ಜನಾಗ್ರಹ ಚಳುವಳಿಗೆ ಎಐಟಿಯುಸಿ ಕಟ್ಟಡ ಕಾರ್ಮಿಕ ಸಂಘಟನೆ ಬೆಂಬಲ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆ, ಸಿದ್ದಾಪುರ ಅಕ್ಟೋಬರ್ 02: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ 7/10/2023ರಂದು ಕರೆ ನೀಡಿರುವ ಜನಾಗ್ರಹ ಚಳುವಳಿಗೆ ಕಾಫಿನಾಡು ಕಟ್ಟಡ ಕಾರ್ಮಿಕ ಸಂಘಟನೆಯು ಬೆಂಬಲ ವ್ಯಕ್ತಪಡಿಸಿದೆ. ಸಂಘದ ಕಛೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಎಂ.ಎ ಕೃಷ್ಣ ಮಾತನಾಡಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ತಮ್ಮ ಬೇಡಿಕೆಯನ್ನ ಮುಂದಿಟ್ಟುಕೊಂಡು ಚಳುವಳಿಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು . ಈಗಾಗಲೇ ಕಟ್ಟಡ ಮತ್ತು … Read more

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಮುಂದಿನ ಭವಿಷ್ಯರೂಪಿಸುವ ಜವಾಬ್ದಾರಿ ಸರ್ಕಾರದ್ದು: ಮಧು ಬಂಗಾರಪ್ಪ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 : ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನನ್ನ ಶಾಲೆ ನನ್ನ ಕೊಡುಗೆಯಡಿಯಲ್ಲಿ ಸಿ.ಎಸ್‌.ಆರ್ ಅನುದಾನದಲ್ಲಿ ಮಾದರಿ ಸರ್ಕಾರಿ ಶಾಲೆ ಯೋಜನೆ … Read more

ತಲ್ವಾರ್ ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂಸಮಾಜಕ್ಕೆ ಬರುತ್ತದೆ: ಕೆ ಎಸ್ ಈಶ್ವರಪ್ಪ

ವಿಜಯ ದರ್ಪಣ ನ್ಯೂಸ್ ಶಿವಮೊಗ್ಗ: ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ರ ಗುಲಾಮರ ರೀತಿಯಾಗಿದೆ. ತಲ್ವಾರ್ ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಿವಮೊಗ್ಗದಲ್ಲಿ ಹಿಂದೂ ಸಮಾಜದ ಕಾರ್ಯಕ್ರಮವಾಗುತ್ತದೆ. ಮುಸಲ್ಮಾನರ ಕಾರ್ಯಕ್ರಮ ಕೂಡವಾಗುತ್ತಿದೆ. ಮೊನ್ನೆ ಅನಂತನ ಚತುರ್ದಶಿ ದಿನ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮಾಡಲಾಯ್ತು. ಮಕ್ಕಳು, ಮಹಿಳೆಯರು ಎಲ್ಲರೂ ಸೇರಿ ಎರಡು … Read more

ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02:- ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ … Read more

ಎಸ್ ಪಿ ಸುಜಿತ್ ಎಂಬ ರೈತ ಐಷಾರಾಮಿ ಕಾರಲ್ಲಿ ಬಂದು ಸೊಪ್ಪು ಮಾರಿದ

ವಿಜಯ ದರ್ಪಣ ನ್ಯೂಸ್  ಕೇರಳ: ರೈತರು ಗೂಡ್ಸ್ ವಾಹನದಲ್ಲಿ ಮಾರುಕಟ್ಟೆ ಬಂದು ತಮ್ಮ ಫಸಲನ್ನು ಮಾರಾಟ ಮಾಡಿ ಹೋಗುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ರೈತ ಐಷಾರಾಮಿ ಕಾರಿನಲ್ಲಿ ಮಾರುಕಟ್ಟೆಗೆ ಬಂದು ಸೊಪ್ಪು ಮಾರಾಟ ಮಾಡಿ ಹೋಗಿದ್ದಾನೆ. ಆ ಕುರಿತ ವಿಡಿಯೋ ಕೂಡ ಹಂಚಿಕೊಂಡಿದ್ದಾನೆ. ಕೇರಳದ ಎಸ್​.ಪಿ. ಸುಜಿತ್ ಎಂಬ ಈ ಯುವರೈತ ತನ್ನ ವೆರೈಟಿ ಫಾರ್ಮರ್ ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾನೆ. ನಾನು ಆಡಿ ಕಾರಲ್ಲಿ ಹೋಗಿ ಸೊಪ್ಪು ಮಾರಾಟ ಮಾಡಿದಾಗ ಎಂಬ ಕ್ಯಾಪ್ಷನ್​ನೊಂದಿಗೆ … Read more

ತಕ್ಷಣವೇ ಅಭಿವೃದ್ಧಿ ನಿಗಮ ಜಾರಿಮಾಡಲು ಅದೇನು ತರಕಾರಿ ತಾಯಮ್ಮನ ಅಂಗಡಿಯಲ್ಲಿ ಸಿಗುವ ತರಕಾರಿಯೇ?

