ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿ: ವರ್ಣಿತ್ ನೇಗಿ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 21  ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ ವತಿಯಿಂದ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ … Read more

ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್ . ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 20 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2022-23 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. … Read more

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಶಿವಶಂಕರ.ಎನ್ ಅಧಿಕಾರ ಸ್ವೀಕಾರ.

ವಿಜಯ ದರ್ಪಣ ನ್ಯೂಸ್                               ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 20…  ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ. ಶಿವಶಂಕರ.ಎನ್ ಅವರು ವರ್ಗಾವಣೆಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. … Read more

ನೀತಿ ಭ್ರಷ್ಟ ಶಿವಮೂರ್ತಿ ಸ್ವಾಮೀಜಿ ಕೂಡಲೇ ಪೀಠ ತ್ಯಾಗ ಮಾಡಲಿ : ಮಾಜಿ ಸಚಿವ ಹೆಚ್ ಏಕಾಂತಯ್ಯ .

ವಿಜಯ ದರ್ಪಣ ನ್ಯೂಸ್, ಚಿತ್ರದುರ್ಗ ಸಬ್‌ರಿಜಿಸ್ಟಾರ್ ಕಚೇರಿಯ ಮಾರ್ಗಸೂಚಿ ಬೆಲೆಗಿಂತ ಕಡಿಮೆ ಬೆಲೆಗೆ ಮುರುಘಾಮಠದ ಆಸ್ತಿಗಳನ್ನು ಮಾರಾಟ ಮಾಡಿರುವ ನೀತಿ ಭ್ರಷ್ಟ ಡಾ.ಶಿವಮೂರ್ತಿ ಸ್ವಾಮೀಜಿ ನೈತಿಕ ಹೊಣೆ ಹೊತ್ತು ಪೀಠ ತ್ಯಾಗ ಮಾಡಲಿ. ಇಲ್ಲವಾದಲ್ಲಿ ಕೊನೆಯುಸಿರಿರುವತನಕ ಕಾನೂನು ಹೋರಾಟ ಮಾಡಲಾಗುವುದು ಎಂದು ಎಸ್.ಜೆ.ಎಂ.ವಿದ್ಯಾಪೀಠದ ಗೌರ್ವಿನಿಂಗ್ ಕೌನ್ಸಿಲ್ ಮೆಂಬರ್, ಮಾಜಿ ಸಚಿವ ಹೆಚ್.ಏಕಾಂತಯ್ಯ ಹೇಳಿದರು. ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಏಕಾಂತಯ್ಯ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ಎಸಗಿರುವ ಆರೋಪದ ಮೇಲೆ ಡಾ.ಶಿವಮೂರ್ತಿ ಶರಣರು ಜೈಲು … Read more

ಕೃಷಿ ಕ್ಷೇತ್ರದಲ್ಲಿ ಸಬಲೀಕರಣದ ನಿದರ್ಶನ ಶ್ರೀಮತಿ ಜ್ಯೋತಿ ಪ್ರಕಾಶ್.

ವಿಜಯ ದರ್ಪಣ ನ್ಯೂಸ್..‌‌‌‌‌‌‌‌‌‌‌‌‌                            ಚಿಕ್ಕಬಳ್ಳಾಪುರ ಜೂನ್ 17 ಕೃಷಿ ಚಟುವಟಿಕೆಯಿಂದ ಆರ್ಥಿಕತೆಯ ಮೇಲೆ ಅವಲಂಬಿತವಾಗಿರುವ ಈ ದೇಶವು ಎಲ್ಲಾ ವರ್ಗದ ಜನರ ಹಸಿವು ನೀಗಿಸುವಲ್ಲಿ ಹಸಿರುಕ್ರಾಂತಿಯನ್ನೇ ಪ್ರಧಾನ ವಾಗಿರಿಸಿಕೊಂಡಿದೆ. ಕೃಷಿ ಚಟುವಟಿಕೆಗಳಲ್ಲಿ ಮುಖ್ಯವಾಗಿ ನಮಗೆ ಕಾಣ ಸಿಗುವುದು ಪುರುಷರ ಪಾತ್ರವೇ ಹೆಚ್ಚು. ಆದರೆ ಒಂದು ಮೂಲದ ಪ್ರಕಾರ ವ್ಯವಸಾಯ ಕ್ಷೇತ್ರದಲ್ಲಿ ಪುರುಷರಷ್ಟು ಸಮಾನವಾಗಿ ಮಹಿಳೆಯರು ತಮ್ಮ ಶ್ರಮದಾನ ಮಾಡುವುದು … Read more

20 ಬಾರಿ ರಕ್ತದಾನ ಮಾಡಿರುವ ಫ್ರಾನ್ಸಿಸ್ ಡಿಸೋಜ.

