ಮೈಸೂರಿನಲ್ಲಿ ರಂಜಾನ್‌ ಸಂಭ್ರಮ ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ, ಶಾಂತಿ, ಸಹಭಾಳ್ವೆ ಸಂದೇಶ

ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ ರಂಜಾನ್‌ ಸಂಭ್ರಮ ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ, ಶಾಂತಿ, ಸಹಭಾಳ್ವೆ ಸಂದೇಶ ತಾಂಡವಪುರ ಮಾರ್ಚ್ 21: ಶಾಂತಿ, ಸೌಹಾರ್ದತೆಯ ಸಂದೇಶ ಸಾರುವ ರಂಜಾನ್(ಈದ್ ಉಲ್ ಫಿತರ್) ಹಬ್ಬವನ್ನು ಮೈಸೂರಿನ ನಗರದೆಲ್ಲಡೆ ಮುಸ್ಲಿಂ ಸಮುದಾಯದವರು ಭಕ್ತಿಭಾವದೊಂದಿಗೆ ಸಂಭ್ರಮದಿಂದ ಆಚರಿಸಿದರು. ತಿಲಕ್‌ ನಗರ, ರಾಜೀವ್‌ನಗರ, ಗೌಸಿಯಾ ನಗರದ ಈದ್ಗಾಗಳಲ್ಲಿ ಈದ್ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಜತೆಗೆ ಬಡಾವಣೆಗಳಲ್ಲಿ ಇರುವ ಮಸೀದಿಗಳಲ್ಲೂ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು. ಮೂವತ್ತು ದಿನಗಳ ರಂಜಾನ್ ಉಪವಾಸವನ್ನು ಕಟ್ಟುನಿಟ್ಟಾಗಿ ಪಾಲಿಸಿದ ಮುಸ್ಲೀಮರು … Read more

ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಆರೋಪಿ ಬಂಧನ

ವಿಜಯ ದರ್ಪಣ ನ್ಯೂಸ್…. ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಆರೋಪಿ ಬಂಧನ ವಿಜಯಪುರ ,ದೇವನಹಳ್ಳಿ ತಾಲ್ಲೂಕು : ಮಹಿಳೆಯ ಕುತ್ತಿಗೆಯಿಂದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಆರೋಪಿಯನ್ನು ವಿಜಯಪುರ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಡಿ.ಜೆ ಹಳ್ಳಿಯ ಆರೀಪ್ ಖಾನ್ (25) ಬಂಧಿತ ಆರೋಪಿ.ಪದ್ಮಾವತಿ ಎಂಬ ಮಹಿಳೆ ಮಾ.17 ರಂದು ಚಿಕ್ಕಬಳ್ಳಾಪುರ-ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಹೆದ್ದಾರಿ ಸಂಪರ್ಕಿಸುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಆರೋಪಿ ಹಿಂದಿನಿಂದ … Read more

ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯ ಆರ್ಭಟ :ರೈತರ ಬೆಳೆಗಳಿಗೆ ಭಾರೀ ಹಾನಿ

ವಿಜಯ ದರ್ಪಣ ನ್ಯೂಸ್….. ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯ ಆರ್ಭಟ :ರೈತರ ಬೆಳೆಗಳಿಗೆ ಭಾರೀ ಹಾನಿ ಶಿಡ್ಲಘಟ್ಟ : ತಾಲ್ಲೂಕಿನಲ್ಲಿ ಇತ್ತೀಚೆಗೆ ಸುರಿದ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಸುರಿದ ಮಳೆಯ ಪರಿಣಾಮವಾಗಿ ರೈತರ ಹಲವಾರು ಬೆಳೆಗಳಿಗೆ ಭಾರೀ ಹಾನಿಯಾಗಿದೆ. ಬೇಸಿಗೆ ಅವಧಿಯಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆ ಹಾಗೂ ಗುಡುಗು ,ಸಿಡಿಲು, ಬಿರುಗಾಳಿಯಿಂದಾಗಿ ಹಲವು ಗ್ರಾಮಗಳಲ್ಲಿ ಬೆಳೆಗಳು ನೆಲಕಚ್ಚಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲ್ಲೂಕಿನ ಗಂಗಾಪುರ, ಎಸ್.ದೇವಗಾನಹಳ್ಳಿ, ಯರ್ರ ನಾಗೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ … Read more