ವಿಜಯ ದರ್ಪಣ ನ್ಯೂಸ್ ಮಡಿಕೇರಿ: ಚುನಾವಣೆ ಪೂರ್ವದಲ್ಲಿ ಕೊಡಗು ಜಿಲ್ಲೆಗೆ ಸೀಮಿತವಾದ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿ ಅದನ್ನು ಎ.ಎಸ್ ಪೊನ್ನಣ್ಣ ನವರು ಬಿಡುಗಡೆ ಮಾಡಿದ್ದರು.ನಂತರ ಡಾ ಮಂತರ್ ಗೌಡ ರವರ ಪ್ರಣಾಳಿಕೆಯಲ್ಲಿ ಕೂಡ ಅವುಗಳಿಗೆ ಆದ್ಯತೆ ನೀಡಿದ್ದರು.ಒಟ್ಟು ಇಪ್ಪತ್ತೆಂಟು ಭರವಸೆಗಳಿದ್ದು ಅವುಗಳಲ್ಲಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕೂಡ ಒಂದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಯ ಜವಾಬ್ದಾರಿ ಶಾಸಕದ್ವಯರ ಹೊಣೆಗಾರಿಕೆಯಾಗಿದೆ.ಅದನ್ನು ಖಂಡಿತವಾಗಿ ಅವರು ಮಾಡಲು ಸಿದ್ದರಿದ್ದು ಈಗಾಗಲೇ ಪ್ರಕ್ರಿಯೆಗಳು ಆರಂಭಗೊಂಡಿದೆ. ಅಭಿವೃದ್ಧಿ ನಿಗಮ ಸ್ಥಾಪನೆ ಎನ್ನುವುದು … Read more

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ

ವಿಜಯ ದರ್ಪಣ ನ್ಯೂಸ್. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನದ ವಿಶೇಷ ಲೇಖನ  ಅಕ್ಟೋಬರ್ 02 ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು……. ” ಜೈ ಜವಾನ್ ಜೈ ಕಿಸಾನ್ ” ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಬಲವಾದ ಬುನಾದಿಯನ್ನು ಮುಂದುವರಿಸಿದ ರಾಜಕೀಯ ಆದರ್ಶ ವ್ಯಕ್ತಿ ಶಾಸ್ತ್ರಿಯವರು. ಗಾಂಧಿ ಯುಗದ ಮುಂದುವರಿದ ಭಾಗ ಇವರು. ಬಹುಶಃ ರಷ್ಯಾದ ತಾಷ್ಕೆಂಟ್ ನಲ್ಲಿ ಪಾಕಿಸ್ತಾನದ ಜೊತೆ ಒಪ್ಪಂದದ ಸಮಯದಲ್ಲಿ ತೀವ್ರ … Read more

ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 1- ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ … Read more

ಮಾದರಿ ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಗಳ ನಿರ್ಮಾಣದತ್ತ ಸಚಿವ ಕೆಹೆಚ್ ಮುನಿಯಪ್ಪ.

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್: 01 ಮಹಾತ್ಮ ಗಾಂಧೀಜಿಯವರ ಜನ್ಮದಿನ ಪ್ರಯುಕ್ತ ದೇವನಹಳ್ಳಿಯ ವಿಶ್ವನಾಥಪುರದಲ್ಲಿ ಮಾದರಿ ಶಾಲೆಯನ್ನು ನಿರ್ಮಾಣ ಮಾಡುವಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪನವರು ಉತ್ಸುಕರಾಗಿದ್ದಾರೆ. ಗ್ರಾಮೀಣ ಪ್ರದೇಶಗಳ ಶಾಲೆಗಳು ನಗರ ಮಟ್ಟದ ಶಾಲೆಗಳಿಗೆ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲಾ ಎಂದು ಹಾಗೂ ನಗರ ಪ್ರದೇಶದ ಶಾಲೆಗಳ ಮಕ್ಕಳ ರೀತಿಯಲ್ಲಿ ಬೆಳವಣಿಗೆಯಾಗಬೇಕೆಂಬ ಸಚಿವರ ಒತ್ತಾಸೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾದರಿ ಶಾಲೆಗಳ ನಿರ್ಮಾಣಕ್ಕೆ … Read more