ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಪ್ರಭು.

ವಿಜಯ ದರ್ಪಣ ನ್ಯೂಸ್….. ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಪ್ರಭು ಶಿಡ್ಲಘಟ್ಟ : ಜಿಲ್ಲಾದ್ಯಂತ ಸುಮಾರು 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡುವ ಗುರಿ ಹೊಂದಲಾಗಿದ್ದು ಈ ಹಿನ್ನೆಲೆಯಲ್ಲಿ ಸರ್ವೆಯರ್ ಗಳು, ಗ್ರಾಮ ಆಡಳಿತಾಧಿಕಾರಿಗಳು, ತಹಸೀಲ್ದಾರ್ ಗಳು ಹಾಗೂ ಪಿಡಿಒಗಳಿಗೆ ಒಂದೇ ವೇದಿಕೆಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ನಡೆದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ … Read more

ವಿಕಾಸ ಸೌಧದಲ್ಲಿ  ನಡೆದ ಕೆ ಆರ್ ಎಸ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ 

ವಿಜಯ ದರ್ಪಣ ನ್ಯೂಸ್…. ವಿಕಾಸ ಸೌಧದಲ್ಲಿ  ನಡೆದ ಕೆ ಆರ್ ಎಸ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ  ತಾಂಡವಪುರ ಆಗಸ್ಟ್ 19 ಬೆಂಗಳೂರಿನವಿಕಾಸಸೌಧದಲ್ಲಿ ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯ 2026-27ನೇ ಸಾಲಿನ ಮೊದಲ ಸಭೆ ನಡೆಯಿತು ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರ ಅಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಶಾಸಕರಾದ … Read more

ದೇಶದ ಅಖಂಡತೆಗಾಗಿ ರಾಜೀವ್ ಗಾಂಧಿ, ರಾಜ್ಯದ ಅಭಿವೃದ್ಧಿಗೆ ದೇವರಾಜ ಅರಸು ಕೊಡುಗೆ ಅಪಾರ :ಎಂ.ಕೆ.ಸೋಮಶೇಖರ್.

ವಿಜಯ ದರ್ಪಣ ನ್ಯೂಸ್…. ದೇಶದ ಅಖಂಡತೆಗಾಗಿ ರಾಜೀವ್ ಗಾಂಧಿ, ರಾಜ್ಯದ ಅಭಿವೃದ್ಧಿಗೆ ದೇವರಾಜ ಅರಸು ಕೊಡುಗೆ ಅಪಾರ :ಎಂ.ಕೆ.ಸೋಮಶೇಖರ್ ತಾಂಡವಪುರ ಆಗಸ್ಟ್ 20 ಮೈಸೂರು ಜಿಲ್ಲಾ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ನಗರ ಕಾಂಗ್ರೆಸ್ ಘಟಕ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದ ವತಿಯಿಂದ ದೇಶ ಕಂಡ ಅಪ್ರತಿಮ ನಾಯಕ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹಾಗೂ ರಾಜ್ಯ ಕಂಡಂತಹ ಧೀಮಂತ ರಾಜಕಾರಣಿ,ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಜಯಂತಿಯನ್ನು ಆಚರಿಸಲಾಯಿತು. ಬಳಿಕ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಅವರು … Read more

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

ವಿಜಯ ದರ್ಪಣ ನ್ಯೂಸ್….. ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ ತಾಂಡವಪುರ ಆಗಸ್ಟ್ 20 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣಾ ವಿಧಾನಸಭಾ ಕ್ಷೇತ್ರ ತಾಂಡವಪುರ ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಗ್ರಾಮದಲ್ಲಿ ಸದ್ಭಾವನ ದಿನ ಆಚರಿಸಲಾಯಿತು ಸದ್ಭಾವನ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಸದ್ಭಾವನ ದಿನದ ವಿಧಿ ವಿಧಾನಗಳನ್ನು … Read more

