸಂಗಮೇಶ್ ಉಪಾಸೆ, ಹಿರಿಯ ಸಾಹಿತಿ ರಮೇಶ್ ಸುರ್ವೆ, ಕೃಷಿಕ ಸಾಹಿತಿ ಸಿದ್ದರಾಮು ಉಪ್ಪಿನ, ಲೇಖಕಿ ರೇವತಿ ಉಪ್ಪಿನ, ಪ್ರೋಫೆಸರ್ ರಾಗಂ, ಶ್ರೀಮತಿ ಪದ್ಮಶ್ರೀ, ಶ್ರೀಮತಿ ಹೇಮಾರವರು ಪುಸ್ತಕಗಳನ್ನು ಲೋಕರ್ಪಣೆ ಮಾಡಿದರು. ಸಂಗಮೇಶ್ ಉಪಾಸೆರವರು ಮಾತನಾಡಿ ಅವಿಭಕ್ತ ಕುಟುಂಬಗಳು ಆಧುನಿಕ ಜೀವನ … Read more

ಮೇ 27 ಉಪ್ಪಿನಂಗಡಿ ಮಂಜ ಬೈದ್ಯ ‌‌ಹುತಾತ್ಮನಾದ ದಿನ.

ಇಂದು ಮೇ 27.
ಇಂದಿನ ದಿನ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ.
ಮಂಜಬೈದ್ಯ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿ 186 ವರ್ಷಗಳಾದವು. ಮಂಜಬೈದ್ಯನ ನೆನಪಿಗೆ ಒಂದು ರಸ್ತೆ, ಒಂದು ಪ್ರತಿಮೆ ಬಿಡಿ, ಒಂದು ಕಂಬವೂ ಇಲ್ಲ.
ಮೆಚ್ಚಲೇಬೇಕು ನಮ್ಮ ಸರಕಾರಗಳನ್ನು.

ಈ ಮಂಜಬೈದ್ಯ ಯಾರು ? ಇಲ್ಲಿದೆ ಓದಿ.

ಕಲ್ಯಾಣಪ್ಪನ ಕಾಟುಕಾಯಿ ಎಂದು ವಾಡಿಕೆಯಲ್ಲಿ ಕರೆಯಲಾಗುವ ದಕ್ಷಿಣಕನ್ನಡದ ರೈತ ಬಂಡಾಯ ನಡೆದದ್ದು 1837 ರಲ್ಲಿ, ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಪ್ಪತ್ತು ವರ್ಷಗಳಿಗೂ ಮುನ್ನ.
ಬ್ರಿಟಿಷರು ಹೇರಿದ ಅಧಿಕ ಕಂದಾಯ,ಕಂದಾಯವನ್ನು ಹಣದ ರೂಪದಲ್ಲೇ ಕೊಡಬೇಕೆಂಬ ಆದೇಶ, ಬೆಳೆ ತೆರಿಗೆ ಈ ಬಂಡಾಯಕ್ಕೆ ಕಾರಣವಾಗಿತ್ತು.
ಈ ಬಂಡಾಯದ ನಾಯಕರಲ್ಲೊಬ್ಬ ಕೆದಂಬಾಡಿ ರಾಮಗೌಡ.

ಈ ಹೊತ್ತಿನಲ್ಲಿ ಇದೇ ಸಂಗ್ರಾಮದಲ್ಲಿ ಉಪ್ಪಿನಂಗಡಿಯ ಮಂಜ ಬೈದ್ಯ ಅಗ್ರಣಿಯಾಗಿದ್ದ.

