ಅಧಿಕಾರಿಗಳ ನಿರ್ಲಕ್ಷದಿಂದ ಮಕ್ಕಳಿಗೆ ಪೋಷಕರಿಂದಲೇ ಸನ್ಮಾನ

ವಿಜಯ ದರ್ಪಣ ನ್ಯೂಸ್…. ಅಧಿಕಾರಿಗಳ ನಿರ್ಲಕ್ಷದಿಂದ ಮಕ್ಕಳಿಗೆ ಪೋಷಕರಿಂದಲೇ ಸನ್ಮಾನ ಶಿಡ್ಲಘಟ್ಟ :   ನಿರ್ಲಕ್ಷ್ಯದಿಂದ ನಾವು ನಮ್ಮ ಕೈಯಲ್ಲಿಯೇ ಮಕ್ಕಳಿಗೆ ಶಾಲು, ಹಾರ ನೀಡಿ ಪುರಸ್ಕಾರ ಮಾಡಬೇಕಾಯಿತು ಅಧಿಕಾರಿಗಳು ಹಾಗು ಶಾಸಕರು ಸಹ ಹಾಜರಾಗದೇ ಜಯಂತೋತ್ಸವವನ್ನು ಕಡೆಗಣಿಸಿದ್ದಾರೆ ಹಲವಾರು ಜಯಂತಿಗಳಲ್ಲಿ ಪಾಲ್ಗೊಳ್ಳುವ ಜನಪ್ರತಿನಿಧಿಗಳು ಈ ಕಾರ್ಯಕ್ರಮವನ್ನು ಬದಿಗೊತ್ತಿದ್ದಾರೆ ಎಂದುತಾಲ್ಲೂಕು ಬ್ರಾಹ್ಮಣ ಯುವಕ ಸಂಘದ ಅಧ್ಯಕ್ಷ ಎನ್.ಜಿ. ಮಂಜುನಾಥ್ ತಿಳಿಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗೈರುಹಾಜರಿನಿಂದ ಸಮುದಾಯದ ಮುಖಂಡರು ಅಸಹನೆ ವ್ಯಕ್ತಪಡಿಸಿದರು ಪೂಜೆಗಾಗಿ ದೇವಸ್ಥಾನಕ್ಕೆ ತೆರಳಬೇಕಿದ್ದ ಅವರು ಕಾರ್ಯಕ್ರಮದ … Read more

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಶಿಡ್ಲಘಟ್ಟ ತಾಲ್ಲೂಕು ಎರಡನೇ ಸ್ಥಾನ 

ವಿಜಯ ದರ್ಪಣ ನ್ಯೂಸ್… ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಶಿಡ್ಲಘಟ್ಟ ತಾಲ್ಲೂಕು ಎರಡನೇ ಸ್ಥಾನ  ಶಿಡ್ಲಘಟ್ಟ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ವರ್ಷ 3 ನೇ ಸ್ಥಾನದಲ್ಲಿದ್ದ ನಮ್ಮ ತಾಲ್ಲೂಕು ಶೇಕಡಾ 69.01 ಫಲಿತಾಂಶದೊಂದಿಗೆ ಈ ಬಾರಿ ಎರಡನೇ ಸ್ಥಾನ ಪಡೆದಿದೆ. ತಾಲ್ಲೂಕಿನಲ್ಲಿ ಒಟ್ಟು 2530 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಆ ಪೈಕಿ 1746 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.1218 ಬಾಲಕರು, 1312 ಬಾಲಕಿಯರು ಸೇರಿ 2530 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು … Read more

ಭಾರತ ಸಾಗುತ್ತಿರುವ ದಿಕ್ಕು ಸರಿ ಇದೆಯೇ………

ವಿಜಯ ದರ್ಪಣ ನ್ಯೂಸ್  ಭಾರತ ಸಾಗುತ್ತಿರುವ ದಿಕ್ಕು ಸರಿ ಇದೆಯೇ……… ದೇಶದ ಒಟ್ಟು ವ್ಯವಸ್ಥೆ ಸಾಗುತ್ತಿರುವ ದಿಕ್ಕು ಅಷ್ಟೇನೂ ಒಳ್ಳೆಯ ಮುನ್ಸೂಚನೆ ನೀಡುತ್ತಿಲ್ಲ. ನೀರ ಮೇಲಿನ ಗುಳ್ಳೆಯಂತೆ ಯಾವ ಕ್ಷಣದಲ್ಲಾದರೂ ಒಡೆದು ಹೋಗಬಹುದು ಎನ್ನುವ ಆತಂಕಕಾರಿ ಪರಿಸ್ಥಿತಿ ಕಂಡುಬರುತ್ತಿದೆ. ಇತಿಹಾಸದ ಎಲ್ಲಾ ಕಾಲಘಟ್ಟದಲ್ಲೂ ಉಗಮ, ಬೆಳವಣಿಗೆ, ಘರ್ಷಣೆ, ವಿನಾಶ ಹೀಗೆ ನಡೆದುಕೊಂಡೇ ಬಂದಿದೆ. ಮಾನವ ಇತಿಹಾಸ ನಿಂತ ನೀರಲ್ಲ. ಆದರೆ ನಾವಿರುವ ಸಮಕಾಲೀನ ಸಮಾಜ ಒಂದಷ್ಟು ಸಹನೀಯವಾಗಿ ಇರುವಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇತ್ತೀಚಿನ ನಮ್ಮ ದೇಶದ … Read more

ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಮೇ03:-ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ-2025 ಕ್ಕೆ ಸಂಬಂಧಿಸಿದಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ ದಾಸ್, ರವರ ವಿಚಾರಣಾ ಆಯೋಗ ರಚಿಸಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಪ.ಜಾತಿ ಒಳಮೀಸಲಾತಿ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು ಮೇ.05 ರಿಂದ ಜಿಲ್ಲೆಯಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ರವರು ತಿಳಿಸಿದ್ದಾರೆ. ಈ … Read more

ಡೆಂಗ್ಯೂ, ಮಲೇರಿಯಾ,ಚಿಕನ್ ಗುನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಡೆಂಗ್ಯೂ, ಮಲೇರಿಯಾ,ಚಿಕನ್ ಗುನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 03 :ಮಳೆಗಾಲ ಪ್ರಾರಂಭ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎ.ಬಿ … Read more

ಎಸ್ಸೆಸ್ಸೆಲ್ಸಿ ಟಾಪರ್ಸ್ ಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್…. ಎಸ್ಸೆಸ್ಸೆಲ್ಸಿ ಟಾಪರ್ಸ್ ಗೆ ಸನ್ಮಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮೇ 02 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಐದು ವಿದ್ಯಾರ್ಥಿಗಳನ್ನು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನಿಸಿದರು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಂತರ ಸಿಇಒ ಅವರು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿಯೂ … Read more

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಜಿಲ್ಲೆಗೆ 74.02 ರಷ್ಟು ಫಲಿತಾಂಶ

ವಿಜಯ ದರ್ಪಣ ನ್ಯೂಸ್…. 2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಜಿಲ್ಲೆಗೆ 74.02 ರಷ್ಟು ಫಲಿತಾಂಶ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 9 ನೇ ಸ್ಥಾನ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ನ ನೀಲಗಿರೇಶ್ವರ ಪ್ರೌಢಶಾಲೆಯ ಸಿ. ಭಾವನ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದೊಡ್ಡಬಳ್ಳಾಪುರ ಟೌನ್ ನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ … Read more

ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ 2 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆದಿ ಶಂಕರ ‘ಶ್ರೀ ಶಂಕರಾಚಾರ್ಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಶಂಕರಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ … Read more

ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಸಮಾನತೆಯ ಸಮ ಸಮಾಜ ನಿರ್ಮಿಸಲು ಜಾತಿ ಧರ್ಮದ ಭೇದವಿಲ್ಲದೆ ಹೋರಾಡಿದ ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು ಅವರು ನೀಡಿದ ಸಂದೇಶಗಳು ನಾವು ವಿಶ್ವ ಭ್ರಾತೃತ್ವದ ದಾರಿಗೆ ನಡೆಯಲು ದಿಕ್ಕು ತೋರಿಸುತ್ತವೆ ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಶ್ರೀಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಖುದ್ದು ಬಾಗವಹಿಸಿ … Read more

ಬೆಳಗನ್ನು ನಿರ್ವಹಿಸಿ ಬಾಳನ್ನು ಬೆಳಗಿಸಿ

ವಿಜಯ ದರ್ಪಣ ನ್ಯೂಸ್….. ಬೆಳಗನ್ನು ನಿರ್ವಹಿಸಿ ಬಾಳನ್ನು ಬೆಳಗಿಸಿ ಪ್ರತಿ ಹಿಂದಿನ ದಿನ ನಾಳೆಯಿಂದ ಅದನ್ನು ಮಾಡುತ್ತೇನೆ. ಇದನ್ನು ಮಾಡಿ ಮುಗಿಸಿ ಬಿಡುತ್ತೇನೆ ಎಂದು ಏನೇನೋ ಅಂದುಕೊಳ್ಳುತ್ತೇವೆ. ಆದರೆ ಮರುದಿನದ ಬೆಳಗು ನಿತ್ಯ ನಡೆಯುವ ಸನ್ನಿವೇಶಗಳಿಗೆ ಅನುಗುಣವಾಗಿ ನಡೆಯುತ್ತದೆ. ಹೊಸ ದಿನವೂ ಅದೇ ರೀತಿಯಲ್ಲಿ ಅದೇ ಹಾದಿಯಲ್ಲಿ ನಡೆದುಹೋಗಿಬಿಡುತ್ತದೆ. ನನ್ನ ದಿನ ನನ್ನ ಕೈಯಲಿಲ್ಲವೆಂದು ಹೊರಗಿನ ಪರಿಸ್ಥಿತಿಗಳಿಗೆ ಉದ್ರೇಕಿತನಾಗಿ ನಡೆದುಕೊಳ್ಳುತ್ತೇನೆ ಎಂಬುದು ನಮ್ಮಲ್ಲಿ ಬಹುಜನರ ಅಳಲು. ಈ ನೋವನ್ನು ತಡೆದುಹಾಕುವಲ್ಲಿ ಬೆಳಗಿನ ಅಭ್ಯಾಸಗಳು ಮಹತ್ವದ್ದಾಗಿವೆ. ಅಶಿಸ್ತು ಇದಕ್ಕೆಲ್ಲ … Read more