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ವಿಜಯ ದರ್ಪಣ ನ್ಯೂಸ್…… ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ…… ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ, ಅವರ ಪ್ರತಿಷ್ಠೆಗಾಗಿ, ಪ್ರಜಾಪ್ರಭುತ್ವದ ಹೆಸರಿನಲ್ಲಿ ಮತದಾನ ಮಾಡಬೇಕು. ಅವರನ್ನು ನಮ್ಮ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು. ಇವರುಗಳನ್ನು ಹೊರತುಪಡಿಸಿ ನಮ್ಮಲ್ಲಿ ಮತ್ಯಾರಿಗೂ ಸ್ಪರ್ಧಿಸುವ ಸಾಮರ್ಥ್ಯವೂ ಇಲ್ಲ, ಅವಕಾಶ ಇಲ್ಲ. ಏಕೆಂದರೆ ಇದು ಪ್ರಜಾಪ್ರಭುತ್ವ !!!!!! ಇಡೀ ಆಡಳಿತ ವ್ಯವಸ್ಥೆ, ಬಹುತೇಕ ಎಲ್ಲಾ ಮಂತ್ರಿಗಳು, ಶಾಸಕರು, … Read more

ಪಾಲೀಶ್ ಮಾಡಿಕೊಡುವ ನೆಪದಲ್ಲಿ, 30 ಗ್ರಾಂ ಚಿನ್ನ ಕದ್ದ ಕಳ್ಳರು.

ವಿಜಯ ದರ್ಪಣ ನ್ಯೂಸ್…… ಪಾಲೀಶ್ ಮಾಡಿಕೊಡುವ ನೆಪದಲ್ಲಿ, 30 ಗ್ರಾಂ ಚಿನ್ನ ಕದ್ದ ಕಳ್ಳರು. ವಿಜಯಪುರ: ಪಾಲೀಶ್ ಮಾಡಿಕೊಡುವ ನೆಪದಲ್ಲಿ, ಬಂದಿದ್ದ ಕಳ್ಳರು, ಪಾತ್ರೆಗಳು, ಬೆಳ್ಳಿ ಚೈನುಗಳನ್ನು ಪಾಲೀಶ್ ಮಾಡಿಕೊಟ್ಟು, ಪಾಲೀಶ್ ಗಾಗಿ ಕೊಟ್ಟ 30 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಪಟ್ಟಣದ 17 ನೇ ವಾರ್ಡಿನ ಪಂಚಮುಖಿ ಗಣಪತಿ ದೇವಾಲಯದ ರಸ್ತೆಯಲ್ಲಿರುವ ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಬಂದಿರುವ ಕಳ್ಳರು, ಮೊದಲಿಗೆ, ನಿಮ್ಮ ಮನೆಯಲ್ಲಿನ ಪಾತ್ರೆಗಳನ್ನು ಸುಲಭವಾಗಿ ತೊಳೆಯುವ ಪೌಡರ್ … Read more

ವಿಜೃಂಭಣೆಯಿಂದ ನಡೆದ ಶ್ರೀರೇಣುಕಾ ಯಲ್ಲಮ್ಮದೇವಿಯ ಹಸಿ ಕರಗ 

ವಿಜಯ ದರ್ಪಣ ನ್ಯೂಸ್….. ವಿಜೃಂಭಣೆಯಿಂದ ನಡೆದ ಶ್ರೀರೇಣುಕಾ ಯಲ್ಲಮ್ಮದೇವಿಯ ಹಸಿ ಕರಗ  ಶಿಡ್ಲಘಟ್ಟ : ನಗರದ ಶ್ರೀರೇಣುಕಾ ಯಲ್ಲಮ್ಮದೇವಿಯ ಕರಗವು ಯುಗಾದಿಯ ದಿನದಂದು ಧ್ವಜಾರೋಹಣದಿಂದ ಆರಂಭವಾಗಿ ಆರುದಿನಗಳ ಕಾಲ ಅನೇಕ ಪೂಜಾ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ ಯುಗಾದಿಯ ದಿನ ರಾತ್ರಿ ನಡೆದ ಹಸಿಕರಗದ ರಚನೆ ಬಹು ಕಟ್ಟುನಿಟ್ಟಾದ ಹಾಗೂ ಸಂಪ್ರದಾಯಬದ್ಧವಾಗಿ ಆಚರಣೆ ಮಾಡಲಾಯಿತು. ನಗರದ ಶ್ರೀರೇಣುಕಾ ಯಲ್ಲಮ್ಮದೇವಿಯ ಹಸಿ ಕರಗವು ರಾತ್ರಿ ವಿಜೃಂಭಣೆಯಿಂದ ನಡೆಯಿತು. ಕರಗ ಹೊತ್ತು ನಡೆಯುವ ವ್ಯಕ್ತಿಗೆ ವಪನ ಸಂಸ್ಕಾರ ಮಾಡಿ, ಕಂಕಣ ಕಟ್ಟಿ, ಕೈತುಂಬ … Read more

ನಾವು ಮನುಜರು…..