ಇಂಗ್ಲಿಷ್ ಭಾಷೆ ಗೊತ್ತಿದ್ದ ಮಂಜ ಬೈದ್ಯ ಉಪ್ಪಿನಂಗಡಿಯಲ್ಲಿ ಖಜಾನೆ ಗುಮಾಸ್ತನಾಗಿದ್ದ. ಕಲ್ಯಾಣಪ್ಪನ ಸೈನ್ಯ ಬಂದ ಸುದ್ದಿ ಕೇಳಿದವನೇ ಉಪ್ಪಿನಂಗಡಿ ತಾಲೂಕು ಕಛೇರಿಯಲ್ಲಿದ್ದವರನ್ನೆಲ್ಲ ಬಂಧಿಸಿದ. ಖಜಾನೆಯ ಬೀಗ ಒಡೆದ. ಅಲ್ಲಿದ್ದ ಸೊತ್ತನ್ನು ಬಾಚಿ, ಸುಮಾರು ಐವತ್ತು ಮಂದಿ ದೇಶಭಕ್ತ ಯುವಕರೊಂದಿಗೆ ಪುತ್ತೂರಿಗೆ ಬಂದು ಕಲ್ಯಾಣಪ್ಪನ ಸೈನ್ಯ ಸೇರಿದ. ತಾನು ತಂದಿದ್ದ ಕಾಣಿಕೆಯನ್ನು ಕಲ್ಯಾಣ ಸ್ವಾಮಿಗೆ ಕೊಟ್ಟ. ಅಲ್ಲಿಯ ತನಕ ದಂಡಿನ ಉಸ್ತುವಾರಿ ರಾಮಗೌಡನದ್ದೇ ಆಗಿತ್ತು. ಯಾವಾಗ ಇಂಗ್ಲೀಷ್ ಬಲ್ಲವನೂ, ಕಟ್ಟಾಳುವೂ, ವೀರನೂ ಆದ ಉಪ್ಪಿನಂಗಡಿ ಮಂಜ ಬೈದ್ಯ ಬಂದನೋ ಆತನನ್ನು ಉಪದಂಡ ನಾಯಕನನ್ನಾಗಿ ನೇಮಿಸಲಾಯಿತು. ಅಲ್ಲಿಗೆ ಕಲ್ಯಾಣಪ್ಪನ ದಂಡಿನ ಬಲ ನೂರ್ಮಡಿಯಾಯಿತು.

ರಾಜನ ಪೋಷಾಕಿನಲ್ಲಿ ಕಲ್ಯಾಣಪ್ಪ, ದಂಡನಾಯಕರ ಪೋಷಾಕಿನಲ್ಲಿ ಮಂಜ ಬೈದ್ಯ ಮತ್ತು ರಾಮಗೌಡ ಕುದುರೆ ಏರಿದರು. ದಂಡು ಮುಂದೆ ಸಾಗಿತು.

1837 ಎಪ್ರಿಲ್ 5 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯನ್ನು ತಲುಪಿದ ಕ್ರಾಂತಿವೀರರು,ಬ್ರಿಟಿಷ್ ಧ್ವಜ ಇಳಿಸಿ,ಕ್ರಾಂತಿಕಾರಿ ಧ್ವಜಹಾರಿಸಿ, ಭಾರತಮಾತೆಗೆ ಜಯವಾಗಲಿ ಎಂದು ಜಯಘೋಷ ಮೊಳಗಿಸಿದರು.

ಹದಿಮೂರು ದಿನಗಳ ಕಾಲ ದಕ್ಷಿಣಕನ್ನಡ ಬ್ರಿಟಿಷ್ ಮುಕ್ತವಾಗಿತ್ತು. ಮುಂದೆ ಈ “ಕೆನರಾ ದಂಗೆ”ಯನ್ನು ಬ್ರಿಟಿಷ್ ಸೇನೆ ಹತ್ತಿಕ್ಕಿತು. ಯುದ್ಧದಲ್ಲಿ ಹಲವರು ಮಡಿದರು.ಹಲವರು ಸೆರೆ ಸಿಕ್ಕರು.

ಬಂಧಿಸಲ್ಪಟ್ಟ ಹೋರಾಟಗಾರರಲ್ಲಿ ಉಪ್ಪಿನಂಗಡಿ ಮಂಜ ಬೈದ್ಯನೂ ಇದ್ದ. ಬ್ರಿಟಿಷ್ ಆಡಳಿತ ಕೋರ್ಟ್ ಮಾರ್ಷಲ್ ನಡೆಸಿ, ಉಪ್ಪಿನಂಗಡಿ ಮಂಜ ಬೈದ್ಯ, ಅಪ್ಪಯ್ಯ ಗೌಡ, ಕಲ್ಯಾಣಸ್ವಾಮಿ ಪುಟ್ಟಬಸಪ್ಪ, ನಂದಾವರ ಲಕ್ಷ್ಮಪ್ಪ ಬಂಗರಸರಿಗೆ ಗಲ್ಲು ಶಿಕ್ಷೆ ವಿಧಿಸಿತು.

1837 ಮೇ 27 ರಂದು ಮಂಗಳೂರಿನಲ್ಲಿ ಉಪ್ಪಿನಂಗಡಿ ಮಂಜ ಬೈದ್ಯನನ್ನು ಬಹಿರಂಗವಾಗಿ ಗಲ್ಲಿಗೇರಿಸಲಾಯಿತು. ಆ ಶವ ಗಲ್ಲುಗಂಬದಲ್ಲೇ ಕೊಳೆತು ಬೀಳುವಂತೆ ನೋಡಿಕೊಳ್ಳಲಾಯಿತು.

