ಉತ್ತಮ ಶಿಕ್ಷಣದ ಜೊತೆಗೆ ಸಮಾಜಕ್ಕೆ ಪರೋಪಕಾರಿಯಾಗಿ ಇರುವುದು ಪ್ರತಿ ಪ್ರಜೆಯ ಜವಾಬ್ದಾರಿ: ಕುಲಪತಿ ಡಾ.ಬಿ.ಕೆ.ರವಿ 

ವಿಜಯ ದರ್ಪಣ ನ್ಯೂಸ್…. ಉತ್ತಮ ಶಿಕ್ಷಣದ ಜೊತೆಗೆ ಸಮಾಜಕ್ಕೆ ಪರೋಪಕಾರಿಯಾಗಿ ಇರುವುದು ಪ್ರತಿ ಪ್ರಜೆಯ ಜವಾಬ್ದಾರಿ: ಕುಲಪತಿ ಡಾ.ಬಿ.ಕೆ.ರವಿ  ಶಿಡ್ಲಘಟ್ಟ : ಉತ್ತಮ ಶಿಕ್ಷಣ ಪಡೆದು ಉದ್ಯೋಗ ಹಿಡಿಯುವುದೇ ಜೀವನದ ಗುರಿ ಅಲ್ಲ ಸಮಾಜಮುಖಿ ವ್ಯಕ್ತಿತ್ವ ರೂಢಿಸಿಕೊಂಡು, ಸಮಾಜಕ್ಕೆ ಪರೋಪಕಾರಿಯಾಗಿ ಇರುವುದು ಪ್ರತಿ ಪ್ರಜೆಯ ಜವಾಬ್ದಾರಿ ಎಂದು ಬೆಂಗಳೂರು ಉತ್ತರ ವಿವಿ ಕುಲಪತಿ ಡಾ.ಬಿ.ಕೆ.ರವಿ ತಿಳಿಸಿದರು. ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೋಪಾಲನ್ ಕಾಲೇಜ್ ಆಫ್ ಕಾಮರ್ಸ್, ಬೆಂಗಳೂರು ಉತ್ತರ ವಿವಿ ಸಹಯೋಗದಲ್ಲಿ … Read more

ಭಾರತೀಯ ಮಹಿಳಾ ಲೀಗ್ 2 ರಲ್ಲಿ ಬಿ ಎಲ್ ಕೆ ರೂಟ್ಸ್ ಎಫ್.ಸಿ ಭಾಗವಹಿಸುವಿಕೆ, ಭವಿಷ್ಯದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ

ವಿಜಯ ದರ್ಪಣ ನ್ಯೂಸ್….. ಭಾರತೀಯ ಮಹಿಳಾ ಲೀಗ್ 2 ರಲ್ಲಿ ಬಿ ಎಲ್ ಕೆ ರೂಟ್ಸ್ ಎಫ್.ಸಿ ಭಾಗವಹಿಸುವಿಕೆ, ಭವಿಷ್ಯದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ಬೆಂಗಳೂರು, ಏಪ್ರಿಲ್ 17 , 2026: ಸ್ಪರ್ಧಾತ್ಮಕ ಮಾನ್ಯತೆ ಪಡೆಯಲು ಮತ್ತು ಭಾರತದಲ್ಲಿ ಮಹಿಳಾ ಫುಟ್ಬಾಲ್ ಪ್ರತಿಭೆಗಳನ್ನು ಪೋಷಿಸುವ ತನ್ನ ಬದ್ಧತೆ ರೂಪವಾಗಿ ಬಿ ಎಲ್ ಕೆ ರೂಟ್ಸ್ ಎಫ್.ಸಿ ಭಾರತೀಯ ಮಹಿಳಾ ಲೀಗ್ 2 ರಲ್ಲಿ ಭಾಗವಹಿಸುವ ಮೂಲಕ ವೇದಿಕೆಯನ್ನು ಉತ್ತಮವಾಗಿ ಬಳಸಿಕೊಂಡಿತು. ಕರ್ನಾಟಕ, ಮಣಿಪುರ, ಹರಿಯಾಣ, ಮೇಘಾಲಯ, ಪಶ್ಚಿಮ … Read more

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್….. ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ ಬೆಂಗಳೂರು, ಏಪ್ರಿಲ್ 16 : ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ … Read more

ಲವ್ ಜಿಹಾದ್……. ಪ್ರೀತಿ – ಪ್ರೇಮದ ಧರ್ಮ ಯುದ್ಧ….. ಒಂದು ಆತ್ಮಾವಲೋಕನ,…..