ವಿಜಯ ದರ್ಪಣ ನ್ಯೂಸ್…. ನಾವು ಮನುಜರು….. ಶಾಂತಿ, ಸೌಹಾರ್ದತೆ, ಭಾವೈಕ್ಯತೆ, ದೇಹ ಮತ್ತು ಮನಸ್ಸಿನ ಶುದ್ಧೀಕರಣದ ಸಂಕೇತವಾದ ರಂಜಾನ್ ಸಂದರ್ಭದಲ್ಲಿ ಶುಭಾಶಯಗಳನ್ನು ಹೇಳುತ್ತಾ……. ನಮಗೆ ರಂಜಾನ್ ನಿಮಗೆ ಯುಗಾದಿ, ನಾವು ಪ್ರಾರ್ಥಿಸುತ್ತೇವೆ ನೀವು ಪೂಜಿಸುತ್ತೀರಿ, ನಾವು ಏಕದೇವತಾರಾಧಕರು ನೀವು ಬಹುದೇವತಾರಾಧಕರು, ನಾವು ಅಲ್ಲಾ ಎನ್ನುತ್ತೇವೆ ನೀವು ರಾಮ ಕೃಷ್ಣ ಎನ್ನುತ್ತೀರಿ, ನಾವು ಖುರ್ಬಾನೀಕ ಮೀಠ, ಮಾಂಸ ತಿನ್ನುತ್ತೇವೆ ನೀವೂ ಹೋಳಿಗೆ, ಮಾಂಸ ತಿನ್ನುತ್ತೀರಿ, ನಾವು ಹೊಸ ಬಟ್ಟೆ ತೊಡುತ್ತೇವೆ ನೀವೂ ಹೊಸ ಬಟ್ಟೆ ತೊಡುತ್ತೀರಿ, ನಮಗೂ ಹಬ್ಬದ … Read more

ಆರ್ಥಿಕತೆ ಬೆಳವಣಿಗೆಯಲ್ಲಿ ಕಾರ್ಪೋರೆಟ್ ಕಂಪನಿ ಪಾತ್ರ ಅಪಾರ: ಶಾಸಕ ಜಿ ಟಿ ದೇವೇಗೌಡ

ವಿಜಯ ದರ್ಪಣ ನ್ಯೂಸ್….. ಆರ್ಥಿಕತೆ ಬೆಳವಣಿಗೆಯಲ್ಲಿ ಕಾರ್ಪೋರೆಟ್ ಕಂಪನಿ ಪಾತ್ರ ಅಪಾರ: ಶಾಸಕ ಜಿ ಟಿ ದೇವೇಗೌಡ ತಾಂಡವಪುರ ಮಾರ್ಚ್ 20: ದೇಶದ ಆರ್ಥಿಕತೆ ಬೆಳವಣಿಗೆಯಲ್ಲಿ ಕಾರ್ಪೋರೆಟ್ ಕಂಪನಿಗಳ ಕಾರ್ಯದರ್ಶಿಗಳ ಪಾತ್ರ ಮಹತ್ವದಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಕೆಆರ್‌ಎಸ್ ರಸ್ತೆಯಲ್ಲಿರುವ ಐಸಿಎಸ್‌ಐ-ಮೈಸೂರು ಘಟಕದಲ್ಲಿ ದಿ ಇನ್‌ಸ್ಟಿಟ್ಯೂಷನ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾವತಿಯಿಂದ ನಡೆದ ‘ಕಾರ್ಪೋರೆಟ್ ಲಾ-೩೬೦’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಂಪನಿಗಳ ಕಾನೂನುಗಳ ಪಾಲನೆ ಮತ್ತು ಇನ್ನಿತರ ಮಹತ್ವದ ವಿಚಾರವಾಗಿ ಆಯೋಜಿಸಿರುವ ಈ … Read more

ವಿಜೃಂಭಣೆಯಿಂದ ನಡೆದ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಓಕುಳಿ ಉತ್ಸವ 

ವಿಜಯ ದರ್ಪಣ ನ್ಯೂಸ್…… ವಿಜೃಂಭಣೆಯಿಂದ ನಡೆದ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಓಕುಳಿ ಉತ್ಸವ  ತಾಂಡವಪುರ ಮಾರ್ಚ್ 20 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಿಕ್ಕಯ್ಯನ ಛತ್ರ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಯುಗಾದಿ ಓಕುಳಿ ಉತ್ಸವವು ಬಹಳ ವಿಜೃಂಭಣೆ ಜರುಗಿತು. ಯುಗಾದಿ ಹಬ್ಬದ ಪ್ರಯುಕ್ತ ಇಂದು … Read more

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ. 20: ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸರ್ಕಾರದ ವಿಶೇಷ ಮಾನಿಟರ್ ಆಗಿರುವ ಉಮಾಕಾಂತ್ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ದೇವನಹಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಇವರ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಗಳ … Read more