ವಿಜಯ ದರ್ಪಣ ನ್ಯೂಸ್ .                               ಕೊಡಗು … ಸಂಕಷ್ಟಕ್ಕೆ ಸಿಲುಕಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಈವರೆಗೂ 20 ಬಾರಿ ಯಾವುದೇ ಫಲಾಪೇಕ್ಷೆ ಇಲ್ಲದೇ ಫ್ರಾನ್ಸಿಸ್ ಡಿಸೋಜ ರಕ್ತದಾನ ಮಾಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು  ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಇವರು ಆಪರೇಷನ್ಗೆ ವ್ಯಕ್ತಿಯೊಬ್ಬರಿಗೆ ರಕ್ತ ಬೇಕಾಗಿರುವುದನ್ನು ಮನಗಂಡು ಮಂಗಳೂರಿನ ಫಾದರ್ … Read more

ಅಭಿವೃದ್ಧಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ಸಲ್ಲದು: ಸಚಿವ ಕೆ ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್.                            ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 16

ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ 2022-23 ಹಾಗೂ 2023-24 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆಯರು, ಮಕ್ಕಳು, ಯುವಜನರು, ಬಡವರು, ದುರ್ಬಲ ವರ್ಗದವರ ಅಭಿವೃದ್ದಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಅಧಿಕಾರಿಗಳು ಸಭೆಗೆ ಕಡ್ಡಾಯವಾಗಿ ಹಾಜರಾಗಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ನೀಡಬೇಕು. ಜನಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಕೊಡಬೇಕು ಎಂದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಕುಡಿಯುವ ನೀರಿನ ಕುರಿತು ಚರ್ಚೆ ನಡೆಸಿದ ಸಚಿವರು ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಹೊಸಕೋಟೆ ಶಾಸಕರು ಹಾಗೂ ನೆಲಮಂಗಲ ಶಾಸಕರು ತಮ್ಮ ಕ್ಷೇತ್ರದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ತುರ್ತಾಗಿ ಕ್ರಮವಹಿಸುವಂತೆ, ಸ್ಥಗಿತಗೊಂಡಿರುವ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಶೀಘ್ರ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಹದಗೆಟ್ಟಿರುವ ಸಿಸಿ ರಸ್ತೆಗಳನ್ನು ರಸ್ತೆ ಸರಿಪಡಿಸಬೇಕು ಎಂದರು.

ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಪ್ರಸ್ತುತ 5 ಕೆಜಿ ನೀಡುತ್ತಿದ್ದ ಅಕ್ಕಿಯನ್ನು 10 ಕೆಜಿ ನೀಡಲು ನಿರ್ಧರಿಸಿದ್ದೇವೆ. ಅಕ್ಕಿ ವಿತರಿಸಲು, ಅಕ್ಕಿ ಸಂಗ್ರಹಿಸುವ ಉಗ್ರಾಣ ವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ನೆಲಮಂಗಲದಲ್ಲಿ ಪ್ಲಾಸ್ಟಿಕ್ ಅಕ್ಕಿ ಎಂದು ಪತ್ತೆಯಾಗಿರುವ ವರದಿಯನ್ನು ಪ್ರಸ್ತಾಪಿಸಿ ಪ್ಲಾಸ್ಟಿಕ್ ಅಕ್ಕಿ ಸಾಮಾನ್ಯವಾಗಿ ಎಲ್ಲೂ ಪತ್ತೆಯಾಗಿಲ್ಲ, ಅಕ್ಕಿಯಲ್ಲಿ
ಪೌಷ್ಟಿಕಾಂಶ ಹೆಚ್ಚಿಸಲು ಪ್ರತಿ 100 ಕೆಜಿ ಅಕ್ಕಿಗೆ 01ಕೆಜಿ ಫೋರ್ಟಿಫೈಡ್ (fortified rice) ಅಕ್ಕಿಯನ್ನು ಬೆರೆಸುತ್ತಾರೆ, ನೆಲಮಂಗಲದಲ್ಲಿ ಅದೇ ರೀತಿ ಆಗಿರಬಹುದು ಇದರ ಬಗ್ಗೆ ಪರಿಶೀಲಿಸಿ ಶೀಘ್ರ ವರದಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆಗಳು ಪ್ರಾರಂಭದ ಹಿನ್ನಲೆಯಲ್ಲಿ ಲಭ್ಯವಿರುವ ಶಿಕ್ಷಕರು, ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳ ಮಾಹಿತಿಯನ್ನು ಪಡೆದುಕೊಂಡು ಪ್ರತಿಕ್ರಿಯಿಸಿದ ಸಚಿವರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆಗಳು, ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಸಿಎಸ್‌ಆರ್ ಅನುದಾನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಿ ಬಳಸಿಕೊಂಡು ಖಾಸಗಿ ಶಾಲೆಗಳಂತೆಯೇ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ಆಕರ್ಷಿಸಬೇಕು. ಪ್ರತಿ ಮಗುವೂ ಉತ್ತಮ ಶಿಕ್ಷಣ ಸೌಲಭ್ಯ ಪಡೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರಿಗೆ ಕೃಷಿ, ತೋಟಗಾರಿಕೆ ಇಲಾಖೆಯ ಯೋಜನೆಯ ಕುರಿತು ಮಾಹಿತಿಯ ಕೊರತೆಯಿದ್ದು, ಶಾಸಕರ ನೇತೃತ್ವದಲ್ಲಿ ರೈತರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಯೋಜನೆಗಳ ಮಾಹಿತಿ ನೀಡಲು ಕ್ರಮವಹಿಸಬೇಕು. ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿಗೆ ಕ್ರಮ ವಹಿಸಬೇಕು. ನಗರೀಕರಣದಿಂದಾಗಿ ದೇವನಹಳ್ಳಿಯ ಮೂಲ ಚಕೋತಾ, ಮಲ್ಲಿಗೆ ಬೆಳೆ ನಶಿಸುತ್ತಿದ್ದು, ಈ ಬೆಳೆಗಳನ್ನು ಬೆಳೆಯಲು ಉತ್ತೇಜಿಸಬೇಕು. ದ್ರಾಕ್ಷಿ ಬೆಳೆಗಾರರಿಗೆ ಇರುವ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.
ಮೇಲ್ಛಾವಣಿ, ಗೋಡೆ, ಶೌಚಾಲಯ ಸೇರಿದಂತೆ ಜಿಲ್ಲೆಯಲ್ಲಿ ಶಿಥಿಲಗೊಂಡು ದುರಸ್ತಿ ಹಂತದಲ್ಲಿರುವ ಅಂಗನವಾಡಿಗಳನ್ನು ತ್ವರಿತವಾಗಿ ದುರಸ್ತಿ ಮಾಡಬೇಕು ಹಾಗೂ ದುರಸ್ತಿ ಕಾರ್ಯವು ಗುಣಮಟ್ಟದಿಂದ ಕೂಡಿರಬೇಕು ಎಂದರಲ್ಲದೆ ರಾಜ್ಯ ಸರ್ಕಾರದ ಐದು ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆ ಸೌಲಭ್ಯದ ಕುರಿತು ಅರಿವು ಮೂಡಿಸಿ ಎಂದರು