ವಿಶ್ವ ಛಾಯಾಗ್ರಹಣ ದಿನಾಚರಣೆ: ಜಿಲ್ಲಾ ಪತ್ರಕರ್ತರ ಸಂಘದಿಂದ ಅರ್ಥಪೂರ್ಣ ಆಚರಣೆ

ವಿಜಯ ದರ್ಪಣ ನ್ಯೂಸ್…. ವಿಶ್ವ ಛಾಯಾಗ್ರಹಣ ದಿನಾಚರಣೆ: ಜಿಲ್ಲಾ ಪತ್ರಕರ್ತರ ಸಂಘದಿಂದ ಅರ್ಥಪೂರ್ಣ ಆಚರಣೆ ತಾಂಡವಪುರ ಆಗಸ್ಟ್ 19: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಕರ್ಷಕ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ, ಹಿರಿಯ ಛಾಯಾಗ್ರಾಹಕರಿಗೆ ಅಭಿನಂದಿಸುವ ಮೂಲಕ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಮೈಸೂರು ನಗರಪಾಲಿಕೆಯ ಆಯುಕ್ತರಾದ ಕೆ.ಎಂ.ಸವಿತಾ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮೈಸೂರು ನಗರವನ್ನು ಸ್ವಚ್ಛ, ಸುಂದರ, ಆರೋಗ್ಯಕರ … Read more

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

ವಿಜಯ ದರ್ಪಣ ನ್ಯೂಸ್….. ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ ತಾಂಡವಪುರ ಆಗಸ್ಟ್ 19 ಮೈಸೂರು ಜಿಲ್ಲೆ, ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ 28 ದಿನಗಳ 26 ಹುಂಡಿ ಎಣಿಕೆ ಕಾರ್ಯದಲ್ಲಿ 99 ಲಕ್ಷ 4,500 ಸಂಗ್ರಹವಾಗಿದೆ . ಜೊತೆಗೆ ಚಿನ್ನ10 ಗ್ರಾಂ 900 ಮಿಲಿ ಬೆಳ್ಳಿ 950 ಗ್ರಾಂ ಸೇರಿದಂತೆ ವಿದೇಶಿ ಕರೆನ್ಸಿಗಳು ದೊರೆತಿವೆ ಎಣಿಕೆ ಕಾರ್ಯದಲ್ಲಿ ಶ್ರೀಕಂಠೇಶ್ವರ ದೇವಾಲಯದ ಕಾರ್ಯನಿರ್ವಾಧಕಾರಿ ಕೃಷ್ಣ ದೇವಾಲಯದ ವ್ಯವಸ್ಥಾಪನ ಸಮಿತಿಯ ಸಮಿತಿ … Read more

ಡಿ.ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ: ಡಿಸಿ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…… ಡಿ. ದೇವರಾಜ ಅರಸು ಅವರ 111 ನೇ ಜನ್ಮದಿನಾಚರಣೆ ಡಿ.ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ: ಡಿಸಿ ಡಾ. ಕೆ.ಎನ್ ಅನುರಾಧ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್,20: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಡಿ. ದೇವರಾಜ ಅರಸು … Read more

ಧಾರ್ಮಿಕ ಭಾವನೆಗಳಿಗೆ ಗೌರವ ನೀಡೋಣ

ವಿಜಯ ದರ್ಪಣ ನ್ಯೂಸ್…. ಧಾರ್ಮಿಕ ಭಾವನೆಗಳಿಗೆ ಗೌರವ ನೀಡೋಣ ಕೊಡಗು ಜನ ಅಭಿವೃದ್ಧಿ ಸಮಿತಿಯಿಂದ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಒಂದು ಸಣ್ಣ ಮನವಿ ಮಾಡಿದೆ. ವ್ಯಾಪಾರದ ಜಾಹೀರಾತು ಪತ್ರಿಕೆಗಳು ಕರಪತ್ರಗಳು ಹಾಗೂ ಆಹ್ವಾನ ಪತ್ರಿಕೆಗಳಲ್ಲಿ ದೇವರುಗಳ ಚಿತ್ರಗಳನ್ನು ಮುದ್ರಿಸುವುದು ಸಾಮಾನ್ಯವಾಗಿದೆ. ಆದರೆ ಅಂತಹ ಪತ್ರಿಕೆಗಳನ್ನು ವಿತರಿಸಿದ ನಂತರ ಅವು ರಸ್ತೆಯಲ್ಲಿbಚರಂಡಿಯಲ್ಲಿ ಕಸದ ರಾಶಿಯಲ್ಲಿ ಅಥವಾ ಮನೆಗಳ ಕಾಂಪೌಂಡ್‌ಗಳಲ್ಲಿ ಬಿದ್ದಿರುವುದು ಕಂಡುಬರುತ್ತದೆ ದೇವರು ಯಾವುದೇ ಧರ್ಮಕ್ಕೆ ಸೇರಿದವರಾಗಿರಲಿ ಪ್ರತಿಯೊಬ್ಬರ ಧಾರ್ಮಿಕ ನಂಬಿಕೆ ಮತ್ತು ಭಾವನೆಗಳಿಗೆ ಗೌರವ ನೀಡುವುದು ನಮ್ಮೆಲ್ಲರ … Read more