ಇತಿಹಾಸದ ಪುಟದಲ್ಲಿ ದಾಖಲಾಗದೇ ಇರುವ ಒಬ್ಬ ಮಹಾನ್ ಸ್ವಾತಂತ್ರ್ಯ ಹೋರಾಟಗಾರನ
ಕುರಿತು ಎಲ್ಲರೂ ತಿಳಿಯಬೇಕು ಸರಕಾರ ಈ ಕುರಿತು ಗಮನ ಹರಿಸಲಿ..

Read more

ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಹಿಸುವುದಿಲ್ಲ:ಸಚಿವ ಕೆಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ವಿಜಯಪುರ ಪಟ್ಟಣದ ಕಾಂಗ್ರೆಸ್ ಮುಖಂಡರು ನಿಮ್ಮ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾರೆ ಕೆಲಸ ಮಾಡಬೇಕಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮುಖಂಡರು ಪಟ್ಟಣದ ಅಭಿವೃದ್ಧಿಯ ಕಡೆ ಹೆಚ್ಚು ಗಮನಹರಿಸಬೇಕು ನಿಮ್ಮ ನಿಮ್ಮ ಭಿನ್ನ ಅಭಿಪ್ರಾಯ ಪಕ್ಕಕ್ಕೆ ಇಟ್ಟು ಇಬ್ಬರು ಒಟ್ಟಾರೆ ಕೆಲಸ ಮಾಡಬೇಕು ನಾನು ಯಾವುದೇ ಕಾರಣಕ್ಕೂ ಇಬ್ಬರು ಮುಖಂಡರು ಒಟ್ಟಾಗಿ ಇರುವುದನ್ನು … Read more

ಜಿಲ್ಲಾ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷರಾಗಿ ವಿನೋದ್ ಕುಮಾರ್ ಗೌಡ.

ವಿಜಯ ದರ್ಪಣ ನ್ಯೂಸ್.                           ದೇವನಹಳ್ಳಿ   ಬೆಂಗಳೂರು ಗ್ರಾಮಾಂತರ   ರೈತನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷರಾಗಿದ್ದ ಬಚ್ಚಳ್ಳಿ ವೆಂಕಟೇಶ್‌ರವರ ನಿಧನದಿಂದಾಗಿ ತೆರವಾಗಿದ್ದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಡಾ.ವಿನೋದ್‌ ಕುಮಾರ್‌ಗೌಡರನ್ನು ನೇಮಿಸಲಾಗಿದೆ ಎಂದು ರಾಜ್ಯ ಅಧ್ಯಕ್ಷ ಹರಳಾಪುರ ಮಂಜೇಗೌಡ ತಿಳಿಸಿದರು. ಅವರು ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ನಮ್ಮ ಸಂಘ ರಾಜ್ಯದ … Read more

ಮಳೆಯಿಂದಾಗಿ ತೋಟಗಾರಿಕೆ ಬೆಳೆಗಳ ರಕ್ಷಣೆಗೆ ಸಲಹೆಗಳು

ವಿಜಯ ದರ್ಪಣ ನ್ಯೂಸ್ 
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 25

ನಿರಂತರ ಮಳೆಯಿಂದ ತೋಟಗಾರಿಕೆ ಬೆಳೆಗಳ ಉತ್ಪಾದನೆಯಲ್ಲಿ ರೈತರು ಗಮನಿಸಬೇಕಾದ ಅಂಶಗಳ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಮೊದಲನೆಯದಾಗಿ ಯಾವುದೇ ಬೆಳೆಯ ತೋಟದಲ್ಲಿ ನೀರು ನಿಂತಿದ್ದರೆ, ಆದಷ್ಟು ಬೇಗನೆ ನೀರನ್ನು ಹೊರಹಾಕುವುದು.