Read more

ಕೆ ಎಸ್‍ ಆರ್ ಟಿ ಸಿ ಯಲ್ಲಿ ಡಿಜಿಟಲ್ ಇಂಡಿಯಾ ಕ್ಯಾಶ್ ಲೇಸ್ ವ್ಯವಸ್ಥೆ ಜಾರಿಗೆ ತರಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಒತ್ತಾಯ.

ವಿಜಯ ದರ್ಪಣ ನ್ಯೂಸ್                                   ಬೀದರ ಜೂ. 16, ಇಡೀ ದೇಶವೆ ಡಿಜಿಟಲ್ ಇಂಡಿಯಾ ವ್ಯವಸ್ಥೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಾ ಕ್ಯಾಶಲೆಸ್ ವ್ಯವಹಾರ ನಡೆಸುತ್ತಿದೆ. ಆದರೆ ಕೆಎಸ್‍ಆರ್‍ಟಿಸಿಯ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ಇತರೆ ಭಾಗದ ಸಂಸ್ಥೆಗಳು ಡಿಜಿಟಲ್ ಇಂಡಿಯ ಬಳಕೆ ಮಾಡದೇ ಪ್ರಯಾಣಿಕರಿಗೆ ಟಿಕೇಟ್ ಮೀಸಲಿರಿಸಲು ಮತ್ತು ಕೌಂಟರ್ ಮೂಲಕ ಟಿಕೆಟ್ ನೀಡುವ … Read more

ಕಲುಷಿತ ನೀರು ಕುಡಿದು ಮೇಕೆಗಳು ಸಾವು.

ವಿಜಯ ದರ್ಪಣ ನ್ಯೂಸ್…                           ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಯಲಿಯೂರು ಗ್ರಾಮದ ಹೊರವಲಯದಲ್ಲಿ ಕಲುಷಿತ ನೀರು ಕುಡಿದು ಮೇಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಕ್ಕಳಂತೆ ಮೇಕೆಗಳನ್ನು ಪೋಷಿಸಿದ್ದ ದೊಡ್ಡ ತತ್ತಮಂಗಲ ಗ್ರಾಮದ ರೈತ ಮುನಿಶಾಮಪ್ಪ ಅವರ ಮುಂದೆಯೇ ಮೇಕೆಗಳು ಅಸ್ವಸ್ಥಗೊಂಡು ಸಾವನ್ನಪ್ಪಿದ್ದನ್ನು ಕಂಡು ಭಾವುಕರಾದರು. ಮುನಿಶಾಮಪ್ಪ ಅವರು ಅಂಗವಿಕಲನಾದರೂ ಯಾರ ಬಳಿಯೂ ಅಂಗಲಾಚದೆ 30 … Read more

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ.

ವಿಜಯ ದರ್ಪಣ ನ್ಯೂಸ್…..                       ಬೆಂಗಳೂರು  ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ…. ಮೈಸೂರಿನಲ್ಲಿ  ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ   ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ …. 2024 ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು  ಕರ್ನಾಟಕದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ  … Read more