ಅಪೋಲೋ ಹಾಸ್ಪಿಟಲ್ಸ್‌ ನಿಂದ ‘ಆಲ್ವೇಸ್ ಓಪನ್. ಆಲ್ವೇಸ್ ಹಿಯರ್’ ಭಾರತದಿಂದ ಜಾಗತಿಕ ಆರೋಗ್ಯಸೇವೆಯಲ್ಲಿ ಪ್ರಥಮ ಉಪಕ್ರಮ ಅಪೋಲೋ ಹಾಸ್ಪಿಟಲ್ಸ್‌ ಗಳಾದ್ಯಂತ ಭಾನುವಾರದಂದೂ ವೈದ್ಯಕೀಯ ಸಮಾಲೋಚನೆಗಳು, ರೋಗನಿರ್ಣಯ ಪರೀಕ್ಷೆಗಳು, ರೋಗತಡೆಯ ಆರೋಗ್ಯ ತಪಾಸಣೆಗಳು ಮತ್ತು ನಿಗದಿತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವ ತನ್ನ ಮೊದಲ ಉಪಕ್ರಮ ಪ್ರಾರಂಭಿಸಿದೆ

ವಿಜಯ ದರ್ಪಣ ನ್ಯೂಸ್… ಅಪೋಲೋ ಹಾಸ್ಪಿಟಲ್ಸ್‌ ನಿಂದ ‘ಆಲ್ವೇಸ್ ಓಪನ್. ಆಲ್ವೇಸ್ ಹಿಯರ್’ ಭಾರತದಿಂದ ಜಾಗತಿಕ ಆರೋಗ್ಯಸೇವೆಯಲ್ಲಿ ಪ್ರಥಮ ಉಪಕ್ರಮ ಅಪೋಲೋ ಹಾಸ್ಪಿಟಲ್ಸ್‌ ಗಳಾದ್ಯಂತ ಭಾನುವಾರದಂದೂ ವೈದ್ಯಕೀಯ ಸಮಾಲೋಚನೆಗಳು, ರೋಗನಿರ್ಣಯ ಪರೀಕ್ಷೆಗಳು, ರೋಗತಡೆಯ ಆರೋಗ್ಯ ತಪಾಸಣೆಗಳು ಮತ್ತು ನಿಗದಿತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವ ತನ್ನ ಮೊದಲ ಉಪಕ್ರಮ ಪ್ರಾರಂಭಿಸಿದೆ ನವದೆಹಲಿ, ಆಗಸ್ಟ್ 18, 2026: ಅಪೋಲೋ ಹಾಸ್ಪಿಟಲ್ಸ್ ಇಂದು ‘ಆಲ್ವೇಸ್ ಓಪನ್. ಆಲ್ವೇಸ್ ಹಿಯರ್(ಸದಾ ತೆರೆದಿರುತ್ತೇವೆ, ಸದಾ ಇಲ್ಲಿರುತ್ತೇವೆ’ ಎಂಬ ವಿನೂತನ ಉಪಕ್ರಮವನ್ನು ಪ್ರಾರಂಭಿಸಿದೆ. ಇದು ಭಾನುವಾರ … Read more

ಚಿಕ್ಕದಾಸರಹಳ್ಳಿ ಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಕಳವು

ವಿಜಯ ದರ್ಪಣ ನ್ಯೂಸ್… ಚಿಕ್ಕದಾಸರಹಳ್ಳಿ ಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಕಳವು  ಶಿಡ್ಲಘಟ್ಟ : ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಬಾಗಿಲು ಮುರಿದು ಒಳನುಗ್ಗಿದ ಖತರ್ನಾಕ್ ಕಳ್ಳರು, ಹುಂಡಿಯಲ್ಲಿದ್ದ 50 ಸಾವಿರ ರೂ.ಗಳಿಗು ಅಧಿಕ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕದಾಸರಹಳ್ಳಿ ಗ್ರಾಮದ ಗುಡ್ಡದ ಮೇಲಿರುವ ಶ್ರೀಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ನಡೆದಿದೆ. ರಾತ್ರಿ ವೇಳೆ ದೇವಾಲಯಕ್ಕೆ ನುಗ್ಗಿರುವ ಕಳ್ಳರು, ಮೊದಲು ದೇವಾಲಯದ ಬಾಗಿಲನ್ನು ಮುರಿದು ಒಳ ಪ್ರವೇಶಿಸಿದ್ದಾರೆ ಬಳಿಕ ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. … Read more