ಯಾವುದೇ ಗೊಬ್ಬರಗಳನ್ನು, ಭೂಮಿಯ ತೇವಾಂಶ ಒಣಗುವ ತನಕ ನೀರಾವರಿ ಅಥವಾ ರಸಾವರಿ ಮೂಲಕ ಕೊಡಬಾರದು.
ಬೆಳೆಯು ಮೊದಲ ಬೆಳವಣಿಗೆ ಹಂತದಲ್ಲಿದ್ದರೆ, 19:19:19 ರಸಗೊಬ್ಬರವನ್ನು ಪ್ರತಿ ಲೀಟರ್ ನೀರಿಗೆ 2 ಗ್ರಾಂ, ನಂತೆ ಬೆರೆಸಿ ಸಿಂಪಡಿಸಿ.
ಹೂವು ಬಿಡುವ ಹಂತದ ಬೆಳೆಯಾದರೆ, ಕ್ಯಾಲ್ಸಿಯಂ ಮತ್ತು ಬೋರಾನ್ ಪೋಷಕಾಂಶಗಳನ್ನು ಒಳಗೊಂಡಂತೆ ರಸಗೊಬ್ಬರವನ್ನು ಸಿಂಪರಣೆ ಮಾಡುವುದು.
ಬೆಳೆಯು ಕಟಾವಿನ ಹಂತದಲ್ಲಿ ಇದ್ದರೆ, ಪೋಟ್ಯಾಷಿಯಂ ನೈಟ್ರೆಟ್ ಅನ್ನು ಸಿಂಪರಣೆ ಮಾಡುವುದು.
ಸಿಂಪರಣೆ ಮಾಡುವುದರಿಂದ ಮಳೆಯಿಂದಾದ ಪೋಷಕಾಂಶಗಳ ಕೊರತೆಯನ್ನು ನೀಗಿಸುವುದರ ಜೊತೆಗೆ ಹೆಚ್ಚಿನ ಇಳುವರಿಯನ್ನು ಪಡೆಯಲು ಸಾಧ್ಯವಾಗುತ್ತದೆ.
ಪ್ಲಾಸ್ಟಿಕ್ ಹೊದಿಕೆಯನ್ನು ಬಳಸದೇ ಇರುವ ಬೆಳೆಗಳಲ್ಲಿ ಮಣ್ಣನ್ನು ಹೇರಿಸಿ ಇದರಿಂದ ಬೆಳೆಗಳಲ್ಲಿ ಹೊಸ ಬೇರುಗಳ ಬೆಳವಣಿಗೆಗೆ ಸಹಾಯವಾಗುತ್ತದೆ.


ಟೊಮ್ಯಾಟೋ ಮತ್ತು ಬಳ್ಳಿ ತರಕಾರಿಗಳನ್ನು ಎತ್ತಿ ಕಟ್ಟುವಾಗ ಗಿಡಗಳ ಮಧ್ಯ ಸಾಕಷ್ಟು ಗಾಳಿ ಮತ್ತು ಬೆಳಕು ಆಡುವಂತೆ ಇರಬೇಕು. ತರಕಾರಿ ಬೆಳೆಗಳಲ್ಲಿ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಹೊದಿಕೆಗೆ ತಾಕುವ ಹಳೆಯ ಎಲೆಗಳನ್ನು ಗಿಡಕ್ಕೆ ಹಾನಿಯಾಗದಂತೆ ತೆಗೆಯುವುದರಿಂದ ರೋಗಗಳ ಹಾವಳಿಯನ್ನು ಅಲ್ಪ ಮಟ್ಟಿಗೆ ಕಡಿಮೆ ಮಾಡಬಹುದು.
ಯಾವುದೇ ಬೆಳೆಯಾದರೂ, ಲಘುಪೋಷಕಾಂಶಗಳ ಮಿಶ‍್ರಣವನ್ನು 2-3 ಬಾರಿ ಸಿಂಪರಣೆ ಮಾಡಿದಾಗ ಮಾತ್ರ ಗಿಡದ ಬೆಳವಣಿಗೆಯನ್ನು ಸುಧಾರಿಸಲು ಸಾಧ್ಯ.
ಹ್ಯೂಮಿಕ್ ಆಮ್ಲವನ್ನು ಪ್ರತಿ ಲೀಟರ್ ನೀರಿಗೆ 2ಮಿ.ಲಿ ಬೆರೆಸಿ ಸಿಂಪಡಿಸುವುದರಿಂದ ತೇವಾಂಶದಲ್ಲೂ ಬೇರಿನ ಚಟುವಟಿಕೆಗೆ ಸಹಾಯವಾಗುತ್ತದೆ.

ಕಳೆ ನಾಶಕಗಳನ್ನು ಸಿಂಪರಣೆ ಮಾಡುವಾಗ, ಹೆಚ್ಚಿನ ಮುತುವರ್ಜಿಯನ್ನು ತೆಗೆದು ಕೊಳ್ಳಬೇಕು.
ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಬೆಳೆಗಳನ್ನು         ಬಾಧಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read more

ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ: ಜಿಲ್ಲಾಧಿಕಾರಿ ಆರ್. ಲತಾ

ವಿಜಯ ದರ್ಪಣ ನ್ಯೂಸ್…                            ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 25 2025 ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಗುರಿ ಮುಟ್ಟುವಲ್ಲಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಕರೆ ನೀಡಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ … Read more