ವಿಜಯ ದರ್ಪಣ ನ್ಯೂಸ್…. ಲವ್ ಜಿಹಾದ್……. ಪ್ರೀತಿ – ಪ್ರೇಮದ ಧರ್ಮ ಯುದ್ಧ….. ಒಂದು ಆತ್ಮಾವಲೋಕನ,….. ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ, ದುಷ್ಟ ಸಮಾಜ ನಿರ್ಮಾಣವಾಗದಿರಲಿ, ಹಾಗೆಯೇ ಪ್ರೀತಿಯ ಮುಗ್ಧತೆ ಧರ್ಮದ ಹೆಸರಿನಲ್ಲಿ ನಾಶವಾಗದಿರಲಿ…… ಈಗಿನ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಟಿಸಿಎಸ್ ಕಂಪನಿಯ ಲವ್ ಜಿಹಾದ್ ಪ್ರಕರಣ, ಹಾಗೆಯೇ ಕರ್ನಾಟಕದ ಹುಬ್ಬಳ್ಳಿ ಸೇರಿ ಕೆಲವು ಜಿಲ್ಲೆಗಳ ಘಟನೆಗಳು, ಕೇರಳ ಸೇರಿ ಕೆಲವು ರಾಜ್ಯಗಳ ಕಡೆ ಒಂದಷ್ಟು ಪ್ರಕರಣಗಳು ಹೀಗೆ ಆಗಾಗ ಸುದ್ದಿಗಳು ಬರುತ್ತಿರುತ್ತವೆ. ಲವ್ … Read more

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ತಾಂಡವಪುರ ಏಪ್ರಿಲ್ 16 ಮೈಸೂರು ಜಿಲ್ಲೆಯ: ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗ್ರಾಮ ಪಂಚಾಯತಿ ನೌಕರರ ಬೇಡಿಕೆ ಈಡೇರಿಕೆಗೆ ನಿರಂತರವಾಗಿ ಹೋರಾಟ ನಡೆಯುತ್ತಲೇ ಇದೆ. ಆದರೆ, ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ. ಕಳೆದ ಡಿ.೨೨ರಂದು ಸಂಘಟನೆಯ ಮುಖಂಡರ ಸಭೆ ಕರೆದು ಬೇಡಿಕೆ ಈಡೇರಿಕೆಯ … Read more

ತುಟಿಭತ್ಯೆ ತಡೆ ಖಂಡಿಸಿ ಬಿಎಸ್‌ಎನ್‌ಎಲ್‌ ಪಿಂಚಣಿದಾರರ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ತುಟಿಭತ್ಯೆ ತಡೆ ಖಂಡಿಸಿ ಬಿಎಸ್‌ಎನ್‌ಎಲ್‌ ಪಿಂಚಣಿದಾರರ ಪ್ರತಿಭಟನೆ ತಾಂಡವಪುರ ಏಪ್ರಿಲ್ 16 ಮೈಸೂರಿನಲ್ಲಿ ಕೇಂದ್ರ ಸರ್ಕಾರ ಬಿಎಸ್‌ಎನ್‌ಎಲ್ ಪಿಂಚಣಿದಾರರಿಗೆ ಜ.೧ರಿಂದ ಕೊಡಬೇಕಿರುವ ತುಟ್ಟಿ ಭತ್ಯೆ ತಡೆ ಹಿಡಿದಿರುವುದನ್ನು ಖಂಡಿಸಿ ಬಿಎಸ್‌ಎನ್‌ಎಲ್ ಪಿಂಚಣಿದಾರ ಜಂಟಿ ವೇದಿಕೆವತಿಯಿಂದ ಜಯಲಕ್ಷ್ಮಿಪುರಂನಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ತುಟ್ಟಿ ಭತ್ಯೆ ತಡೆ ಹಿಡಿದಿರುವ ಕ್ರಮ ನಿರಾಧಾರ, ಅರ್ಥಹೀನ ಮತ್ತು ಅಸಂಬದ್ಧ. ಡಿಒಟಿ ಸೇವೆಯಿಂದ ಬಿಎಸ್‌ಎನ್‌ಎಲ್‌ಗೆ ಅಭಿಯುಕ್ತಿಗೊಂಡ ನೌಕರರನ್ನು ನಿವೃತ್ತಿಯ ನಂತರ ಕೇಂದ್ರ ಸರ್ಕಾರದ ಪಿಂಚಣಿದಾರರೆಂದು ಪರಿಗಣಿಸುವುದಾಗಿ ಬಿಎಸ್‌ಎನ್‌ಎಲ್ … Read more

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಎಣಿಕೆ

ವಿಜಯ ದರ್ಪಣ ನ್ಯೂಸ್…. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ತಾಂಡವಪುರ ಏಪ್ರಿಲ್ 16 ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದಲ್ಲಿ ದಾಸೋಹ ಭವನದಲ್ಲಿ ಹುಂಡಿ ಎಣಿಕೆ ನಡೆಯಿತು. 2 ಕೋಟಿ 11 ಲಕ್ಷ 49, ಸಾವಿರ ಹಣ ಸಂಗ್ರಹವಾಗಿದೆ ಮತ್ತು ಎರಡುವರೆ ಕೆಜಿ ಬೆಳ್ಳಿ 58 ಗ್ರಾಂ ಚಿನ್ನ ಸೇರಿದಂತೆ : 46 ವಿದೇಶಿ ಕರೆನ್ಸಿಗಳು ದೊರೆತಿದೆ ಎಂದು ದೇವಾಲಯದ ಕಾರ್ಯನಿರ್ವಾಧಿಕಾರಿ ಕೃಷ್ಣ ತಿಳಿಸಿದ್ದಾರೆ ಏಣಿಕೆ ಕಾರ್ಯದಲ್ಲಿ ಬ್ಯಾಂಕ್ ಆಫ್ … Read more

ಸಾಂಸ್ಕೃತಿಕ ಕಲೆಗಳು ಮರೆಯಾಗುತ್ತಿರುವ ದಿನಗಳಲ್ಲಿ ಮತ್ತೆ ಕೋಲಾಟ ಕಲೆ ಮರುಕಳಿಸಿದೆ 

ವಿಜಯ ದರ್ಪಣ ನ್ಯೂಸ್….. ಸಾಂಸ್ಕೃತಿಕ ಕಲೆಗಳು ಮರೆಯಾಗುತ್ತಿರುವ ದಿನಗಳಲ್ಲಿ ಮತ್ತೆ ಕೋಲಾಟ ಕಲೆ ಮರುಕಳಿಸಿದೆ  ಶಿಡ್ಲಘಟ್ಟ : ಗ್ರಾಮಗಳಲ್ಲಿ ಸಾಂಸ್ಕೃತಿಕ ಕಲೆಗಳು ಮರೆಯಾಗುತ್ತಿರುವ ದಿನಗಳಲ್ಲಿ ಮತ್ತೆ ನಮ್ಮ ಗ್ರಾಮದಲ್ಲಿ ಕೋಲಾಟ ಕಲೆ ಮರುಕಳಿಸಿದೆ ನಾನು ಸಹ ಅವರೊಂದಿಗೆ ಕೋಲಾಟ ಕಲಿತು ಪ್ರದರ್ಶನ ನೀಡಿದ್ದು ಸಂತಸದ ಸಂಗತಿಯಾಗಿದೆ ಎಂದು ಜನಪದ ಕಲಾವಿದ ಈಧರೆ ಪ್ರಕಾಶ್‌ ತಿಳಿಸಿದರು. ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ 13ನೇ ವರ್ಷದ ಶ್ರೀಭಕ್ತಾಂಜನೇಯಸ್ವಾಮಿ ದೇವಾಲಯದ ವಾರ್ಷಿಕೋತ್ಸವದಲ್ಲಿ ವರದನಾಯಕನಹಳ್ಳಿ, ಹನುಮಂತಪುರ, ಶಿಡ್ಲಘಟ್ಟ ಮತ್ತು ಚೀಮನಹಳ್ಳಿಗೆ ಸೇರಿದ ಸುಮಾರು ಇಪ್ಪತ್ತು … Read more

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ 9 ಮಂದಿ ಅವಿರೋಧವಾಗಿ ಆಯ್ಕೆ

ವಿಜಯ ದರ್ಪಣ ನ್ಯೂಸ್….. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ 9 ಮಂದಿ ಅವಿರೋಧವಾಗಿ ಆಯ್ಕೆ ಶಿಡ್ಲಘಟ್ಟ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿಡ್ಲಘಟ್ಟ ತಾಲ್ಲೂಕು ಶಾಖೆಯ 2026-31 ರ ಅವಧಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ಏ-19 ರಂದು ನಿಗಧಿಯಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಒಟ್ಟು 27 ಮಂದಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಏ-14 ರಂದು … Read more

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು…… ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ…….

ವಿಜಯ ದರ್ಪಣ ನ್ಯೂಸ್…… ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು…… ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ……. ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ….. ಇಸ್ರೇಲ್ ತನ್ನ ಭದ್ರತೆ ಮತ್ತು ರಕ್ಷಣೆಯ ನೆಪವೊಡ್ಡಿ ಇಡೀ ವಿಶ್ವಕ್ಕೆ ಬೆಂಕಿ ಹಾಕುತ್ತಿದೆ. ತನ್ನ ವಿರೋಧಿಗಳನ್ನೆಲ್ಲಾ ಸರ್ವನಾಶ ಮಾಡಿ ತಾನು ಮಾತ್ರ ಅತ್ಯಂತ ಸುರಕ್ಷಿತವಾಗಿ ಇರಬೇಕು ಎನ್ನುವ ಸ್ವಾರ್ಥ ಮತ್ತು ಮಹತ್ವಕಾಂಕ್ಷೆ ಹೊಂದಿದೆ. ಅಂದರೆ ಸುಮಾರು ಒಂದು ಕೋಟಿ ಜನರ ಹಿತಕ್ಕಾಗಿ ಉಳಿದ ಸುಮಾರು 699 ಕೋಟಿ … Read more